ರಜೆಗೆ ಬಂದ ಯೋಧನಿಗೆ ಕೋವಿಡ್
Team Udayavani, Jul 5, 2020, 1:42 PM IST
ಖಾನಾಪುರ: ರಜೆ ಮೇಲೆ ಕರವಿನಕೋಪ್ಪ ಗ್ರಾಮಕ್ಕೆ ಆಗಮಿಸಿದ್ದ ಯೋಧನಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕೇರಳ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಈತನಿಗೆ ತನ್ನ ಜೊತೆಯಿದ್ದ ಸೋಂಕಿತ ಇಬ್ಬರಿಂದ ಕೋವಿಡ್ ಆವರಿಸಿದೆ ಎನ್ನಲಾಗಿದೆ.
ತಕ್ಷಣ ಬೆಳಗಾವಿಗೆ ತೆರಳಿ ತಾನೇ ಖುದ್ದಾಗಿ ಪರೀಕ್ಷೆ ಮಾಡಿಸಿಕೊಂಡಿದ್ದಾನೆ. ಶುಕ್ರವಾರ ಈತನಿಗೆ ಪಾಸಿಟಿವ್ ಇರುವ ಮಾಹಿತಿ ಬಂದಿದೆ. ಸ್ಥಳಕ್ಕೆ ತಹಶೀಲ್ದಾರ್ ರೇಷ್ಮಾ ತಾಳಿಕೋಟಿ, ಇಒ ಅಡವಿಮಠ ಮತ್ತು ಸಿಪಿಐ ಸುರೇಶ ಶಿಂಘೆ ಮತ್ತು ನಂದಗಡ ಪಿಎಸ್ಐ ಯು. ಎಸ್. ಅವಟಿ ಸ್ಥಳಕ್ಕೆ ತೆರಳಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತ ಇರುವ ಶಾಲೆಯ ಬಳಿ ಮನೆ ಸುತ್ತ ಬ್ಯಾರಿಕೆಡ್ ಹಾಕಿ ಯಾರು ಬರದಂತೆ ನೋಡಿಕೊಳ್ಳಲಾಗಿದೆ.
ಅವರ ಕುಟುಂಬದವರನ್ನು ಮನೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಪಾಸಿಟಿವ್ ಹೊಂದಿದ 30 ವರ್ಷದ ವ್ಯಕ್ತಿ ಆರೋಗ್ಯವಾಗಿಯೇ ಇದ್ದಾನೆಂದು ತಿಳಿದು ಬಂದಿದೆ. ಖಾನಾಪುರ ತಾಲೂಕಿನಲ್ಲಿ ಇಲ್ಲಿಯವರೆಗೆ ಕೋವಿಡ್ ಪ್ರಕರಣ ಒಂದೂ ಇರಲಿಲ್ಲ. ಇದೀಗ ಈ ಘಟನೆಯಿಂದ ಜನರಲ್ಲಿ ಆತಂಕ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ