ಚುನಾವಣೆಗೆ ಕೋವಿಡ್ ಮಾರ್ಗಸೂಚಿ
Team Udayavani, Mar 18, 2021, 12:22 PM IST
ಬೆಳಗಾವಿ: ಕೋವಿಡ್ ಹಿನ್ನೆಲೆಯಲ್ಲಿ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಪ್ರಚಾರ, ನಾಮಪತ್ರ ಸಲ್ಲಿಕೆ, ಅನುಮತಿ ನೀಡಿಕೆಗೆ ಸಂಬಂಧಿಸಿದಂತೆ ಬಹಳಷ್ಟು ಮಾರ್ಗಸೂಚಿಗಳು ಪರಿಷ್ಕರಣೆಗೊಂಡಿದ್ದು, ಹೊಸ ಮಾರ್ಗಸೂಚಿಯ ಪ್ರಕಾರವೇ ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳ ಸಭೆ ನಡೆಸಿದ ಅವರು, ಮಾದರಿ ನೀತಿ ಸಂಹಿತೆ ಪಾಲನೆಗೆ ಕ್ರಮ ಕೈಗೊಳ್ಳಬೇಕು.ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವನಿಕರಿಂದ ದೂರು ಸ್ವೀಕರಿಸಲು ನಿಯಂತ್ರಣ ಕೊಠಡಿ ಆರಂಭಿಸಬೇಕು ಎಂದು ಸೂಚನೆ ನೀಡಿದರು.
ಕ್ಷೇತ್ರ ವ್ಯಾಪ್ತಿಯ ಎಲ್ಲ ಸಹಾಯಕಚುನಾವಣಾಧಿಕಾರಿಗಳು ಆಯಾ ವಿಧಾನಸಭಾಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಕಾರ್ಯಗಳನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದುಅವರು ಹೇಳಿದರು. ಕೋವಿಡ್ ಹಿನ್ನೆಲೆಯಲ್ಲಿ 80 ವರ್ಷ ಮೇಲ್ಪಟ್ಟವರು, ಕೋವಿಡ್ ಸೋಂಕಿತರು ಹಾಗೂ ವಿಕಲಚೇತನರಿಗೆಪೋಸ್ಟಲ್ ಬ್ಯಾಲೆಟ್ ಒದಗಿಸಲು ಚುನಾವಣಾಆಯೋಗದ ಮಾರ್ಗಸೂಚಿ ಪ್ರಕಾರ ಕ್ರಮಕೈಗೊಂಡು ಮತದಾರರ ಪಟ್ಟಿಯಲ್ಲಿಗುರುತು ಮಾಡಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಚುನಾವಣಾಅಕ್ರಮಗಳು ಕಂಡುಬಂದರೆ ಸಂಬಂಧಪಟ್ಟಎಫ್.ಎಸ್.ಟಿ. ಮತ್ತಿತರ ತಂಡಗಳು ತಕ್ಷಣವೇ ದೂರು ದಾಖಲಿಸಬೇಕು ಎಂದರು.
ಉಪಚುನಾವಣೆ ಹಿನ್ನಲೆಯಲ್ಲಿಮಸ್ಟರಿಂಗ್, ಡಿಮಸ್ಟರಿಂಗ್, ಮತ ಎಣಿಕೆಸೇರಿದಂತೆ ಎಲ್ಲ ಬಗೆಯ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ ಎಂದುಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮಾಹಿತಿ ನೀಡಿದರು.
ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಅರುಣಕುಮಾರ್ ಮಾತನಾಡಿ, ಈಗಾಗಲೇನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಹಾಗೂಖಾನಾಪುರ ತಾಲೂಕಿನ ಕಣಕುಂಬಿ ಬಳಿಅಬಕಾರಿ ಇಲಾಖೆಯ ವತಿಯಿಂದ ಶಾಶ್ವತ ಚೆಕ್ ಪೋಸ್ಟ್ ಕಾರ್ಯನಿರ್ವಹಿಸುತ್ತಿದ್ದು,ಉಳಿದಂತೆ ಅಕ್ರಮ ಮದ್ಯ ಮಾರಾಟ ಅಥವಾಸಾಗಾಣಿಕೆ ಮೇಲೂ ನಿಗಾ ವಹಿಸಲಾಗಿದೆಎಂದು ಹೇಳಿದರು.
ಸಭೆಯಲ್ಲಿ ನಗರಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್,ಪೊಲೀಸ್ ಉಪ ಆಯುಕ್ತ ಡಾ.ವಿಕ್ರಮ್ ಆಮಟೆ, ಮಹಾನಗರ ಪಾಲಿಕೆಯ ಆಯುಕ್ತ ಕೆ.ಎಚ್. ಜಗದೀಶ್ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?