ನೆರೆ ರಾಜ್ಯದ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ
Team Udayavani, Jun 26, 2021, 4:59 PM IST
ಬೆಳಗಾವಿ: ಸಂಭವನೀಯ ಕೋವಿಡ್ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಶನಿವಾರ ರಾಜ್ಯದ ಗಡಿಭಾಗದಲ್ಲಿರುವ ಕೊಗನೊಳ್ಳಿ ರಾಷ್ಟ್ರೀಯ ಹೆದ್ದಾರಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿ, ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು.
ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ವರದಿಯನ್ನು ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಒಂದು ವೇಳೆ ಕರ್ನಾಟಕದ ನಿವಾಸಿಗಳು ಮಹಾರಾಷ್ಟ್ರದಿಂದ ಆಗಮಿಸಿದರೆ ಗಡಿಯಲ್ಲಿರುವ ಚೆಕ್ ಪೋಸ್ಟ್ ಗಳಲ್ಲಿಯೇ ಅವರ ಮಾದರಿಯನ್ನು ಸಂಗ್ರಹಿಸಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಗೆ ಕಳುಹಿಸಬೇಕು. ವರದಿ ಬಂದ ತಕ್ಷಣವೇ ಸಂಬಂಧಿಸಿದ ವ್ಯಕ್ತಿಗಳಿಗೆ ಮಾಹಿತಿಯನ್ನು ನೀಡಬೇಕು. ನಂತರ ಅವರ ವರದಿಯನ್ನು ಅವರ ವಿಳಾಸಕ್ಕೆ ಕಳುಹಿಸಿಕೊಡಬೇಕು ಎಂದು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಆರೋಗ್ಯ ಇಲಾಖೆಯ ತಂಡಗಳಿಗೆ ನಿರ್ದೇಶನ ನೀಡಿದರು.
ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಮೀಸಲಾತಿ ಪ್ರತಿಭಟನೆ, ಫಡ್ನವೀಸ್ ಸೇರಿ ಬಿಜೆಪಿ ಪ್ರತಿಭಟನಾಕಾರರು ವಶಕ್ಕೆ
ರಾಜ್ಯಕ್ಕೆ ಆಗಮಿಸುವ ಸ್ಥಳೀಯ ಪ್ರಯಾಣಿಕರ ಕೋವಿಡ್ ತಪಾಸಣೆಗೆ ಅನುಕೂಲವಾಗುವಂತೆ ಚೆಕ್ ಪೋಸ್ಟ್ ಬಳಿಯೇ ಕೋವಿಡ್ ತಪಾಸಣಾ ಕೇಂದ್ರವನ್ನು ಸ್ಥಾಪಿಸಿ, ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಹೇಳಿದರು.
ಸಂಭವನೀಯ 3 ನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ. ಆದ್ದರಿಂದ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು.
ಸರಕಾರದ ಮಾರ್ಗಸೂಚಿ ಪ್ರಕಾರ ಅಂತರರಾಜ್ಯ ಪ್ರಯಾಣಿಕರಿಂದ ಸಮರ್ಪಕ ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್, ಚಿಕ್ಕೋಡಿಯ ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಗಡೇದ, ನಿಪ್ಪಾಣಿ ತಹಶೀಲ್ದಾರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ