ಐವರು ಸಚಿವರಿದ್ದರೂ ಕೋವಿಡ್ ವಾರ್ಡ್‌ ಅಯೋಮಯ


Team Udayavani, Jul 18, 2020, 11:47 AM IST

ಐವರು ಸಚಿವರಿದ್ದರೂ ಕೋವಿಡ್ ವಾರ್ಡ್‌ ಅಯೋಮಯ

ಬೆಳಗಾವಿ: ರಾಜ್ಯದಲ್ಲಿ ಅತಿ ದೊಡ್ಡ ಜಿಲ್ಲೆ ಎಂಬ ಖ್ಯಾತಿ ಪಡೆದ ಬೆಳಗಾವಿ ಜಿಲ್ಲೆಯಲ್ಲಿಕೋವಿಡ್ ಸೋಂಕಿಗೆ ತಡೆ ಇಲ್ಲದಂತಾಗಿದೆ. ಐವರು ಸಚಿವರನ್ನು ಹೊಂದಿದ್ದರೂ ಜಿಲ್ಲೆಯ ಕೋವಿಡ್‌ ವಾರ್ಡ್‌ನ ಅವ್ಯವಸ್ಥೆಯಿಂದಾಗಿ ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಸಿಗದೇ ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದೆ.

ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್‌ ವಾರ್ಡ್‌ನ ಅವ್ಯವಸ್ಥೆಯಿಂದಾಗಿ ಸೋಂಕಿತರು ನರಳಾಡುತ್ತಿದ್ದಾರೆ. ಬೆಡ್‌ಗಳ ಕೊರತೆಯಿಂದಾಗಿ ಸೋಂಕಿತರು ನೆಲದ ಮೇಲೆ ಮಲಗುವ ಸ್ಥಿತಿ ಎದುರಾಗಿದೆ. ಈ ಬಗ್ಗೆ ಕೋವಿಡ್ ಸೋಂಕಿತರು ಬಿಮ್ಸ್‌ ಸಿಬ್ಬಂದಿ ಎದುರು ಅಳಲು ತೋಡಿಕೊಂಡರೂ ಯಾರೂ ಇತ್ತ ಗಮನಹರಿಸುತ್ತಿಲ್ಲ. ಬಿಮ್ಸ್‌ನಲ್ಲಿಯ ಅವ್ಯವಸ್ಥೆ ಬಗ್ಗೆ ಸೋಂಕಿತರು ವಿಡಿಯೋ ಮಾಡಿ ಸಂಬಂಧಿಸಿದವರ ಗಮನಕ್ಕೆ ತಂದರೂ ಇನ್ನೂವರೆಗೆ ಸರಿಪಡಿಸಿಲ್ಲ. ವಾರ್ಡ್‌ಗೆ ಸೋಂಕಿತರನ್ನು ಸ್ಥಳಾಂತರಿಸಿದಾಗ ಊಟ, ಬಿಸಿ ನೀರಿನ ಸಮಸ್ಯೆ, ಬೆಡ್‌ ಕೊರತೆ ಹೀಗೆ ಅನೇಕ ತೊಂದರೆಗಳು ಎದುರಾಗುತ್ತಿದ್ದರೂ ಯಾರೂ ಇತ್ತ ಕಾಳಜಿ ವಹಿಸುತ್ತಿಲ್ಲ. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಸಿಗದೇ ಒದ್ದಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ ಎಂದು ಸೋಂಕಿತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆಲದ ಮೇಲೆಯೇ ಬೆಡ್‌: ಸೋಂಕಿತರಿಗೆ ಹಾಸಿಗೆಗಳು ಇಲ್ಲದ್ದಕ್ಕೆ ಸೋಂಕಿತರನ್ನು ಕರೆ ತಂದಿರುವ ಅಂಬ್ಯುಲೆನ್ಸ್‌ಗಳು ಜಿಲ್ಲಾಸ್ಪತ್ರೆ ಎದುರು ಸಾಲುಗಟ್ಟಿ ನಿಲ್ಲುವಂತಾಗಿದೆ. ಬಿಮ್ಸ್‌ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿರುವ ಬೆಡ್‌ಗಳು ಬಹುತೇಕ ಭರ್ತಿ ಆಗಿದ್ದರಿಂದ ಬೆಡ್‌ ಕೊರತೆ ಎದುರಾಗಿದೆ. ಹೀಗಾಗಿ ಕೆಲವು ಸೋಂಕಿತರಿಗೆ ನೆಲದ ಮೇಲೆಯೇ ಬೆಡ್‌ ಹಾಕಿ ಕೊಡಲಾಗುತ್ತಿದೆ. ಬಿಮ್ಸ್‌ ಆಸ್ಪತ್ರೆಯಲ್ಲಿನ 200 ಬೆಡ್‌ಗಳಿದ್ದು, 272 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಡ್‌ಗಳು ಫುಲ್‌ ಆಗಿ ನೆಲದ ಮೇಲೆ ಸೋಂಕಿತರು ಮಲಗುವಂತಾಗಿದೆ.

ಹೀಗಾಗಿ ಕೋವಿಡ್ ಸೋಂಕಿತರನ್ನು ಎಲ್ಲಿಗೆ ಸ್ಥಳಾಂತರಿಸಬೇಕು ಎನ್ನುವ ಚಿಂತೆ ಬಿಮ್ಸ್‌ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ. ಜಿಲ್ಲೆಯ ವಿವಿಧೆಡೆಯಿಂದ ಸೋಂಕಿತರನ್ನು ತುಂಬಿಕೊಂಡು ಬರುವ ಅಂಬ್ಯುಲೆನ್ಸ್‌ಗಳು ತುರ್ತು ನಿಗಾ ಘಟಕದ ಎದುರು ನಿಲ್ಲುತ್ತಿವೆ. ಅವರನ್ನು ಎಲ್ಲಿಗೆ ಕಳುಹಿಸಬೇಕೋ ಎನ್ನುವುದೇ ದೊಡ್ಡ ಚಿಂತೆಯಾಗಿದೆ.

ತಲೆ ಕೆಡಿಸಿಕೊಳ್ಳದ ಜಿಲ್ಲಾಡಳಿತ: ಹಾಸಿಗೆ ಸಮಸ್ಯೆ ಇದ್ದರೂ ಜಿಲ್ಲಾಡಳಿತ ತಲೆಕೆಡಿಸಿಕೊಳ್ಳುತ್ತಿಲ್ಲ. ಬಿಮ್ಸ್‌ನಲ್ಲಿ ಸ್ವಚ್ಛತೆ ಇಲ್ಲದಿರುವುದರಿಂದ ಆರ್ಥಿಕವಾಗಿ ಸದೃಢ ವಾಗಿರುವ ಕೆಲವರು ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಾರ್ಡ್‌ನ ದುಸ್ಥಿತಿ ಹೇಳತೀರದು: ಕೋವಿಡ್ ಸೋಂಕಿತರು ಇರುವ ವಾರ್ಡ್‌ನ ಕಿಟಕಿಗಳಿಗೆ ಬಾಗಿಲುಗಳು ಇಲ್ಲ. ಮಳೆ ನೀರಿನಿಂದ ರಕ್ಷಿಸಿಕೊಳ್ಳಲು ಸೋಂಕಿತರೇ ಅದಕ್ಕೆ ಪ್ಲಾಸ್ಟಿಕ್‌ ಕಟ್ಟಿಕೊಂಡಿದ್ದಾರೆ. ಜೋರಾಗಿ ಮಳೆ ಬಂದರೆ ನೀರು ವಾರ್ಡ್‌ ಒಳಗೆ ಪ್ರವೇಶಿಸುತ್ತಿದೆ. ಇಷ್ಟೆಲ್ಲ ಅವ್ಯವಸ್ಥೆ ಇದ್ದರೂ ಇನ್ನೂವರೆಗೆ ಜಿಲ್ಲೆಯ ಯಾವೊಬ್ಬ ಸಚಿವರೂ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.

ವಾರ್ಡ್‌ನಲ್ಲಿ ಬೀದಿ ನಾಯಿಯೊಂದು ಮಲ ವಿಸರ್ಜನೆ ಮಾಡಿರುವುದು ಇಲ್ಲಿಯ ಅವ್ಯವಸ್ಥೆಯ ಆಗರಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಬೆಡ್‌ ಪಕ್ಕದಲ್ಲಿಯೇ ನಾಯಿ ಮಲ ವಿಸರ್ಜನೆ ಮಾಡಿದ್ದನ್ನು ವ್ಯಕ್ತಿಯೊಬ್ಬರು ಮೊಬೆ„ಲ್‌ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ಮಲ ವಿಸರ್ಜನೆಯಿಂದಾಗಿ ಇಡೀ ವಾರ್ಡ್‌ ಗಬ್ಬು ನಾರುತ್ತಿದೆ. ಸೋಂಕಿತರು ಇದರಿಂದ ತೀವ್ರ ಕಷ್ಟ ಅನುಭವಿಸುತ್ತಿದ್ದಾರೆ.

ಬಿಮ್ಸ್‌ನಲ್ಲಿ 200 ಬೆಡ್‌ ಇದ್ದು, ಸದ್ಯ 272 ಸೋಂಕಿತರು ಇದ್ದಾರೆ. ಇನ್ನುಳಿದ ಸೋಂಕಿತರನ್ನು ಬೇರೆ ಕಡೆಗೆ ಸ್ಥಳಾಂತರಿಸುವ ಬಗ್ಗೆ ಯೋಚನೆ ಮಾಡಲಾಗುತ್ತಿದೆ. ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ 30 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ತಾಲೂಕಿನ ಎರಡು ಮೊರಾರ್ಜಿ ಹಾಸ್ಟೆಲ್‌ಗ‌ಳಲ್ಲಿ ತಲಾ 100 ಬೆಡ್‌ಗಳ ವ್ಯವಸ್ಥೆ ಇದೆ. ಆಸ್ಪತ್ರೆಯಲ್ಲಿ ಬೆಡ್‌ ಗಳ ಕೊರತೆಯೂ ಇಲ್ಲ, ಅವ್ಯವಸ್ಥೆಯೂ ಇಲ್ಲ. – ಡಾ| ಶಶಿಕಾಂತ ಮುನ್ಯಾಳ ಜಿಲ್ಲಾ ಆರೋಗ್ಯಾಧಿಕಾರಿ

 

ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.