ಗಂಡನನ್ನೇ ಕೊಂದು ಹೂತು ಹಾಕಿದ ಪತ್ನಿ
Team Udayavani, Sep 6, 2020, 3:12 PM IST
ಚಿಕ್ಕೋಡಿ: ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಗಂಡನನ್ನೇ ಹೆಂಡತಿ ಕೊಲೆ ಮಾಡಿ ಹೂತು ಹಾಕಿದ ಘಟನೆ ನಿಪ್ಪಾಣಿ ತಾಲೂಕಿನ ಹಂಚನಾಳ ಗ್ರಾಮದಲ್ಲಿ ತಡವಾಗಿ ಪತ್ತೆಯಾಗಿದೆ.
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನ ನೇರ್ಲೆ ಗ್ರಾಮದ ಸಚಿನ ಸದಾಶಿವ ಭೋಪಳೆ(35) ಕೊಲೆಯಾದ ವ್ಯಕ್ತಿ. ಕೊಲೆ ಮಾಡಿದ ಪತ್ನಿ ಅನಿತಾ ಭೋಪಳೆ(33) ಸಹಚರ ಸಹೋದರ ಹಂಚಿನಾಳ ಗ್ರಾಮದ ಕೃಷ್ಣಾತ್ ರಾಜಾರಾಮ ಘಾಟಗೆ(26) ಹಾಗೂ ಪತ್ನಿಯ ಸಹೋದರಿ ಕಾಗಲ್ ತಾಲೂಕಿನ ಸಿದ್ಧನೇರ್ಲಿ ಗ್ರಾಮದ ವನಿತಾ ಕೃಷ್ಣಾತ್ ಚವ್ಹಾಣ(29) ಮೂವರೂ ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಅವರ ಶೋಧ ಕಾರ್ಯ ನಡೆಸಿದ್ದಾರೆ.
ಕೊಲೆಯಾದ ವ್ಯಕ್ತಿ ಪತ್ನಿ ಶೀಲದ ಬಗ್ಗೆ ಆಗಾಗ ಸಂಶಯ ವ್ಯಕ್ತಪಡಿಸಿ ಮದ್ಯದ ಅಮಲಿನಲ್ಲಿ ಕಿರುಕುಳ ಕೊಡುತ್ತಿದ್ದ ಎಂದು ಪೊಲೀಸರು ತಿಳಿಸಿದರು. ಕೆಲ ದಿನಗಳ ಹಿಂದೆ ಇಬ್ಬರೂ ಹಂಚಿನಾಳ ಗ್ರಾಮಕ್ಕೆ ಬಂದಿದ್ದರು. ಅಲ್ಲಿಯೂ ಸಹ ಸಚಿನ ಸೆ.3ರಂದು ಮದ್ಯದ ಅಮಲಿನಲ್ಲಿ ತನ್ನ ಪತ್ನಿ ಜತೆಗೆ ಜಗಳಕ್ಕಿಳಿದಿದ್ದ. ಈ ಜಗಳದಲ್ಲಿ ಪತ್ನಿ ಅನಿತಾ ಬಡಿಗೆಯಿಂದ ಆತನ ತಲೆಗೆ ಜೋರಾಗಿ ಪೆಟ್ಟು ಕೊಟ್ಟಿದ್ದಾಳೆ. ಇದರಲ್ಲಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಂತರ ಮನೆಯಲ್ಲಿ ಎಮ್ಮೆ ಸತ್ತಿದ್ದು ಅದನ್ನು ಅಂಗಳದಲ್ಲಿ ಹೂಳಲು ಜೆಸಿಬಿ ಚಾಲಕನಿಗೆ ರಾತ್ರೋರಾತ್ರಿ ಕರೆ ಮಾಡಿ ಕರೆಸಿ ದೊಡ್ಡ ತಗ್ಗು ತೆಗೆಸಿ, ನಂತರ ಅನಿತಾ ಮತ್ತು ಆಕೆಯ ಸಹೋದರ ಹಾಗೂ ಸಹೋದರಿ ಸಚಿನನ ಹೆಣವನ್ನು ಅಲ್ಲೇ ಮಣ್ಣು ಮಾಡಿದ್ದರು. ಶನಿವಾರ ಘಟನೆ ಕುರಿತು ಪೊಲೀಸರಿಗೆ ಮಾಹಿತಿ ಗೊತ್ತಾಗಿ ತಪಾಸಣೆ ನಡೆಸಿದ ನಂತರ ಸತ್ಯ ಬಯಲಾಗಿದೆ. ಈ ಕುರಿತು ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ