ಬಾಳೆಯೊಂದಿಗೆ ಬದುಕೂ ನೀರುಪಾಲು


Team Udayavani, Sep 15, 2019, 11:03 AM IST

bg-tdy-1

ಬೆಳಗಾವಿ: ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ ಹಾಗೂ ವೇದಗಂಗಾ ನದಿಗಳ ಪ್ರವಾಹ ಈ ಬಾರಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೃಷಿ ಕ್ಷೇತ್ರದ ಬುಡವನ್ನೇ ಅಲ್ಲಾಡುವಂತೆ ಮಾಡಿದೆ. ಸತತ ಬರಗಾಲದಿಂದ ತತ್ತರಿಸಿದ್ದ ರೈತ ಸಮುದಾಯಕ್ಕೆ ಈ ಬಾರಿ ನೆರೆ ಹಾವಳಿ ದೊಡ್ಡ ಹೊಡೆತ ನೀಡಿದೆ.

ತೋಟಗಾರಿಕೆ ಇಲಾಖೆಯ ಪ್ರಾಥಮಿಕ ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ 7641.5 ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆಗಳು ಪ್ರವಾಹಕ್ಕೆ ಆಹುತಿಯಾಗಿವೆ. ಈಗಿನ ಲೆಕ್ಕಾಚಾರ ಹಾಗೂ ಮಾರುಕಟ್ಟೆ ದರದ ಅನ್ವಯ ಸುಮಾರು 196 ಕೋಟಿ ಹಾನಿಯಾಗಿದೆ.

ಅತಿಯಾದ ಮಳೆ ಹಾಗೂ ನೆರೆ ಹೊಡೆತಕ್ಕೆ ಸಾವಿರಾರು ತೋಟಗಾರಿಕೆ ಬೆಳೆಗಾರರು ಬಹುತೇಕ ಬೆಳೆ ಕಳೆದುಕೊಂಡಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬ ಸ್ಥಿತಿ ಅವರದ್ದು. ಕೆಲವು ಕಡೆ ಹಸಿಮೆಣಸಿನ ಕಾಯಿ ಕೊಚ್ಚಿಕೊಂಡು ಹೋಗಿದೆ. ರಾಮದುರ್ಗ, ಬೆಳಗಾವಿ, ಗೋಕಾಕ, ಸವದತ್ತಿ ಸೇರಿದಂತೆ ಅನೇಕ ಕಡೆಗಳಲ್ಲಿ ಬಾಳೆ ಭೂಮಿಗೆ ಬಿದ್ದಿದೆ. ಈರುಳ್ಳಿ ಮತ್ತು ಆಲೂಗಡ್ಡೆ ನೀರು ಪಾಲಾಗಿವೆ.

ನೆರೆ ಹಾವಳಿಯಿಂದ ಹೆಚ್ಚು ಹಾನಿಯಾಗಿದ್ದು ತರಕಾರಿ ಬೆಳೆಗೆ. ಜಿಲ್ಲೆಯಲ್ಲಿ ಸುಮಾರು 10 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ತರಕಾರಿ ಬೆಳೆಗಳಿದ್ದವು. ಅದರಲ್ಲಿ ಸುಮಾರು ನಾಲ್ಕು ಸಾವಿರ ಹೆಕ್ಟೇರ್‌ಗೂ ಹೆಚ್ಚು ತರಕಾರಿ ಬೆಳೆ ಹಾಳಾಗಿವೆ. ಪ್ರವಾಹದಿಂದ ಯಾವ ಬೆಳೆಯೂ ಪಾರಾಗಿಲ್ಲ. ಬದನೆ, ಕೋಸುಗಡ್ಡೆ, ಟೊಮಾಟೊ, ಹಸಿ ಮೆಣಸಿನಕಾಯಿ. ಸೊಪ್ಪು, ಸವತಿಕಾಯಿ, ಬೆಂಡೆಕಾಯಿ, ಬೀನ್ಸ್‌, ಹೀರೇಕಾಯಿ, ಗೆಣಸು, ಹಾಗಲಕಾಯಿ ಬೆಳೆಗಳು ನೀರಿನ ಹೊಡೆತಕ್ಕೆ ನಾಶವಾಗಿವೆ.

ಮೊದಲಿಂದಲೂ ತರಕಾರಿ ಬೆಳೆಗೆ ಹೆಸರಾಗಿರುವ ಬೆಳಗಾವಿ ತಾಲೂಕು ಆಲೂಗಡ್ಡೆ ಬೆಳೆಗೆ ಮುಂಚೂಣಿಯಲ್ಲಿದೆ. ಇಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ರೈತರು ಅಪಾರ ನಷ್ಟ ಅನುಭವಿಸಿದ್ದಾರೆ. ಒಟ್ಟು 1170 ಹೆಕ್ಟೇರ್‌ ಪ್ರದೇಶದ ಅಲೂಗಡ್ಡೆ ಬೆಳೆ ಪ್ರವಾಹಕ್ಕೆ ತುತ್ತಾಗಿದೆ.

ರಾಮದುರ್ಗ (1275 ಹೆಕ್ಟೇರ್‌) ಹಾಗೂ ಸವದತ್ತಿಯಲ್ಲಿ (1125 ಹೆ.) ಅತೀ ಹೆಚ್ಚಿನ ಈರುಳ್ಳಿ ಬೆಳೆ ಹಾಳಾಗಿದ್ದರೆ ಕಿತ್ತೂರು (125 ಹೆ.) ಹಾಗೂ ಬೆಳಗಾವಿಯಲ್ಲಿ (1170 ಹೆ.) ಅಲೂಗಡ್ಡೆ ಬೆಳೆಗಾರರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ.

ನದಿ ದಡದ ಬಳಿಯೇ ಇರುವುದರಿಂದ ಜಲಾಶಯದಿಂದ ನೀರು ಬರುತ್ತದೆ ಎಂದು ನಿರೀಕ್ಷೆ ಮಾಡಿದ್ದೆವು. ಆದರೆ ಈ ರೀತಿಯ ಅನಾಹುತ ಮಾಡುತ್ತದೆ ಎಂದು ಕನಸಿನಲ್ಲಿಯೂ ಊಹೆ ಮಾಡಿರಲಿಲ್ಲ. ಒಮ್ಮೆಲೇ ಬಂದ ನೀರು ಎಲ್ಲವನ್ನೂ ನಾಶ ಮಾಡಿದೆ. ಹೇಳಿಕೊಳ್ಳಲು ಏನೂ ಉಳಿದಿಲ್ಲ ಎಂದು ರಾಮದುರ್ಗ ತಾಲೂಕಿನ ರೈತ ಬಸವರಾಜ ಹೂಗಾರ ನೋವಿನ ಮಾತು.

ಎರಡು ಎಕರೆ ಪ್ರದೇಶದಲ್ಲಿ ಬಾಳೆ ಬೆಳೆದಿದ್ದೆ. ಪೀಕು ಕೂಡ ಬಹಳ ಚೆನ್ನಾಗಿಯೇ ಇತ್ತು. ಕೆಲವೇ ದಿನಗಳಲ್ಲಿ ಗೊನೆಗಳನ್ನು ಕಟಾವು ಮಾಡಲು ತಯಾರು ಮಾಡಿಕೊಂಡು ಪೂಜೆ ಸಹ ಮಾಡಿದ್ದೆವು. ಆದರೆ ಒಮ್ಮೆಲೇ ಬಂದ ನೀರು ಎಲ್ಲವನ್ನೂ ಹಾಳು ಮಾಡಿತು. ಕಡಿಮೆ ಎಂದರೂ ಮೂರು ಲಕ್ಷ ಹಾನಿಯಾಗಿದೆ. ಇದನ್ನು ಯಾರು ಕೊಡುತ್ತಾರೆ ಹೇಳಿ ಎಂದು ದೊಡ್ಡ ಹಂಪಿಹೊಳಿ ಗ್ರಾಮದ ಭೀಮಪ್ಪ ತಮ್ಮ ಕಷ್ಟ ಹೇಳಿಕೊಳ್ಳುತ್ತಾರೆ.

ಇನ್ನೂ ಕೆಲವು ಕಡೆ ಬೆಳೆಗಳು ನೀರಿನಲ್ಲಿವೆ. ಈಗಾಗಲೇ ಜಂಟಿ ಸಮೀಕ್ಷೆ ಕಾರ್ಯ ನಡೆದಿದ್ದು ಅದು ಪೂರ್ಣಗೊಳ್ಳಲು ಸ್ವಲ್ಪ ಸಮಯಬೇಕು. ಅದೇ ರೀತಿ ಬಹಳಷ್ಟು ಹಾನಿಗೀಡಾಗಿರುವ ರೈತರ ಸ್ಥಿತಿ ಮೊದಲಿನ ದಾರಿಗೆ ಬರಲು ಇನ್ನೂ ಕಾಲಾವಕಾಶ ಬೇಕಾಗುತ್ತದೆ ಎಂಬುದು ಕೃಷಿ ಇಲಾಖೆ ಅದಿಕಾರಿಗಳ ಹೇಳಿಕೆ.

 

•ಕೇಶವ ಆದಿ

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.