ರಾಮದುರ್ಗ: ಬೆಳೆ ಸಮೀಕ್ಷೆ ಪ್ರಾತ್ಯಕ್ಷಿಕೆ
Team Udayavani, Aug 23, 2020, 1:14 PM IST
ರಾಮದುರ್ಗ: ಲಕ್ಷ್ಮೀ ವೆಂಕಟೇಶ್ವರ ರೈತೋತ್ಪಾದಕ ಕಂಪನಿ ಹಾಗೂ ಕೃಷಿ ಇಲಾಖೆ ಸೇರಿದಂತೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ತಾಲೂಕಿನ ದಾಡಿಬಾವಿ ಗ್ರಾಮದ ಸದಾಶಿವ ಮಾತನವರ ತೋಟದಲ್ಲಿ ಸಮಗ್ರ ಕೃಷಿ ಅಭಿವೃದ್ಧಿ ಯೋಜನೆ (ಪಿಪಿಪಿ-ಐಎಡಿ)ಯಡಿ ರೈತರ ಬೆಳೆ ಸಮೀಕ್ಷೆಯನ್ನು ಮೊಬೈಲ್ ಆ್ಯಪ್ ಮೂಲಕ ನೋಂದಣಿ ಮಾಡುವ ಪ್ರಾಯೋಗಿಕ ಕಾರ್ಯಕ್ರಮ ನಡೆಯಿತು.
ಸಮಗ್ರ ಕೃಷಿ ಅಭಿವೃದ್ಧಿ ಯೋಜನೆಯಡಿ ಮತ್ತು ಕೃಷಿ ಇಲಾಖೆ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶೀಲಿಂಧ್ರರಹಿತ ಮೆಕ್ಕೆಜೋಳ ಹೇಗೆ ಬೆಳೆಯಬೇಕು ಮತ್ತು ಮುಂಗಾರು ಹಂಗಾಮಿನಲ್ಲಿ ಬೆಳೆದ ಬೆಳೆ ರೈತರು ತಾವೇ ಸ್ವತಃ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ನಲ್ಲಿ ಹೇಗೆ ನೋಂದಣಿ ಮಾಡಬೇಕು ಹಾಗೂ ಅದರಿಂದಾಗುವ ಪ್ರಯೋಜನಗಳ ಬಗ್ಗೆ ಐಎಫ್ಎಚ್ಡಿ ಸಂಸ್ಥೆ ಸಿಬ್ಬಂದಿ ವಾಸುದೇವ ಸನಸತ್ತಿ ತಿಳಿಸಿದರು.
ಪ್ರವಾಹ ಮತ್ತು ಬರಗಾಲ ಸಮಯದಲ್ಲಿ ಸರ್ಕಾರ ನಿಡುವ ನಷ್ಟ ಪರಿಹಾರ ವಿತರಿಸಲು ಈ ಸಮೀಕ್ಷೆ ಸಹಾಯವಾಗುತ್ತದೆ. ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಅರ್ಹಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಸಾಂಖೀಕ ಇಲಾಖೆ, ಕೃಷಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ ಬೆಳೆ ಕಟಾವು ಪ್ರಯೋಗ ಕೈಗೊಳ್ಳಲು ಮತ್ತು ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಈ ಬೆಳೆ ಸಮೀಕ್ಷೆ ಆ್ಯಪ್ ಸಹಾಯ ಮಾಡುತ್ತದೆ ಎಂದು ತಿಳಿಸಿದರು. ಈ ವೇಳೆ ಲಕ್ಷ್ಮೀ ವೆಂಕಟೇಶ್ವರ ರೈತೋತ್ಪಾದಕ ಕಂಪನಿ ಅಧ್ಯಕ್ಷ ಸದಾಶಿವ ಮಾತನವರ, ಐಎಫ್ಎಚ್ಡಿ ಸಂಸ್ಥೆ ಸಿಬ್ಬಂದಿಗಳಾದ ಈರಣ್ಣ, ಮಹಾಂತೇಶ ಮೊದಲಬಾವಿ, ಬಸವರಾಜ, ಚೇತನ, ರಾಜೇಶ, ಶ್ರೀಧರ, ಶಿವಾನಂದ, ಮಹಾತೇಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ