ಸಿಆರ್ ಪಿಎಫ್ ಯೋಧನಿಗೆ ಜಾಮೀನು ಮಂಜೂರು
Team Udayavani, Apr 28, 2020, 3:25 PM IST
ಬೆಳಗಾವಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಸಿಆರ್ ಪಿಎಫ್ ವಿಂಗ್ ಕಮಾಂಡೋ ಹಾಗೂ ಪೊಲೀಸರ ನಡುವಿನ ಜಟಾಪಟಿಗೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಯೋಧ ಸಚಿನ್ ಸಾವಂತಗೆ ಮಂಗಳವಾರ ಜಾಮೀನು ಮಂಜೂರಾಗಿದ್ದು, ಇನ್ನು ಕೆಲವೇ ಗಂಟೆಯಲ್ಲಿ ಬಿಡುಗಡೆಯಾಗಲಿದೆ.
ಇಬ್ಬರು ಪೊಲೀಸ್ ಪೇದೆಗಳ ಜೊತೆ ನಡೆದ ಗಲಾಟೆಗೆ ಸಂಬಧಿಸಿದಂತೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಿಆರ್ ಪಿಎಫ್ ಯೋಧನಿಗೆ ಚಿಕ್ಕೋಡಿ 1ನೇ ಜೆಎಂಎಫ್ಸಿ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.
ಜಾಮೀನು ಆದೇಶದೊಂದಿಗೆ ವಕೀಲರು ಚಿಕ್ಕೋಡಿಯಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಪ್ರಯಾಣ ಬೆಳೆಸಿದ್ದಾರೆ ಒಂದೂವರೆ ತಾಸಿನೊಳಗೆ ಯೋಧನ ಬಿಡುಗಡೆಯಾಗಲಿದೆ ಎಂದು ಸಿಆರ್ ಪಿಎಫ್ ಅಧಿಕಾರಿಗಳು ಉದಯವಾಣಿಗೆ ತಿಳಿಸಿದರು.
ಕಮಾಂಡೋ ವಿರುದ್ಧ ಐಪಿಸಿ ಸೆಕ್ಷನ್ 353, 323 ಮತ್ತು 504 ಹಾಗೂ ಎಪಿಡೆಮಿಕ್ ಡಿಸೀಜಿಸ್ ಆಕ್ಟ್ 1987ರ ಸೆಕ್ಷನ್ 3ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಮಾಸ್ಕ್ ಹಾಕಿಲ್ಲ ಎಂಬ ಕಾರಣಕ್ಕಾಗಿ ಇಬ್ಬರು ಪೇದೆ – ಸಿಆರ್ಪಿಎಫ್ ಯೋಧನ ಮಧ್ಯೆ ಗಲಾಟೆ ನಡೆದಿತ್ತು. ಕರ್ತವ್ಯನಿರತ ಪೇದೆ ಮೇಲೆ ಹಲ್ಲೆ ಆರೋಪದಡಿ ಸಿಆರ್ಪಿಎಫ್ ಯೋಧನನನ್ನು ಬಂಧಿಸಲಾಗಿತ್ತು. ಏಪ್ರಿಲ್ 23ರಂದು ಚಿಕ್ಕೋಡಿ ತಾಲೂಕಿನ ಯಕ್ಸಂಬಾದಲ್ಲಿ ಈ ಘಟನೆ ನಡೆದಿತ್ತು. ಯೋಧನಿಗೆ ಕೈಕೊಳ ಹಾಕಿ ಕೂರಿಸಿದ್ದ ಫೋಟೊ ವೈರಲ್ ಆಗಿ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್ ಶೆಟ್ಟರ್
Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ
MUST WATCH
ಹೊಸ ಸೇರ್ಪಡೆ
D. K. Shivakumar-ಎಚ್ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್.ಅಶೋಕ್
JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ
Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ
Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ