ಕುತೂಹಲ ಮೂಡಿಸಿದ ಶಾಸಕ ರಮೇಶ್ ಜಾರಕಿಹೊಳಿ ನಡೆ!
Team Udayavani, Jan 16, 2022, 11:27 AM IST
ಅಥಣಿ: ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಸಂಕ್ರಮಣ ನಿಮಿತ್ತ ಶನಿವಾರ ಆರೆಸ್ಸೆಸ್ ಮುಖಂಡ ಅರವಿಂದರಾವ್ ದೇಶಪಾಂಡೆ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಸಂಕ್ರಮಣ ನಂತರ ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆ ಸಂದರ್ಭ ತಮ್ಮನ್ನು ಪರಿಗಣಿಸುವಂತೆ ಕೇಳಿಕೊಂಡಿದ್ದಾರೆಂದು ತಿಳಿದು ಬಂದಿದ್ದು, ರಮೇಶ ಜಾರಕಿಹೊಳಿ ಅವರಿಗೆ ಮತ್ತೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಗಲಿದೆ ಎನ್ನುವ ಮಾತುಗಳು ಅವರ ಬೆಂಬಲಿಗರಿಂದ ಕೇಳಿಬರುತ್ತಿವೆ.
ಅರವಿಂದರಾವ್ ಅವರನ್ನು ಭೇಟಿಯಾಗಿ ಒಂದು ತಾಸು ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲ ವಿಷಯ ಮಾಧ್ಯಮದ ಮುಂದೆ ಹೇಳಲು ಸಾಧ್ಯವಿಲ್ಲ. ಆರೆಸ್ಸೆಸ್ ಹಿರಿಯ ಮುಖಂಡ ಅರವಿಂದಜೀ ಅವರನ್ನು ಸಂಕ್ರಮಣ ನಿಮಿತ್ತ ಭೇಟಿಯಾಗಿ ಹಬ್ಬದ ಶುಭ ಕೋರಿದ್ದೇನೆಯೇ ಹೊರತು ಯಾವುದೇ ರಾಜಕಾರಣದ ಮಾತಿಲ್ಲ ಎಂದರು.
ಇದನ್ನೂ ಓದಿ:ಶಿಕ್ಷಣ ಸಂಸ್ಥೆಗಳ ನಿಯಮ ಪಾಲನೆ ವಿದ್ಯಾರ್ಥಿಗಳ ಕರ್ತವ್ಯ
ಸಚಿವ ಸಂಪುಟ ಪುನಾರಚನೆಗೆ ಬಿಜೆಪಿ ಪಾಳಯದಲ್ಲಿ ಒತ್ತಡ ಹೆಚ್ಚುತ್ತಿದೆ. ಕೆಲ ದಿನಗಳ ಹಿಂದಷ್ಟೇ ಶಾಸಕ ರೇಣುಕಾಚಾರ್ಯ ಕೂಡಾ, “ ಸಿಎಂ ಹೊರತುಪಡಿಸಿ ಉಳಿದೆಲ್ಲಾ ಬದಲಾಗಬೇಕು. ಅದೇ ಮುಖಗಳನ್ನು ನೋಡಿ ಸಾಕಾಗಿದೆ” ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ