ಡಿಕೆಶಿಯದ್ದು ಕಣ್ಣೀರು ಸುರಿಸುವ ಸ್ವಭಾವ ಅಲ್ಲ: ಹೆಬ್ಬಾಳ್ಕರ್
Team Udayavani, Sep 6, 2019, 8:13 PM IST
ಬೆಳಗಾವಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರು ಕಣ್ಣೀರು ಸುರಿಸುವ ಜಾಯಮಾನದವರಲ್ಲ. ತಂದೆಯ ಪೂಜಾ ಕಾರ್ಯಕ್ಕೆ ಇಡಿ ಅಧಿಕಾರಿಗಳು ಅವಕಾಶ ಮಾಡಿಕೊಡದಿದ್ದಕ್ಕೆ ನೋವು ತೋಡಿಕೊಂಡಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಜಕೀಯ ಷಡ್ಯಂತ್ರ ಮಾಡಿ ಡಿ.ಕೆ. ಶಿವಕುಮಾರ ಅವರನ್ನು ಬಂಧಿಸಿದ್ದಾರೆ. ಇಡಿ, ಐಟಿ ಹಾಗೂ ಸಿಬಿಐ ದಾಳಿ ಮಾಡಿ ಹೆದರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಪರವಾಗಿ ಮಾತನಾಡುವವರಿಗೆ ರಕ್ಷಣೆ ನೀಡಲಾಗುತ್ತಿದ್ದು, ಬಿಜಡೆಪಿ ವಿರುದ್ಧ ಮಾತನಾಡಿದರೆ ಇಡಿ, ಐಟಿ ದಾಳಿ ನಡೆಸಿ ಹೆದರಿಸುವ ಕೆಲಸ ನಡೆದಿದೆ. ಪ್ರಜಾಪ್ರಭುತ್ವ ತೊಂದರೆಯಲ್ಲಿದೆ. ಬಿಜೆಪಿಯ ವಿರೋಧಿ ಹೇಳಿಕೆ ನೀಡಿದವರನ್ನು ದೇಶದ್ರೋಹಿಗಳನ್ನಾಗಿ ಬಿಂಬಿಸುವ ಕೆಲಸ ನಡೆದಿದೆ. ಇದೊಂದು ರಾಜಕೀಯ ಷಡ್ಯಂತ್ರ ಎಂದು ದೂರಿದರು.
ಪಶ್ಚಿಮ ಬಂಗಾಳದ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾದ ಆರೋಪಿಗಳು ಬಿಜೆಪಿಗೆ ಸೇರಿ ಬಿಟ್ಟರೆ ಆವರು ಪವಿತ್ರ ಆಗಿ ಬಿಟ್ಟರಾ. ಈ ಆರೋಪಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ನಾಯಕರ ಮೇಲೆ ಐಟಿ, ಇಡಿ ದಾಳಿ ನಡೆಸಿ ಹತ್ತಿಕ್ಕುವ ಕೆಲಸ ಬಿಜೆಪಿಯವರು ನಡೆಸಿದ್ದಾರೆ ಎಂದು ಆಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ