D. K. Shivakumar ಕಾಂಗ್ರೆಸ್ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ
ಬಿಜೆಪಿ ಭಾವನೆ ಬಗ್ಗೆ ಮಾತಾಡುತ್ತದೆ ಹೊರತು ಜನರ ಬದುಕಿನ ಬಗೆಗಲ್ಲ
Team Udayavani, May 6, 2024, 12:33 AM IST
ಬೆಳಗಾವಿ: ಮೋದಿ ಕೇವಲ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿ ಭಾವನೆ ಬಗ್ಗೆ ಮಾತಾಡು ತ್ತದೆಯೇ ಹೊರತು ಜನರ ಬದುಕಿನ ಬಗೆಗಲ್ಲ. ಕಾಂಗ್ರೆಸ್ನ ಭರವಸೆ ಹಾಗೂ ಬಿಜೆಪಿಯ ಬುರುಡೆ ಮಧ್ಯೆ ಚುನಾವಣೆ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಬಳಿಕ ಗ್ಯಾರಂಟಿ ಸ್ಥಗಿತ ಎಂದು ಯಡಿಯೂರಪ್ಪ, ಆರ್.ಅಶೋಕ್ ಹಾಗೂ ವಿಜಯೇಂದ್ರ ಹೇಳಿದ್ದಾರೆ. ಸರಕಾರದ ಗ್ಯಾರಂಟಿ ಗಳಿಂದ ಜನರು ಸಂತೋಷವಾಗಿದ್ದು, ಆದರೆ ಇದನ್ನು ನಿಲ್ಲಿಸಲು ಬಿಜೆಪಿ ನಾಯಕರು ಬಯಸುತ್ತಿದ್ದಾರೆ. ಯೋಜನೆಗಳಿಗೆ ಬಜೆಟ್ನಲ್ಲಿ 58 ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ರಾಜ್ಯದ 7 ಕೋಟಿ ಜನರ ಪೈಕಿ 5.60 ಕೋಟಿ ಜನರಿಗೆ ನಮ್ಮ ಯೋಜನೆ ತಲುಪುತ್ತಿವೆ ಎಂದರು.
ಉತ್ತರ ಕರ್ನಾಟಕ ಭಾಗದ ನೀರಾವರಿಗಾಗಿ 9 ಸಾವಿರ ಕೋಟಿ ರೂ. ಕಾಮಗಾರಿ ಕೈಗೊಂಡಿದ್ದೇವೆ. ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಕೈಗೆತ್ತಿಕೊಂಡಿದ್ದು, ಮಹಾದಾಯಿ ಯೋಜನೆಗೆ ಕೇಂದ್ರದ ಪರಿಸರ ಇಲಾಖೆ ಅನುಮತಿ ನೀಡದಿ ದ್ದರೂ ನಾವು ಟೆಂಡರ್ ಕರೆದಿದ್ದೇವೆ. ಬಿಜೆಪಿ ನಾಯಕರಾದ ಶೆಟ್ಟರ್, ಬೊಮ್ಮಾಯಿ ಹಾಗೂ ಜೋಷಿ ಸಂಭ್ರಮಾಚರಣೆ ಮಾಡಿದರು. ಅವರದ್ದು ಕೇವಲ ಬುರುಡೆ ಹಾಗೂ ಖಾಲಿ ಮಾತು. ನಾವು ನುಡಿದಂತೆ ನಡೆದಿದ್ದೇವೆ ಎಂದರು.
ಸುರೇಶ ಅಂಗಡಿಗೆ ಅಗೌರವ
ಕೋವಿಡ್ ವೇಳೆ ಸುರೇಶ ಅಂಗಡಿ ಪಾರ್ಥಿವ ಶರೀರವನ್ನು ಇಲ್ಲಿಗೆ ತಂದು ಅಂತ್ಯಸಂಸ್ಕಾರ ಮಾಡಲಿಲ್ಲ. ಜೆಸಿಬಿಯಲ್ಲಿ ಅವರ ಮೃತದೇಹ ತಳ್ಳಿ ಅಪಮಾನ ಮಾಡಿದರು. ಶೆಟ್ಟರ್ ಮನಸ್ಸು ಮಾಡಿದ್ದರೆ ಇಲ್ಲಿಯೇ ಅಂತ್ಯಸಂಸ್ಕಾರ ಮಾಡಬಹುದಿತ್ತು. ಅಂಗಡಿ ಅವರಿಗೆ ಅಗೌರವ ತೋರಿಸಿದ್ದಾರೆ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದಲ್ಲಿ ಕಾಂಗ್ರೆಸ್ 10 ಕ್ಷೇತ್ರ ಗೆಲ್ಲಲಿದ್ದು, 12 ಸ್ಥಾನ ಗೆದ್ದರೂ ಅಚ್ಚರಿ ಇಲ್ಲ. ರಾಜ್ಯದಲ್ಲಿ ನಾವು 20ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು
ಎ ದರ್ಜೆ ದೇವಾಲಯಗಳ ಆದಾಯದಲ್ಲಿ ಶೇ.10ರಷ್ಟನ್ನು ಸಿ ದರ್ಜೆಯ ದೇವಾಲಯಗಳ ಅಭಿವೃದ್ಧಿಗೆ ಬಳಸುವ ಐತಿಹಾಸಿಕ ಕಾನೂನು ಸರಕಾರ ತಂದಿತ್ತು. ಇದರಿಂದ ಹಳ್ಳಿಗಳಲ್ಲಿರುವ ಮಾರಮ್ಮ, ಕೆಂಕೇರಮ್ಮ, ಕಬ್ಟಾಳಮ್ಮ ಸಹಿತ ಸ್ಥಳೀಯ ದೇವಾಲಯಗಳ ಅಭಿವೃದ್ಧಿಗೆ ಸಹಕಾರಿಯಾಗುತ್ತಿತ್ತು. ಅಲ್ಲದೆ ಅರ್ಚಕರ ಮಕ್ಕಳ ಶಿಕ್ಷಣ, ವಿಮೆ, ಪಿಂಚಣಿ ಭದ್ರತೆಗೆ ನೀಡಲು ಮುಂದಾದರೆ ಬಿಜೆಪಿಯವರು ರಾಜ್ಯಪಾಲರಿಗೆ ಹೇಳಿ ಕಾನೂನಿಗೆ ತಡೆ ಹಿಡಿದಿದ್ದಾರೆ. ಈ ಕಾಯ್ದೆಯನ್ನು ವಿರೋಧಿಸುವ ಬಿಜೆಪಿ ಇನ್ನು ಯಾವ ರೀತಿಯಲ್ಲಿ ಧರ್ಮ ರಕ್ಷಣೆ ಮಾಡುತ್ತದೆ? ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅರ್ಚಕರಿಗೆ ನೆರವಾಗಲು ಬಿಜೆಪಿ ಅಡ್ಡಿ ಮಾಡಿದೆ ಎಂದು ಡಿಕೆಶಿ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ
Chaluvaraya Swamy ಇಷ್ಟು ವರ್ಷ ಪೆನ್ಡ್ರೈವ್ ಇಟ್ಟುಕೊಂಡಿದ್ದೇಕೆ?
CSK ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಆರ್ ಸಿಬಿ; ಪ್ರಶಂಸೆಗಳ ಸುರಿಮಳೆ
Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್.ಡಿ. ದೇವೇಗೌಡ
Ramalinga Reddy ಬಿಜೆಪಿ ಕಾಲದಲ್ಲಿ ಒಂದೇ ವರ್ಷದಲ್ಲಿ 1200 ಕೊಲೆ