ಫುಟ್ಪಾತ್ ಅತಿಕ್ರಮಣ ತೆರವಿಗೆ ಡಿಸಿ ಸೂಚನೆ
ನೀರು ಪೂರೈಕೆ; 24 ಗಂಟೆಯಲ್ಲಿ ಸಮಸ್ಯೆ ಪರಿಹರಿಸಿ ; ಆದ್ಯತೆ ಮೇರೆಗೆ ಒಳಚರಂಡಿ ಕಾಮಗಾರಿ ಪೂರ್ಣಗೊಳಿಸಿ
Team Udayavani, Jun 3, 2022, 2:54 PM IST
ಬೆಳಗಾವಿ: ಫುಟ್ಪಾತ್ ಅತಿಕ್ರಮಣ ತೆರವುಗೊಳಿಸುವ ಜೊತೆಗೆ ನಗರದ ಸೌಂದಯೀìಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕುಡಿವ ನೀರು ಪೂರೈಕೆಗೆ ಸಂಬಂಧಿಸಿದ ದೂರು 24 ಗಂಟೆಯಲ್ಲಿ ಪರಿಹರಿಸುವಂತೆ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಆಗಿರುವ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಹಾನಗರ ಪಾಲಿಕೆ ಕಚೇರಿಗೆ ಗುರುವಾರ ಭೇಟಿ ನೀಡಿ ವಿವಿಧ ವಿಭಾಗಗಳ ಕಾರ್ಯಚಟುವಟಿಕೆ ಪರಿಶೀಲಿಸಿದ ನಂತರ ಅಧಿಕಾರಿಗಳ ಸಭೆ ನಡೆಸಿದ ಅವರು, ಕೆಲವು ಪ್ರಮುಖ ರಸ್ತೆ ಸೇರಿದಂತೆ ಅನೇಕ ಕಡೆಗಳಲ್ಲಿ ಪಾದಚಾರಿ ಮಾರ್ಗ (ಫುಟ್ ಪಾತ್) ಒತ್ತುವರಿ ಮಾಡಿರುವುದು ಕಂಡುಬಂದಿದೆ. ಇದರಿಂದ ಸಾರ್ವಜನಿಕರ ಓಡಾಟ ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಆದ್ದರಿಂದ ಕೂಡಲೇ ಫುಟ್ಪಾತ್ ಒತ್ತುವರಿ ತೆರವುಗೊಳಿಸಬೇಕು ಎಂದರು.
ನಗರದಲ್ಲಿ ಕುಡಿವ ನೀರಿನ ಸಮಸ್ಯೆಗೆ ಸಂಬಂಧಪಟ್ಟಂತೆ ಯಾವುದೇ ದೂರುಗಳು ಬಂದರೆ 24 ಗಂಟೆಗಳಲ್ಲಿ ಪರಿಹರಿಸುವ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಮಳೆಗಾಲ ಆರಂಭಗೊಳ್ಳುತ್ತಿರುವುದರಿಂದ ಒಳಚರಂಡಿ ಕಾಮಗಾರಿ ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಪ್ರಮುಖ ರಸ್ತೆಗಳು ಹಾಗೂ ಜನವಸತಿ ಬಡಾವಣೆಗಳ ಅಕ್ಕಪಕ್ಕದಲ್ಲಿರುವ ನಾಲಾಗಳನ್ನು ಆಗಾಗ ಸ್ವತ್ಛಗೊಳಿಸಬೇಕು ಎಂದು ಹೇಳಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ ಸಂಬಂಧಿಸಿದಂತೆ ಡಿಜಿಟಲ್ ದಾಖಲೆ ಸಿದ್ಧಪಡಿಸಿ “ಇ-ಆಸ್ತಿ’ ತಂತ್ರಾಂಶ ಮೂಲಕ ಸಾರ್ವಜನಿಕರು ಸುಲಭವಾಗಿ ಪಡೆಯಲು ಅನುಕೂಲ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಕಟ್ಟಡ ಪರವಾನಗಿಗೆ ಸಂಬಂಧಿಸಿದ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ವಿನಾಕಾರಣ ವಿಳಂಬ ಧೋರಣೆ ಅನುಸರಿಸಬಾರದೆಂದು ಎಚ್ಚರಿಸಿದರು.
ತೆರಿಗೆ ಸಂಗ್ರಹ ಹೆಚ್ಚಿಸಲು ಸಲಹೆ: ಮಹಾನಗರ ಪಾಲಿಕೆ ಪ್ರಸಕ್ತ ವರ್ಷದಲ್ಲಿ ಇದುವರೆಗೆ ಶೇ.48 ತೆರಿಗೆ ಸಂಗ್ರಹಿಸಿದೆ. ಇನ್ನುಳಿದ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ ಜಿಲ್ಲಾಧಿಕಾರಿ ಪಾಲಿಕೆಯ ಆಸ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ಡಾ| ರುದ್ರೇಶ್ ಘಾಳಿ ಮಾತನಾಡಿ, ಕುಡಿವ ನೀರು ಪೂರೈಕೆ, ಸ್ವಚ್ಛತೆ ಸೇರಿದಂತೆ ನಾಗರಿಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಪಾಲಿಕೆ ವತಿಯಿಂದ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಾಲಿಕೆ ಆವರಣದಲ್ಲಿ ಸಸಿ ನೆಡುವ ಮೂಲಕ ಉದ್ಯಾನವನದ ಸೌಂದರ್ಯೀಕರಣಕ್ಕೆ ಚಾಲನೆ ನೀಡಿದರು. ಪಾಲಿಕೆ ಉಪ ಆಯುಕ್ತರಾದ ಭಾಗ್ಯಶ್ರೀ ಹುಗ್ಗಿ, ಪಾಲಿಕೆ ಅಧಿಕಾರಿಗಳು ಇದ್ದರು.
ಸ್ಮಾರ್ಟ್ಸಿಟಿ ಕೇಂದ್ರಕ್ಕೆ ಭೇಟಿ: ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ನಾಗರಿಕರಿಗೆ ವಿವಿಧ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಕಾರ್ಯಚಟುವಟಿಕೆಗಳನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪರಿಶೀಲಿಸಿದರು. ವಿಶ್ವೇಶ್ವರಯ್ಯ ನಗರದಲ್ಲಿ ಇರುವ ಕಮಾಂಡ್ ಕಂಟ್ರೋಲ್ ಸೆಂಟರ್ ಗೆ ಗುರುವಾರ ಭೇಟಿ ನೀಡಿದ ಅವರು, ಈ ಸ್ಮಾರ್ಟ್ ಸಿಟಿ ಕೇಂದ್ರದ ಕಾರ್ಯ ನಿರ್ವಹಣೆ ಬಗ್ಗೆ ಮಾಹಿತಿ ಪಡೆದರು. ಸಂಚಾರ ನಿರ್ವಹಣೆ, ಬಸ್ ಸಂಚಾರ ಮಾಹಿತಿ, ಭದ್ರತಾ ನಿಗಾ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ