4 ವರ್ಷ ಅಲೆದಾಡಿದ ವ್ಯಕ್ತಿಗೆ ನ್ಯಾಯ ಒದಗಿಸಿದ ಡಿಸಿ
Team Udayavani, May 22, 2022, 9:36 PM IST
ಬೈಲಹೊಂಗಲ: ಪಟ್ಟಣದಲ್ಲಿ ನಡೆದಿದ್ದ ಜಿಲ್ಲಾಧಿಕಾರಿಗೆ ನಾಗರಿಕರಿಂದ ಅಹವಾಲು ಸಲ್ಲಿಕೆ ಕಾರ್ಯಕ್ರಮದಲ್ಲಿ ಮುತವಾಡದ ಓರ್ವ ವ್ಯಕ್ತಿ ಹೊಲದ ಪೋಡಿ ಮಾಡಿಸಲಿಕ್ಕೆ ಕಳೆದ ನಾಲ್ಕು ವರ್ಷಗಳ ಹಿಂದೆ ಅರ್ಜಿ ಸಲ್ಲಿಸಿದ್ದರೂ ಕಾರ್ಯ ನಡೆದಿಲ್ಲ ಎಂದು ಮನವಿಯನ್ನು ಡಿಸಿಗೆ ನೀಡಿದ್ದರು. ಇದರಿಂದ ಎಚ್ಚೆತ್ತ ಸರ್ವೆ ಇಲಾಖೆ ನೊಂದವರಿಗೆ ನ್ಯಾಯ ಒದಗಿಸಿದ ಘಟನೆ ನಡೆದಿದೆ.
ಮುತವಾಡ ಗ್ರಾಮದ ಸಿದ್ದಲಿಂಗಯ್ಯ ಸಿದ್ದಯ್ಯನವರ 21-10-2019 ರಂದು ಹೊಲದ ಪೊಡಿ(ಸರ್ವೆ) ಮಾಡಿಸಲಿಕ್ಕೆ ಅರ್ಜಿ ಸಲ್ಲಿಸಿದ್ದರು. ಇದು ಬೇಗ ಇತ್ಯರ್ಥವಾಗದ ಕಾರಣ 21-2-2021 ರಂದು ಬೆಳಗಾವಿ ಸುವರ್ಣ ಸೌಧ ಅಧಿವೇಶನ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು. ಆದರೂ ಯಾವುದೇ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಕಳೆದ 18 ರಂದು ಜಿಲ್ಲಾಧಿಕಾರಿ ನೀತಿಶ ಪಾಟೀಲ ಬೈಲಹೊಂಗಲಕ್ಕೆ ಬಂದ ಸಂದರ್ಭದಲ್ಲಿ ಸಮಸ್ಯೆ ತಿಳಿಸಿದಾಗ ನೇರವಾಗಿ ದೂರವಾಣಿ ಮೂಲಕ ಸಂಬಂಧಿಸಿದವರಿಗೆ ಕೆಲಸ ಮಾಡಿ ಕೊಡಲು ತಿಳಿಸಿದ್ದರು. ಇದರ ಬಗ್ಗೆ 19 ರಂದು “ಉದಯವಾಣಿ ಪತ್ರಿಕೆ”ಯಲ್ಲಿ ಬೈಲಹೊಂಗಲದಲ್ಲಿ ಜನರ ಸಮಸ್ಯೆ ಆಲಿಸಿದ ಡಿಸಿ ಎಂಬ ಅಡಿಬರಹದಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು.
ಸರ್ವೆ ಇಲಾಖೆ ಇದರಿಂದ ಎಚ್ಚೆತ್ತುಕೊಂಡು ಅರ್ಜಿದಾರನಿಗೆ ಹೊಲದಲ್ಲಿ ಸರ್ವೆ ನಡೆಸುವ ಬಗ್ಗೆ ಪತ್ರ ಕಳೆಸಿದ್ದಾರೆ. ಇದರಿಂದ ಡಿಸಿಯವರ ಸ್ಪಂದನೆಗೆ ಜನರಿಂದ ಮೆಚ್ಚಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ