ಆಸ್ಪತ್ರೆಯೋ, ಜಾತ್ರೆಯೋ ಗೊತ್ತಾಗ್ತಿಲ್ಲ ಎಂದ ಸವದಿ

ಬಿಮ್ಸ್‌ ಅವ್ಯವಸ್ಥೆ ಕಂಡು ಡಿಸಿಎಂ ಸವದಿ ಕೆಂಡಾಮಂಡಲ,­ಬಿಮ್ಸ್‌ ನಿರ್ದೇಶಕರು-ಸಿಬ್ಬಂದಿ ವಿರುದ್ಧ ವಾಗ್ಧಾಳಿ

Team Udayavani, May 30, 2021, 5:59 PM IST

29bgv-11

ಬೆಳಗಾವಿ: ಇಲ್ಲಿನ ಬಿಮ್ಸ್‌ ಆಸ್ಪತ್ರೆಯ ಕೋವಿಡ್‌ ವಾರ್ಡ್‌ಗೆ ಶನಿವಾರ ಪಿಪಿಇ ಕಿಟ್‌ ಧರಿಸಿಕೊಂಡು ಖುದ್ದಾಗಿ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಬಿಮ್ಸ್‌ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾದ ಉಪಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ನಾನು ಆಸ್ಪತ್ರೆಗೆ ಬಂದಿದ್ದೇನೋ ಅಥವಾ ಜಾತ್ರೆಗೆ ಬಂದಿದ್ದೇನೋ ಎಂಬುದು ಅರ್ಥವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿನ ಬಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಎಲ್ಲ ವಾರ್ಡ್ ಗಳನ್ನು ಖುದ್ದಾಗಿ ಪರಿಶೀಲಿಸಿ ಅವ್ಯವಸ್ಥೆ ಬಗ್ಗೆ ಬಿಮ್ಸ್‌ ಅಧಿಕಾರಿಗಳ ವಿರುದ್ಧ ಗರಂ ಆದರು. ಆಸ್ಪತ್ರೆಯಲ್ಲಿ ಶುಚಿತ್ವ ಇಲ್ಲದಿರುವುದಕ್ಕೆ ಕೇಳಿದ ಪ್ರಶ್ನೆಗೆ ಅ ಧಿಕಾರಿಗಳು ನಿರುತ್ತರರಾದರು.

ಆಸ್ಪತ್ರೆಯ ಐಸಿಯು ವಿಭಾಗವಂತೂ ಅಸ್ವತ್ಛತೆಯಿಂದ ಕೂಡಿದೆ. ಇಲ್ಲಿ ಹೇಳುವವರೂ ಇಲ್ಲ, ಕೇಳೂವವರೂ ಇಲ್ಲ ಎಂಬ ವಾತಾವರಣ ನಿರ್ಮಾಣವಾಗಿದೆ ಎಂದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಐಸಿಯು, ಕೋವಿಡ್‌ ವಾರ್ಡ್‌ ಗಳನ್ನು ಪರಿಶೀಲಿಸಿದ್ದೇನೆ. ಕೊರೊನಾ ಸೋಂಕಿತರನ್ನು ಮಾತನಾಡಿಸಿದ್ದೇನೆ. ಬೇಗ ಗುಣಮುಖರಾಗುವಂತೆ ಧೈರ್ಯ ತುಂಬಿದ್ದೇನೆ. ಕೂಡಲೇ ವ್ಯವಸ್ಥೆಯನ್ನು ಸರಿಪಿಡಿಸಿ ಶುಚಿತ್ವ ಕಾಪಾಡಿಕೊಂಡು ಸೋಂಕಿತರಿಗೆ ಪೌಷ್ಟಿಕ ಆಹಾರ ನೀಡುವಂತೆ ಸೂಚಿಸಲಾಗಿದೆ. ಬಿಮ್ಸ್‌ ಆಡಳಿತ ಮಂಡಳಿಯ ಚರ್ಮ ದಪ್ಪವಾಗಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸದ್ಯದಲ್ಲಿಯೇ ಬೆಳಗಾವಿಗೆ ಆಗಮಿಸಲಿದ್ದಾರೆ. ಆ ವೇಳೆ ಬಿಮ್ಸ್‌ನ ಅವ್ಯವಸ್ಥೆ ಬಗ್ಗೆ ಎಲ್ಲವನ್ನೂ ಹೇಳುತ್ತೇನೆ. ಶೀಘ್ರದಲ್ಲಿಯೇ ಇಲ್ಲಿಯ ಅವ್ಯವಸ್ಥೆ ಸರಿಪಡಿಸಲಾಗುವುದು ಎಂದರು.

ಆಸ್ಪತ್ರೆಗೆ ಬಂದಿದ್ದೇನೋ ಅಥವಾ ನಾನು ಜಾತ್ರೆಗೆ ಬಂದಿದ್ದೇನೋ ಎಂಬಂತೆ ಭಾಸವಾಗಿದೆ. ಬಿಮ್ಸ್ ನಲ್ಲಿ ಸ್ವತ್ಛತೆ ಸರಿಯಾಗಿಲ್ಲ. ಐಸಿಯು ವಿಭಾಗದಲ್ಲಿ ವೆಂಟಿಲೇಟರ್‌ಗಳ ಮೇಲೆ ಜನರು ಬಟ್ಟೆ ಒಣಗಲು ಹಾಕಿದ್ದಾರೆ. ಬಟ್ಟೆ ಗಂಟು ಮೂಟೆ ಕಟ್ಟಿಕೊಂಡು ಅಲ್ಲಿಯೇ ಇಟ್ಟಿದ್ದಾರೆ. ಇದನ್ನು ಸರಿ ಮಾಡುವಂತೆ ಅಧಿ ಕಾರಿಗಳಿಗೆ ತಾಕೀತು ಮಾಡಲಾಗಿದೆ. ಇಲ್ಲಿರುವ ಐಸಿಯು ವಿಭಾಗ ಐಸಿಯು ತರಹ ಇಲ್ಲ. ಅದು ಬೇರೆನೇ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮನ್ವಯತೆ ಕೊರತೆ: ಬಿಮ್ಸ್‌ನ ಪ್ರತಿ ವಾರ್ಡ್‌ನಲ್ಲಿ ಸಿಸಿ ಕ್ಯಾಮೆರಾ ಅಳವಡಿಸುತ್ತೇವೆ. ಬೇರೆ ಬೇರೆ ಪಾಳಿ (ಶಿಫ್ಟ್‌)ಯಲ್ಲಿ ವೈದ್ಯರು ಕೆಲಸ ಮಾಡುವಂತೆ ಹೇಳಲಾಗಿದೆ. ಕೋವಿಡ್‌ ನಿರ್ವಹಣೆಯಲ್ಲಿ ಜಿಲ್ಲಾಡಳಿತದ ಸಮನ್ವಯತೆ ಇಲ್ಲ. ಇದನ್ನು ಸರಿಪಡಿಸಬೇಕಾಗಿದೆ. ಅ ಧಿಕಾರಿಗಳು ತಮ್ಮ ಲೋಕದಲ್ಲಿ ತೇಲಾಡುತ್ತಿದ್ದಾರೆ. ಆ ಲೋಕದಿಂದ ಹೊರ ತರಲಾಗುವುದು. ಯಾರಿಗೆ ಏನು ಮಾಡಬೇಕು ಎಂಬುದನ್ನು ಸರಿ ಮಾಡುತ್ತೇನೆ. ಬಿಮ್ಸ್‌ ವ್ಯವಸ್ಥೆ ಸರಿ ಮಾಡಿದರೆ ಜನರು ಖಾಸಗಿ ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇರುವುದಿಲ್ಲ ಎಂದರು.

ಜಿಲ್ಲೆಗೆ ಪ್ರಧಾನ ಮಂತ್ರಿ ಕೇರ್‌ ಅಡಿ ವೆಂಟಿಲೆಟರ್‌ ಬಂದಿವೆ. ಜಿಲ್ಲಾ ಮಟ್ಟದ ಅ ಧಿಕಾರಿಗಳು ಮಲಗಿದ್ದಾರೆ. ಅನೇಕ ತಾಲೂಕುಗಳಲ್ಲಿ ವೆಂಟಿಲೆಟರ್‌ ಓಪನ್‌ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.