ಐವರು ಸಮಾಜಘಾತುಕರಿಗೆ ಬೆಳಗಾವಿಯಿಂದ ಗಡಿಪಾರು ಮಾಡಿದ ಡಿಸಿಪಿ ಗಡಾದಿ
Team Udayavani, Dec 8, 2022, 8:50 PM IST
ಬೆಳಗಾವಿ: ನಗರದಲ್ಲಿ ಮಟ್ಕಾ, ಜೂಜಾಟ, ಅಕ್ರಮ ಸಾರಾಯಿ ಮಾರಾಟ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಐವರನ್ನು ಜಿಲ್ಲೆಯಿಂದ ಗುರುವಾರದಿಂದ ಗಡಿಪಾರು ಮಾಡುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಅವರು ಸಮಾಜಘಾತುಕರಿಗೆ ಎಚ್ಚರಿಕೆ ನೀಡಿದ್ದಾರೆ.
ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಖಂಜರ ಗಲ್ಲಿಯ ಮಹ್ಮದಶಫಿ ಮೋದಿನಸಾಬ ತಹಶೀಲ್ದಾರ(68), ಇಜಾರಹ್ಮದ ಮಹ್ಮದ ಇಸಾಕ ನೇಸರಿಕರ(48), ಮಾಳಮಾರುತಿ ಠಾಣೆ ವ್ಯಾಪ್ತಿಯ ಗ್ಯಾಂಗವಾಡಿಯ ಜಯಪಾಲ ಲೋಂಡೆ(36), ಕಣಬರ್ಗಿ ಪಾಟೀಲ ಗಲ್ಲಿಯ ಬೈರಗೌಡ ಜ್ಯೋತಿಬಾ ಪಾಟೀಲ(45) ಹಾಗೂ ಶಹಾಪುರ ಠಾಣೆ ವ್ಯಾಪ್ತಿಯ ಶಹಾಪುರ ಖಡೇಬಜಾರದ ನಿತಿನ್ ಪಾಂಡುರಂಗ ಪೇಡ್ನೇಕರ(50) ಎಂಬಾತರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
ಹಲವಾರು ವರ್ಷಗಳಿಂದ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿದ್ದರಿಂದ ವಿವಿಧ ಠಾಣೆಗಳಲ್ಲಿ ಇವರ ವಿರುದ್ಧ ದೂರು ದಾಖಲಾಗಿದ್ದವು. ಈ ಐವರ ವಿರುದ್ಧ ಮಾರ್ಕೆಟ್ ಎಸಿಪಿ ಎನ್.ವಿ. ಭರಮನಿ ಅವರ ಶಿಫಾರಸ್ಸಿನಂತೆ ಡಿಸಿಪಿ ಗಡಾದಿ ಮಾಡಿದ್ದಾರೆ.
ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಟ್ಕಾ,ಜೂಜಾಟ, ಗಾಂಜಾ, ಅಕ್ರಮ ಸಾರಾಯಿ ಮಾರಾಟದಲ್ಲಿ ತೊಡಗಿದವರ ಬಗ್ಗೆ ಸಾರ್ವಜನಿಕರು ನಿರ್ಭಯವಾಗಿ ಮಾಹಿತಿ ನೀಡಬೇಕು.ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಗಡಾದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಂ ರಾಜೀನಾಮೆ ವದಂತಿ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಟ್ರಾಫಿಕ್ ದಂಡ ಪಾವತಿಗೆ ಭರ್ಜರಿ ರಿಯಾಯಿತಿ
MUST WATCH
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani
ಹೊಸ ಸೇರ್ಪಡೆ
ಮಣಿಪಾಲ: ಅಪಾರ್ಟ್ ಮೆಂಟ್ ನಲ್ಲಿ ಲಕ್ಷಾಂತರ ರೂ. ಸೊತ್ತುಗಳ ಕಳವು
ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?
ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ
ಮಂಗಳೂರು : ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬಂದಿಗೆ ಚೂರಿ ಇರಿತ
ಬಸವ ಕಲ್ಯಾಣದಲ್ಲಿ ಸಿದ್ದರಾಮಯ್ಯ,ಕೋಲಾರದಲ್ಲಿ ಡಿಕೆಶಿ: ಪ್ರಜಾಧ್ವನಿ ಯಾತ್ರೆಗೆ ಚಾಲನೆ