ಐವರು ಸಮಾಜಘಾತುಕರಿಗೆ ಬೆಳಗಾವಿಯಿಂದ ಗಡಿಪಾರು ಮಾಡಿದ ಡಿಸಿಪಿ ಗಡಾದಿ
Team Udayavani, Dec 8, 2022, 8:50 PM IST
ಬೆಳಗಾವಿ: ನಗರದಲ್ಲಿ ಮಟ್ಕಾ, ಜೂಜಾಟ, ಅಕ್ರಮ ಸಾರಾಯಿ ಮಾರಾಟ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಐವರನ್ನು ಜಿಲ್ಲೆಯಿಂದ ಗುರುವಾರದಿಂದ ಗಡಿಪಾರು ಮಾಡುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಅವರು ಸಮಾಜಘಾತುಕರಿಗೆ ಎಚ್ಚರಿಕೆ ನೀಡಿದ್ದಾರೆ.
ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಖಂಜರ ಗಲ್ಲಿಯ ಮಹ್ಮದಶಫಿ ಮೋದಿನಸಾಬ ತಹಶೀಲ್ದಾರ(68), ಇಜಾರಹ್ಮದ ಮಹ್ಮದ ಇಸಾಕ ನೇಸರಿಕರ(48), ಮಾಳಮಾರುತಿ ಠಾಣೆ ವ್ಯಾಪ್ತಿಯ ಗ್ಯಾಂಗವಾಡಿಯ ಜಯಪಾಲ ಲೋಂಡೆ(36), ಕಣಬರ್ಗಿ ಪಾಟೀಲ ಗಲ್ಲಿಯ ಬೈರಗೌಡ ಜ್ಯೋತಿಬಾ ಪಾಟೀಲ(45) ಹಾಗೂ ಶಹಾಪುರ ಠಾಣೆ ವ್ಯಾಪ್ತಿಯ ಶಹಾಪುರ ಖಡೇಬಜಾರದ ನಿತಿನ್ ಪಾಂಡುರಂಗ ಪೇಡ್ನೇಕರ(50) ಎಂಬಾತರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
ಹಲವಾರು ವರ್ಷಗಳಿಂದ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿದ್ದರಿಂದ ವಿವಿಧ ಠಾಣೆಗಳಲ್ಲಿ ಇವರ ವಿರುದ್ಧ ದೂರು ದಾಖಲಾಗಿದ್ದವು. ಈ ಐವರ ವಿರುದ್ಧ ಮಾರ್ಕೆಟ್ ಎಸಿಪಿ ಎನ್.ವಿ. ಭರಮನಿ ಅವರ ಶಿಫಾರಸ್ಸಿನಂತೆ ಡಿಸಿಪಿ ಗಡಾದಿ ಮಾಡಿದ್ದಾರೆ.
ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಟ್ಕಾ,ಜೂಜಾಟ, ಗಾಂಜಾ, ಅಕ್ರಮ ಸಾರಾಯಿ ಮಾರಾಟದಲ್ಲಿ ತೊಡಗಿದವರ ಬಗ್ಗೆ ಸಾರ್ವಜನಿಕರು ನಿರ್ಭಯವಾಗಿ ಮಾಹಿತಿ ನೀಡಬೇಕು.ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಗಡಾದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್