ವೇತನ ವಿಳಂಬದಿಂದ ಪೌರ ಕಾರ್ಮಿಕ ಸಾವು: ಆಕ್ರೋಶ
Team Udayavani, Sep 16, 2019, 9:47 AM IST
ಬೆಳಗಾವಿ: ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪೌರ ಕಾರ್ಮಿಕ ಮೃತಪಟ್ಟಿದ್ದು, ಮಹಾನಗರ ಪಾಲಿಕೆ ನಾಲ್ಕು ತಿಂಗಳಿಂದ ವೇತನ ಪಾವತಿಸದೆ ಹಗಲು ರಾತ್ರಿ ದುಡಿಸಿದ್ದಾರೆ, ಹೀಗಾಗಿ ಅನಾರೋಗ್ಯದಿಂದ ಪೌರ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಪೌರ ಕಾರ್ಮಿಕರು ಸೋಮವಾರ ಬೆಳಗ್ಗೆ ಖಾಸಗಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ಅನಿಲ್ ಕಾಂಬಳೆ (28) ಎಂಬಾತ ಅನಾರೋಗ್ಯದಿಂದ ಮೃತಪಟ್ಟ ಪೌರ ಕಾರ್ಮಿಕ. ಕಳೆದ ಕೆಲವು ತಿಂಗಳಿಂದ ವೇತನ ಪಾವತಿ ಆಗಿಲ್ಲ. ಗಣೇಶೋತ್ಸವ ವೇಳೆಯೂ ಹಗಲು, ರಾತ್ರಿ ಎನ್ನದೇ ಪೌರ ಕಾರ್ಮಿಕ ನಗರದಲ್ಲಿ ಕೆಲಸ ಮಾಡಿದ್ದನು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅನಿಲ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ದಿನ ದಿನಕ್ಕೂ ಆರೋಗ್ಯ ಹದಗೆಡುತ್ತಿದ್ದಂತೆ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಾಧ್ಯವಾಗಿರಲಿಲ್ಲ. ಹಣಕಾಸಿನ ಮುಗ್ಗಟ್ಟಿನಿಂದ ಬಸವಳಿದಿದ್ದ ಈ ಕುಟುಂಬಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಸಾಧ್ಯವಾಗಿರಲಿಲ್ಲ. ಸೋಮವಾರ ಚಿಕಿತ್ಸೆ ಫಲಿಸದೇ ಅನಿಲ್ ಮೃತಪಟ್ಟಿದ್ದಾನೆ.
ಅನಿಲ್ ನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪೌರ ಕಾರ್ಮಿಕರು ಆಸ್ಪತ್ರೆಗೆ ಧಾವಿಸಿ ಮಹಾನಗರ ಪಾಲಿಕೆ ಎದುರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು.
ಈ ಬಗ್ಗೆ ಉದಯವಾಣಿಗೆ ಪ್ರತಿಕ್ರಿಯೆ ನೀಡಿದ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಪೌರ ಕಾರ್ಮಿಕರಿಗೆ ನಾಲ್ಕು ತಿಂಗಳ ವೇತನ ವಿಳಂಬ ಆಗಿಲ್ಲ. ಆಗಿರುವ ತೊಂದರೆ ಬಗೆ ಹರಿಸಲಾಗುವುದು. ಅವರಿಗೆ ಅಗತ್ಯ ಇರುವ ಇಎಸ್ ಐ, ಪಿಎಫ್ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವುದೇ ಸಮಸ್ಯೆ ಆಗದಂತೆ ಪಾಲಿಕೆ ಪೌರ ಕಾರ್ಮಿಕರ ಹಿತದೃಷ್ಟಿಯಲ್ಲಿ ಸೂಕ್ತ ಕ್ರಮಕ್ಕೆ ಮುಂದಾಗಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ