10 ಲಕ್ಷ ರೂ. ಎಗರಿಸಿದ್ದ ದಂಪತಿ ಅಂದರ್‌

ಜಾರ್ಖಂಡ್‌ನ‌ ಚಾಲಾಕಿ ದಂಪತಿ ಬಂಧಿಸಿದ ಖಾಕಿ ಪಡೆ! ­ಕಂಗ್ರಾಳಿಯ ನಿವೃತ್ತ ನೌಕರನಿಗೆ ವಂಚಿಸಿದ್ದ ಚಾಲಾಕಿಗಳು

Team Udayavani, Jul 21, 2021, 8:14 PM IST

20bgv-13

ಬೆಳಗಾವಿ: ಬ್ಯಾಂಕ್‌ ಖಾತೆಯ ಕೆವೈಸಿ ಪರಿಷ್ಕೃತಗೊಳಿಸಲು ದಾಖಲೆ ಹಾಗೂ ಒಟಿಪಿ ಸಂಖ್ಯೆ ಪಡೆದು 10 ಲಕ್ಷ ರೂ. ಎಗರಿಸಿದ್ದ ದಂಪತಿ ಸೇರಿ ಮೂವರನ್ನು ಬಂಸುವಲ್ಲಿ ಬೆಳಗಾವಿ ಸಿಇಎನ್‌ ಪೊಲೀಸರು ಯಶಸ್ವಿಯಾಗಿದ್ದು, 12.56 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.

ಜಾರ್ಖಂಡ್‌ ರಾಜ್ಯದ ಜಾಮತಾರಾ ಜಿಲ್ಲೆಯ ಚಂದ್ರಪ್ರಕಾಶ ದಾಸ್‌(30), ಆಶಾದೇವಿ ಚಂದ್ರಪ್ರಕಾಶ ದಾಸ್‌(25) ದಂಪತಿ ಹಾಗೂ ಮಹಾರಾಷ್ಟ್ರದ ನಾಸಿಕ್‌ನ ಅನ್ವರ್‌ ಅಕ್ಬರ್‌ ಶೇಖ್‌ (24) ಎಂಬುವರನ್ನು ಬಂಧಿಸಿ 12.56 ಲಕ್ಷ ರೂ. ನಗದು, ಐದು ಮೊಬೈಲ್‌, ಮೂರು ಡೆಬಿಟ್‌ ಕಾರ್ಡ್‌ ವಶಪಡಿಸಿಕೊಂಡಿದ್ದಾರೆ.

ವಂಚನೆ ಆಗಿದ್ದು ಹೇಗೆ?: ಕಂಗ್ರಾಳಿ ಕೆಎಚ್‌ ಗ್ರಾಮದ ಬಿಎಸ್‌ ಎನ್‌ಎಲ್‌ ನಿವೃತ್ತ ನೌಕರ ಯಲ್ಲಪ್ಪ ನಾರಾಯಣ ಜಾಧವ ಎಂಬವರಿಗೆ ಬಂ ಧಿತ ದಂಪತಿ ಕರೆ ಮಾಡಿದ್ದಾರೆ. ಎಸ್‌ಬಿಐ ಖಾತೆಯ ಕೆವೈಸಿ ಪರಿಷ್ಕೃತಗೊಳಿಸಲು ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ಬುಕ್‌ ಝೆರಾಕ್ಸ್‌ ಪ್ರತಿಯನ್ನು ವಾಟ್ಸ್‌ಆ್ಯಪ್‌ ಮೂಲಕ ಪಡೆದುಕೊಂಡಿದ್ದಾರೆ. ನಂತರ ಮೊಬೈಲ್‌ನಿಂದ ಮೆಸೆಜ್‌ ಮಾಡಿ ಅದರ ಲಿಂಕ್‌ ಕಳುಹಿಸಿದ್ದಾರೆ. ನಂತರ ಆ ಲಿಂಕ್‌ ಕ್ಲಿಕ್‌ ಮಾಡಿಸಿ ಮೊಬೈಲ್‌ಗೆ ಬಂದ ಒಟಿಪಿ ಪಡೆದು ಹಣ ಎಗರಿಸಿದ್ದರು. ಹಂತ ಹಂತವಾಗಿ 102 ಬಾರಿ ಒಟಿಪಿ ಹಂಚಿಕೊಂಡಿದ್ದ ಯಲ್ಲಪ್ಪ ಜಾಧವ ಅವರ ಅಕೌಂಟ್‌ನಿಂದ ಒಟ್ಟು 10 ಲಕ್ಷ ರೂ. ದೋಚಿದ್ದಾರೆ.

ಅಕೌಂಟ್‌ನಿಂದ ಹಣ ಹೋಗಿರುವ ಬಗ್ಗೆ ತಿಳಿದ ಕೂಡಲೇ ಯಲ್ಲಪ್ಪ ಅವರು ಜೂ.10ರಂದು ಸಿಇಎನ್‌ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದರು.. ಸೈಬರ್‌ ವಂಚನೆ ಪ್ರಕರಣದ ದೂರು ದಾಖಲಿಸಿಕೊಂಡ ಇನ್ಸ್ಪೆಕ್ಟರ್‌ ಬಿ.ಆರ್‌.ಗಡ್ಡೇಕರ ನೇತೃತ್ವದ ತಂಡ ಪ್ರಕರಣದ ಬೆನ್ನತ್ತಿತ್ತು. ಕೆಲವೇ ದಿನಗಳಲ್ಲಿ ಕದೀಮರ ಪೂರ್ವಾಪರ ತಿಳಿದುಕೊಂಡು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಡಿಸಿಪಿ ಡಾ. ವಿಕ್ರಮ್‌ ಆಮ್ಟೆ ತಿಳಿಸಿದರು.

ಕಾರ್ಯಾಚರಣೆಯಲ್ಲಿ ಇನ್ಸ್‌ಪೆಕ್ಟರ್‌ ಬಿ.ಆರ್‌. ಗಡ್ಡೇಕರ, ಸಿಬ್ಬಂದಿಗಳಾದ ವಿಜಯ ಬಡವಣ್ಣವರ, ಮಾರುತಿ ಕೋನ್ಯಾಗೋಳ, ಕೆ.ವಿ. ಚರಲಿಂಗಮಠ, ಭುವನೇಶ್ವರಿ ಸೇರಿ ಅನೇಕರು ಇದ್ದರು.

ಟಾಪ್ ನ್ಯೂಸ್

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.