21ರಂದು ರೈತ ಹುತಾತ್ಮ ದಿನ ಆಚರಣೆಗೆ ನಿರ್ಧಾರ


Team Udayavani, Jul 15, 2021, 10:49 PM IST

s್ಹಜಹ್ದಸದಸ್ಗಹ್ಹ್ದಸ

ಚನ್ನಮ್ಮನ ಕಿತ್ತೂರ: ತಾಲೂಕಿನ ನಿಚ್ಚಣಕಿ ಗ್ರಾಮದ ಶ್ರೀ ಮಡಿವಾಳೇಶ್ವರ ಮಠದಲ್ಲಿ ಜರುಗಿದ ಬಾಬಾಗೌಡ ಪಾಟೀಲರ ಅಭಿಮಾನಿ ಬಳಗದ ಸಭೆಯಲ್ಲಿ ರೈತ ಹೋರಾಟಗಾರ, ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ಅವರ ಸಮಾಧಿ  ಬಳಿ ಜು. 21 ರಂದು ರೈತ ಹುತಾತ್ಮ ದಿನ ಆಚರಿಸಲು ಬಾಬಾಗೌಡ ಪಾಟೀಲರ ಅಭಿಮಾನಿ ಬಳಗ ತೀರ್ಮಾನಿಸಿತು.

ಸಭೆಯಲ್ಲಿ ರೈತ ಮುಖಂಡ ಮಲ್ಲಿಕಾರ್ಜುನ ವಾಲಿ ಮಾತನಾಡಿ, ಇತ್ತೀಚಿನ ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ ವಿರೋ ಧಿ ಕಾನೂನುಗಳಿಂದ ಕೃಷಿ ವಲಯದ ಮೇಲೆ ಬಹು ದೊಡ್ಡ ಪೆಟ್ಟು ಬೀಳುತ್ತಿದೆ. ಈ ಸಂದರ್ಭದಲ್ಲಿ ರೈತರ ಪರವಾಗಿ ಗಟ್ಟಿ ಧ್ವನಿ ಮೊಳಗಬೇಕಿದೆ. ಈ ದಿಸೆಯಲ್ಲಿ ಪೂರ್ವಿಕರಿಂದ ಬಂದ ರೈತ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಹೊಣೆಯನ್ನು ಯುವ ಸಮುದಾಯ ನಿಭಾಯಿಸಬೇಕಿದೆ. ಇನ್ನೊಂದೆಡೆ ಢೋಂಗಿ ರೈತ ಹೋರಾಟಗಾರರಿಂದ ರೈತ ಸಂಘಟನೆಗಳ ಗೌರವಕ್ಕೆ ಧಕ್ಕೆಯಾಗಿದೆ.

ಇದರಿಂದ ಪ್ರಾಮಾಣಿಕ ಹೋರಾಟಗಾರರನ್ನು ಗುರುತಿಸಲು ರೈತರಿಗೆ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ರೈತರು ಸದಾ ಜಾಗೃತರಾಗಿರಬೇಕು ಎಂದು ವಾಲಿ ಮನವಿ ಮಾಡಿದರು. ಹಿರಿಯ ನ್ಯಾಯವಾದಿ ಪಿ.ಎಚ್‌. ನೀರಲಕೇರಿ ಮಾತನಾಡಿ, ಬಾಬಾಗೌಡರು ಬಸವತತ್ವದಡಿ ರೈತ ಹೋರಾಟವನ್ನು ಮುನ್ನಡೆಸಿದವರು. ಸರಕಾರಗಳ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಕೃಷಿ ವಿರೋ ಧಿ ನೀತಿಗಳ ವಿರುದ್ಧ ಜೀವನವಿಡಿ ಹೋರಾಡಿದವರು. ಅವರ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ರೈತ ಚಳುವಳಿ ರೂಪುಗೊಳ್ಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಸಮಾನ ಮನಸ್ಕರು ಒಂದೇ ಸೂರಿನಡಿ ಹೋರಾಡಲು ಕಾಯೊìàನ್ಮುಖರಾಗಬೇಕಿದೆ ಎಂದರು. ಸಭೆಯಲ್ಲಿ ರೈತ ಮುಖಂಡರಾದ ಸಿದ್ಧನಗೌಡ ಪಾಟೀಲ, ಶಿವಾನಂದ ಹೊಳೆಹಡಗಲಿ, ಶಂಕ್ರಪ್ಪ ಯಡಳ್ಳಿ, ಕಲ್ಲಪ್ಪ ಕುಗಟಿ, ನಿಂಗಪ್ಪ ಹೊನಕುಪ್ಪಿ, ಗಿರೆಪ್ಪ ಪರವಣ್ಣವರ, ಬಸವರಾಜ ಡೊಂಗರಗಾವಿ, ಕಲಗೌಡ ಪಾಟೀಲ, ಈಶಪ್ರಭು ಬಾಬಾಗೌಡ ಪಾಟೀಲ, ಸಿದ್ದು ಕಂಬಾರ, ಶ್ರೀಶೈಲಗೌಡ ಕಮತರ, ಪ್ರೊ.ಎನ್‌.ಎಸ್‌.ಗಲಗಲಿ, ರಮೇಶ ಹಂಚಿಮನಿ ಮಾತನಾಡಿದರು, ನಿಂಗಪ್ಪ ನಂದಿ, ಉಳವಪ್ಪ ಒಡೆಯರ, ಸೋಮಲಿಂಗ ಪುರದ, ಶಾಂತಪ್ಪ ದೊಡವಾಡ, ಯಲ್ಲಪ್ಪ ಅವರಾದಿ, ಬಸವರಾಜ ಅಸುಂಡಿ, ಬಸಪ್ಪ ಶೀಗಿಹಳ್ಳಿ, ಮಲ್ಲಿಕಾರ್ಜುನ ಹುಂಬಿ, ಬಸವೇಶ್ವರ ಸಿದ್ಧಸಮುದ್ರ, ಫಕ್ಕೀರಪ್ಪ ದಳವಾಯಿ ಸೇರಿದಂತೆ ಅನೇಕ ಮುಖಂಡರು ಮತ್ತು ಅಭಿಮಾನಿಗಳು ಸಭೆಯಲ್ಲಿದ್ದರು. ರೈತ ಮುಖಂಡ ಅಪ್ಪೇಶ ದಳವಾಯಿ ಸ್ವಾಗತಿಸಿ, ವಂದಿಸಿದರು.

 

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.