ಕರ್ತವ್ಯಲೋಪ; ತಹಶೀಲ್ದಾರ್‌ ಹುದ್ದೆಯಿಂದ ಬಿಡುಗಡೆ


Team Udayavani, Jun 12, 2022, 3:39 PM IST

16

ತೆಲಸಂಗ: ಕರ್ನಾಟಕ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳಿಗೆ ಸಂಬಂಧಪಟ್ಟ ಮತದಾರರ ಹೆಸರುಗಳನ್ನು ಸೇರಿಸುವಲ್ಲಿ ಅಥಣಿ ತಹಶೀಲ್ದಾರ್‌ ಲೋಪವೆಸಗಿದ್ದಕ್ಕೆ ಬೆಳಗಾವಿ ಪ್ರಾದೇಶಿಕ ಆಯುಕ್ತರ ಸೂಚನೆಯ ಮೇರೆಗೆ ಅಥಣಿ ಗ್ರೇಡ್‌ 1 ತಹಶೀಲ್ದಾರ್‌ ದುಂಡಪ್ಪ ಕೋಮಾರ ಅವರನ್ನು ಅಥಣಿ ತಹಶೀಲ್ದಾರ್‌ ಹುದ್ದೆಯಿಂದ ಬಿಡುಗಡೆಗೊಳಿಸಿ ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ ಆದೇಶ ಹೊರಡಿಸಿದ್ದಾರೆ.

ಅಥಣಿ ತಾಲೂಕಿನಲ್ಲಿ ಶಿಕ್ಷಕರು ಹಾಗೂ ಪದವೀಧರರು ಮತದಾರರ ಪಟ್ಟಿಯಲ್ಲಿ ನಿಗದಿತ ನಮೂನೆಯಲ್ಲಿ ದಾಖಲಾತಿಗಳೊಂದಿಗೆ ಮಾಹಿತಿ ನೀಡಿದ್ದರೂ ಸಹ ಸಾಕಷ್ಟು ಹೆಸರುಗಳು ಅಂತಿಮ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿಲ್ಲ. ಸಾಕಷ್ಟು ಮತದಾರರ ನೋಂದಣಿ ಅರ್ಜಿಗಳನ್ನು ಬಾಕಿ ಇಟ್ಟುಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಅಥಣಿ ಇವರು ಚುನಾವಣಾ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯತನ ತೋರಿಸಿದ್ದು, ಚುನಾವಣಾ ಆಯೋಗ ಹಾಗೂ ಮೇಲಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿ ಕರ್ತವ್ಯ ನಿರ್ವಹಣೆಯಲ್ಲಿ ಬೇಜವಾಬ್ದಾರಿತನ ತೋರಿರುತ್ತಾರೆ. ಸದರಿ ಅಂಶವನ್ನು ಗಂಭೀರವಾಗಿ ಪರಿಗಣಿಸಿ, ಚುನಾವಣಾ ಪ್ರಕ್ರಿಯೆ ಅಂತಿಮ ಹಂತದಲ್ಲಿರುವುದರಿಂದ ಮತ್ತಷ್ಟು ಲೋಪಗಳು ಜರುಗದಂತೆ ತಹಶೀಲ್ದಾರ್‌ ದುಂಡಾಪ್ಪ ಕೋಮಾರ ಅವರನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಹಾಗೂ ಅವರ ಸ್ಥಾನಕ್ಕೆ ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶ ಗ್ರೇಡ್‌ 2 ತಹಶೀಲ್ದಾರ್‌ ವಿ.ಎಂ.ಗೋಠೆಕರ ಅವರನ್ನು ನಿಯುಕ್ತಿಗೊಳಿಸಲು ಹಾಗೂ ದುಂಡಪ್ಪ ಕೋಮಾರ ಮೇಲೆ ಪ್ರಕರಣ ದಾಖಲಿಸಿ, ಸೇವೆಯಿಂದ ಅಮಾನತುಗೊಳಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.

ಅವರ ಸೂಚನೆ ಅನ್ವಯ ದುಂಡಪ್ಪ ಕೋಮಾರ ಅವರನ್ನು ಜೂ.10 ರಂದು ಅಪರಾಹ್ನ ಅಥಣಿ ತಹಶೀಲ್ದಾರ್‌ ಹುದ್ದೆಯಿಂದ ಬಿಡುಗಡೆಗೊಳಿಸಿ, ವಿ.ಎಂ. ಗೋಠೆಕರ ಅವರನ್ನು ಅಥಣಿ ತಹಶೀಲ್ದಾರ್‌ ಹುದ್ದೆಗೆ ಮುಂದಿನ ಆದೇಶದವರೆಗೆ ಸ್ಥಳ ನಿಯುಕ್ತಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಜೂ.8ರಂದು ಅಥಣಿ ತಹಶೀಲ್ದಾರ್‌ ಕಚೇರಿಯ ಮತದಾರರ ಹೆಸರು ಸೇರ್ಪಡೆ ನಿರ್ಲಕ್ಷ್ಯದ ಕುರಿತು ಮತದಾರರ ಪಟ್ಟಿಯಲಿಲ್ಲ ಶಿಕ್ಷಕರ ಹೆಸರು! ಎಂಬ ಶೀರ್ಷಿಕೆಯಡಿ “ಉದಯವಾಣಿ’ ವರದಿ ಪ್ರಕಟಿಸಿ ಗಮನ ಸೆಳೆದಿತ್ತು. ವರದಿ ಆಧರಿಸಿದ ಅಧಿಕಾರಿಗಳು, ಸಮಸ್ಯೆ ಪರಿಶೀಲಿಸಿ ತಹಶೀಲ್ದಾರ್‌ ದುಂಡಪ್ಪ ಕೋಮಾರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಕ್ರಮಕ್ಕೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.