ಯೋಜನೆ ಅರ್ಹರಿಗೆ ತಲುಪಿಸಿ
Team Udayavani, Sep 22, 2019, 10:30 AM IST
ಬೈಲಹೊಂಗಲ: ಕೇಂದ್ರ, ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಸೌಲಭ್ಯವನ್ನು ಪ್ರತಿಯೊಬ್ಬ ನಾಗರಿಕರಿಗೆ ಅಧಿಕಾರಿಗಳು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.
ತಾಲೂಕಿನ ನೇಸರಗಿ ಗ್ರಾಮದ ಶಾಸಕರ ಕಚೇರಿಯಲ್ಲಿ ಶನಿವಾರ ನಡೆದ ಪಿಂಚಣಿ ಅದಾಲತ್, ನೇಸರಗಿ ಹೋಬಳಿಯ ತಾಲೂಕು ಮಟ್ಟದ ಅ ಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರಕಾರಿ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ನಾಗರಿಕರು ಪರದಾಡುವಂತಾಗಿದೆ. ಸಾರ್ವಜನಿಕರ ಕೆಲಸಗಳಿಗೆ ತುರ್ತಾಗಿ ಅ ಧಿಕಾರಿಗಳು ಸ್ಪಂದನೆ ಮಾಡಬೇಕು. ತಾಲೂಕು ಅಧಿಕಾರಿಗಳು ಪ್ರತಿ ಸಿಬ್ಬಂದಿ ಕೆಲಸ ಮಾಡಿದ ದಿನಚರಿಯನ್ನು ಸಂಬಂಧಿಸಿದ ಶಾಸಕರು, ಜನಪ್ರತಿನಿ ಧಿಗಳಿಗೆ ಕಳುಹಿಸಿಕೊಡಬೇಕು.ಅಧಿಕಾರಿಗಳು ದಿನಚರಿ ಮಾಡುವ ಪರಿಪಾಠ ಬೆಳೆಸಿಕೊಳ್ಳಬೇಕು. ಕೆಲಸದಲ್ಲಿ ಗೈರು ಇದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ನೇಸರಗಿ ಸರಕಾರಿ ಐಟಿಐ ಕಾಲೇಜು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಕಚೇರಿ ಕಟ್ಟಡವನ್ನು ಎಪಿಎಂಸಿ ಪ್ರಾಂಗಣದಲ್ಲಿ ಬೇಗ ಗ್ರಾಮದಲ್ಲಿ ಪ್ರಾರಂಭಿಸಬೇಕು. ಶಾಸಕರು ಮುತುವರ್ಜಿ ವಹಿಸಿ ಕ್ರಮ ಕೈಗೊಳ್ಳಬೇಕು. ಗ್ರಾಮಸ್ಥರು ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡುವುದಾಗಿ ಗ್ರಾಮಸ್ಥರು ಸಭೆಯಲ್ಲಿ ತಿಳಿಸಿದರು. ಇದೇ ಸಂದರ್ಭದಲ್ಲಿ ಪಿಂಚಣಿ ಅದಾಲತ್ನಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಜಿಪಂ ಸದಸ್ಯ ನಿಂಗಪ್ಪ ತಳವಾರ, ತಹಶೀಲ್ದಾರ್ ಡಾ| ದೊಡ್ಡಪ್ಪ ಹೂಗಾರ, ತಾಪಂ ಕಾರ್ಯನಿರ್ವಾಹಕ ಅಧಿ ಕಾರಿ ಸಮೀರ್ ಮುಲ್ಲಾ, ಬಿಇಒ ಪಾರ್ವತಿ ವಸ್ತ್ರದ, ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಪ್ರತಿಭಾ ಹೂಗಾರ, ತಾಪಂ ಉಪಾಧ್ಯಕ್ಷ ಮಲ್ಲನಾಯ್ಕ ಬಾಂವಿ, ತಾಪಂ ಸದಸ್ಯ ಶ್ರೀಶೈಲ ಕಮತಗಿ, ತಾಪಂ ಎಡಿ ಸುಭಾಶ ಸಂಪಗಾಂವಿ, ಐಟಿಐ ಪ್ರಾಚಾರ್ಯ ಎನ್.ಎಂ. ದಾಸ್ತಿಕೊಪ್ಪ, ಗ್ರಾಪಂ ಅಧ್ಯಕ್ಷ ಸತಾರ ಮೋಕಾಶಿ, ಮುಖಂಡರಾದ ಕೆಂಚಪ್ಪ ಕಳ್ಳಿಬಡ್ಡಿ, ಬಾಳಪ್ಪ ಮಾಳಗಿ, ಡಾ| ಚನಗೌಡ ಪಾಟೀಲ, ಅಡಿವೆಪ್ಪ ಮಾಳನ್ನವರ,ಸೋಮಶೇಖರ ಮಾಳನ್ನವರ, ನಿಂಗಪ್ಪ ತಳವಾರ, ಸೋಮನಗೌಡ ಪಾಟೀಲ, ಪ್ರಕಾಶ ತೋಟಗಿ, ಮುಕಬುಲ್ ಬೇಪಾರಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ