ವ್ಯಾಪಾರಸ್ಥರಿಗೆ ಪರಿಹಾರ ಕಲ್ಪಿಸಲು ಆಗ್ರಹ


Team Udayavani, Oct 23, 2019, 9:04 AM IST

bg-tdy-3

ಗೋಕಾಕ: ನೆರೆಹಾವಳಿಗೆ ಹಾನಿ ಅನುಭವಿಸಿದ ವ್ಯಾಪಾರಸ್ಥರ ಹಾನಿ ಕುರಿತು ಇಲ್ಲಿಯ ಜೆಸಿಐ ಸಂಸ್ಥೆ ನಡೆಸಿದ ಸಮೀಕ್ಷೆ ಆಧಾರದ ಮೇಲೆ ವ್ಯಾಪಾರಸ್ಥರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಧನ ನೀಡುವಂತೆ ಆಗ್ರಹಿಸಿ ವ್ಯಾಪಾರಸ್ಥರು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಈ ವೇಳೆ ಬಿಜೆಪಿ ಮುಖಂಡ ಅಶೋಕ ಪೂಜಾರಿ ಮಾತನಾಡಿ, ಈಗಾಗಲೇ ಸರ್ಕಾರ ವ್ಯಾಪಾರಸ್ಥರಿಗೆ 25000 ರೂ. ಪರಿಹಾರ ಧನ ಘೋಷಿಸಿದ್ದಾರೆ. ಆದರೆ ವಾಸ್ತವವಾಗಿ ಹಾನಿಗೆ ಒಳಗಾದ ವ್ಯಾಪಾರಸ್ಥರ ಬದುಕು ಶೋಚನೀಯವಾಗಿದೆ. ಬಹುತೇಕ ವ್ಯಾಪಾರಸ್ಥರು ವಾಣಿಜ್ಯ ಬ್ಯಾಂಕುಗಳು ಮತ್ತು ಖಾಸಗಿ ವ್ಯಕ್ತಿಗಳ ಕಡೆಗೆ ಲಕ್ಷಾಂತರ ರೂಪಾಯಿಗಳ ಸಾಲ ಮಾಡಿ ತಮ್ಮ ವ್ಯಾಪಾರವನ್ನು ನಡೆಸುತ್ತಿದ್ದು, ಈಗ ಅವರೆಲ್ಲರೂ ಈ ಸಾಲವನ್ನು ತೀರಿಸಲಾರದ ದುಸ್ಥಿತಿಗೆ ಒಳಗಾಗಿದ್ದಾರೆ ಎಂದರು.

ಇಂತಹ ಸಂದರ್ಭದಲ್ಲಿ ವ್ಯಾಪರಸ್ಥರು ಹಾನಿಗೆ ಒಳಗಾದ ಪ್ರಮಾಣಕ್ಕೆ ಪೂರಕವಾದ ಹೆಚ್ಚುವರಿ ಧನಸಹಾಯ ಸರಕಾರದಿಂದ ನೀಡಿದಾಗ ಮಾತ್ರ ಅವರು ತಮ್ಮ ಉದ್ಯೋಗ ಮುಂದುವರಿಸಲು ಸಾಧ್ಯವಾಗುತ್ತದೆ. ಈಗಾಗಲೇ ನಗರದ ಸೇವಾ ಸಂಸ್ಥೆಗಳು ಖುದ್ದಾಗಿ ಸಮೀಕ್ಷೆ ನಡೆಸಿ ವಾಸ್ತವ ವರದಿಯನ್ನು ಮನವಿ ಮುಖಾಂತರ ಸಲ್ಲಿಸಲಾಗಿದ್ದು, ಸರ್ಕಾರ ಕೂಡಲೇ ಪೂರಕವಾದ ಕ್ರಮ ಜರುಗಿಸಿ ಸೂಕ್ತ ಪರಿಹಾರ ಧನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದರು.

ನ್ಯಾಯವಾದಿ ವಿಷ್ಣು ಲಾತೂರ ಮಾತನಾಡಿ, ನಗರದಲ್ಲಿ ನೆರೆಯಿಂದ ಹಾನಿಗೊಳಗಾದ ವ್ಯಾಪಾರಸ್ಥರ ಸಂಪೂರ್ಣ ವಿವರಣೆಯನ್ನು ಖುದ್ದಾಗಿ ಪರಿಶೀಲಿಸಿ ಸಮೀಕ್ಷೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಒಟ್ಟು ಹಾನಿಗೊಳಗಾದ 410 ವ್ಯಾಪಾರಸ್ಥರ ಅಂಗಡಿಗಳಿಗೆ ಭೇಟಿಯಾಗಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಅದರ ಸಂಪೂರ್ಣ ವಿವರಣೆಯನ್ನು ಅವರ ವೈಯಕ್ತಿಕ ಅರ್ಜಿಯ ಜೊತೆಗೆ ಮುಖ್ಯಮಂತ್ರಿಗೆ ಮನವಿ ಮೂಲಕ ವಿವರಿಸಲಾಗಿದೆ ಎಂದರು.

ಈ ವೇಳೆ ಜೆ.ಸಿ.ಐ. ಸಂಸ್ಥೆಯ ಅಧ್ಯಕ್ಷ ಮಹಾವೀರ ಖಾರೇಪಠಾಣ, ವಲಯ ನಿರ್ದೇಶಕ ಕೆಂಪಣ್ಣ ಚಿಂಚಲಿ, ರಜನಿಕಾಂತ ಮಾಳ್ಳೋದೆ, ಸಂತೋಷ ಖಂಡ್ರೆ, ರವಿ ಮಾಲದಿನ್ನಿ, ಸುಭಾಸ ಘಸ್ತಿ, ಅಶೋಕ ಕುರಬೇಟ, ವಿಜಯಕುಮಾರ ಖಾರೇಪಠಾಣ, ರಾಜಶೇಖರ ಕೋಕ್ಕರಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.