ವಿದ್ಯುತ್ ಸಂಪರ್ಕ ಕಲ್ಪಿಸಲು ಆಗ್ರಹ
Team Udayavani, Apr 21, 2019, 2:59 PM IST
ಸವದತ್ತಿ: ಮಲಪ್ರಭಾ ಹಿನ್ನೀರಿಗೆ ಪೈಪಲೈನ್ ಮೂಲಕ ನೀರು ಪಡೆದ ರೈತರ ಪಂಪ್ಸೆಟ್ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದನ್ನು ಖಂಡಿಸಿದ ಸವದತ್ತಿ, ಉಗರಗೋಳದ ರೈತರು ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಪ್ರತಿಭಟನೆ ನಡೆಸಿದರು.
ಇದಕ್ಕೂ ಮೊದಲು ರೈತರು 10 ಗಂಟೆವರಗೆ ಕಾಯ್ದರೂ ಯಾವ ಇಲಾಖೆಯ ಅಧಿಕಾರಿಗಳು ಸ್ಪಂದಿಸದಿರುವದರಿಂದ ರೈತರು ರಸ್ತೆಗೆ ಮುಳ್ಳಿನ ಬೇಲಿ ಹಾಕಿ ಬಂದ್ ಮಾಡಿ ಆಕ್ರೋಶ ವ್ಯಕ್ತ ಪಡಿಸಿದರು.
ಈ ವೇಳೆ ರೈತ ಶಿವಾನಂದ ಹೂಗಾರ ಮಾತನಾಡಿ, ಹೆಸ್ಕಾಂ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಜಿಲ್ಲಾಕಾರಿಗಳ ಆದೇಶದ ಮೇರಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು, ಇಲ್ಲವಾದಲ್ಲಿ ಅವರ ಆದೇಶದಂತೆ 6 ದಿನ ಮಾತ್ರ ತಗೆದು ಮತ್ತೆ ಯಥಾಸ್ಥಿತಿ ಪೂರೈಸಲಾಗುವುದು ಎಂದು ಹೇಳಿದ್ದರು. ಆದರೆ 6 ದಿನಗಳಾದರೂ ನಮಗೆ ವಿದ್ಯುತ್ ಪೂರೈಸಿಲ್ಲ. ಜಿಲ್ಲಾಧಿಕಾರಿ ಆದೇಶ ಬಂದಿದ್ದರೂ ಹೆಸ್ಕಾಂ ಅಧಿಕಾರಿಗಳು ಹಾರಿಕೆ ಉತ್ತರ ನೀಡುತ್ತಿರುವುದು ಸರಿಯಲ್ಲ. ಎಂದು ಆರೋಪಿಸಿದ ರೈತರು, ಬಿಸಿಲಿನ ತಾಪಕ್ಕೆ ನೀರಿನ ಸಮಸ್ಯೆ ಎದುರಾಗಿದ್ದು, ಶೀಘ್ರವೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ವಿದ್ಯುತ್ ಕಲ್ಪಿಸುವಂತೆ ಈಗಾಗಲೇ ಇರಡು ಭಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಹೆಸ್ಕಾಂ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಅಲ್ಲದೇ ಶಾಸಕರ ಹಾಗೂ ಜಿಲ್ಲಾಧಿಕಾರಿಗಳ ಮಾತಿಗೆ ಕಿಂಚಿತ್ತೂ ಗೌರವ ಕೊಡುತ್ತಿಲ್ಲ. ಇದೇ ರೀತಿ ಹೆಸ್ಕಾಂ ಅಧಿಕಾರಿಗಳ ಆಟ ಮುಂದುವರೆದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಕೊನೆಗೆ ಜಿಲ್ಲಾಧಿಕಾರಿ ಹೆಸ್ಕಾಂ ಅಧಿಕಾರಿಗಳಿಗೆ ಫೋನ ಮಾಡುವ ಮೂಲಕ ರೈತರಿಗೆ ವಿದ್ಯುತ್ ಕಲ್ಪಿಸುವಂತೆ ಆದೇಶ ಮಾಡಿದ ನಂತರ ರೈತರು ಪ್ರತಿಭಟನೆ ಹಿಂಪಡೆದರು. ಪ್ರತಿಭಟನೆಯಲ್ಲಿ ಮಹಾರಾಜಗೌಡ ಪಾಟೀಲ, ಏಗನಗೌಡ ಮುದ್ದಿನಗೌಡರ, ಸದಾಶಿವ ಮಿರಜಕರ, ರಾಮಪ್ಪ ಲಮಾಣಿ, ಮಹಾಂತೇಶ ಅಳಗೊಡಿ, ಉಮೇಶಗೌಡ ಪಾಟೀಲ, ಮಾಯಪ್ಪ ಗೊರವನಕೊಳ್ಳ, ಕಿರಣ ಇನಾಮದಾರ, ಯಂಕಣ್ಣ ಇಂಚಲ, ವಿಠuಲ ಲಮಾಣಿ, ಇಮಾಮಸಾಬ ಸಣ್ಣಕ್ಕಿ, ಹುಸೇನಸಾಬ ಸಣ್ಣಕ್ಕಿ ಸವದತ್ತಿ ಹಾಗೂ ಉಗರಗೋಳ ರೈತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…