ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿಯೇ ಮೌಲ್ಯಮಾಪನಕ್ಕೆ ಆಗ್ರಹ
Team Udayavani, May 5, 2019, 12:55 PM IST
ಬೆಳಗಾವಿ: ಬೆಳಗಾವಿ ವಿಭಾಗದ ಎಸ್ಸೆಸ್ಸೆಲ್ಸಿ ದ್ವಿತೀಯ ಭಾಷೆ ಕನ್ನಡ ಹಾಗೂ ತೃತೀಯ ಭಾಷೆ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿಯೇ ಮಾಡಿಸಬೇಕು ಎಂದು ಆಗ್ರಹಿಸಿ ಇಂಡಿಯನ್ ಮುಸ್ಲಿಂ ಲೀಗ್ ವತಿಯಿಂದ ಶನಿವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಲಾಯಿತು.
ದ್ವಿತೀಯ ಭಾಷೆ ಕನ್ನಡ ಹಾಗೂ ತೃತೀಯ ಭಾಷೆ ಕಲಿಸುವ ಶಿಕ್ಷಕರಿಂದಲೇ ಮೌಲ್ಯಮಾಪನ ಮಾಡಿಸುವಂತಾಗಬೇಕು. ದಕ್ಷಿಣ ಕರ್ನಾಟಕದವರಾಗಲೀ ಅಥವಾ ಪ್ರಥಮ ಭಾಷೆ ಕನ್ನಡ ಶಿಕ್ಷಕರಿಂದ ಮೌಲ್ಯಮಾಪನ ಮಾಡಿಸಬಾರದು. ಇದರಲ್ಲಿ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಮೌಲ್ಯಮಾಪನ ಸರಿಯಾಗಿ ಆಗುವುದಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಅನುದಾನರಹಿತ ಶಾಲಾ ಶಿಕ್ಷಕರಿಂದ ಬೇಜವಾಬ್ದಾರಿ ಮೌಲ್ಯಮಾಪನ ನಡೆಯುತ್ತಿದ್ದು, ಹೀಗಾಗದಂತೆ ನಿಯಮ ರೂಪಿಸಬೇಕು. ಇದರಿಂದ ಭಾಷಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಇಂಥ ಮೌಲ್ಯಮಾಪನ ಸ್ಥಗಿತಗೊಳಿಸಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕಾರ್ಯ ಮಾಡಬೇಕು. ಬೆಳಗಾವಿ ವಿಭಾಗದಲ್ಲಿ ಭಾಷಾ ಅಲ್ಪಸಂಖ್ಯಾತರ ಉರ್ದು, ಮರಾಠಿ ಮತ್ತುಇಂಗ್ಲಿಷ್ ಶಾಲೆಗಳು ಹೆಚ್ಚಾಗಿದ್ದು, ಈ ಮಕ್ಕಳ ಭವಿಷ್ಯದೃಷ್ಟಿಯಿಂದ ಮೌಲ್ಯಮಾಪನ ನಡೆಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್