ಮೂಲಸೌಕರ್ಯ ಕಲ್ಪಿಸಲು ಆಗ್ರಹ

•ಬೇಡಿಕೆ ಈಡೇರದಿದ್ದರೆ ಪುರಸಭೆಗೆ ಮುತ್ತಿಗೆ: ಎಚ್ಚರಿಕೆ•ಶಾಶ್ವತ ನೆಲೆ ಕಲ್ಪಿಸಿಕೊಡಲು ಒತ್ತಾಯ

Team Udayavani, Jun 10, 2019, 9:38 AM IST

BG-TDY-2..

ಬೈಲಹೊಂಗಲ; ಪಟ್ಟಣದ ದೊಡ್ಡಕೆರೆ ದಂಡೆಯ ನಿವಾಸಿಗಳಿಗೆ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಬೈಲಹೊಂಗಲ: ಪಟ್ಟಣದ ಕೆರೆಯ ದಂಡೆಯ ನಿವಾಸಿಗಳು ಮಳೆ ನೀರಿನಿಂದಾಗುವ ಹಾನಿ ತಪ್ಪಿಸಬೇಕು. ಸ್ವಚ್ಛತೆ ಕಾಪಾಡಬೇಕು. ಶಾಶ್ವತ ನೆಲೆ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ರವಿವಾರ ಪ್ರತಿಭಟನೆ ನಡೆಸಿದರು.

ತಮ್ಮಗಾಗುತ್ತಿರುವ ಅನ್ಯಾಯಕ್ಕೆ ಕೂಡಲೇ ಪುರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸಬೇಕು ಇಲ್ಲದಿದ್ದರೆ ಪುರಸಭೆಗೆ ಮುತ್ತಿಗೆ ಹಾಕಿ, ಕೀಲಿ ಜಡಿದು ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದ ನಿವಾಸಿಗಳು, ತಮ್ಮ ಸಮಸ್ಯೆಗಳಿಗೆ ಸ್ಪಂದಿಸದ ಪುರಸಭೆ ಸದಸ್ಯರ, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ಸ್ಥಳದಲ್ಲೆ ಕೆಲಕಾಲ ಮಕ್ಕಳು, ಮಹಿಳೆಯರು ಆಕ್ರೋಶ ವ್ಯಕ್ತ ಪಡಿಸಿದರು.

ಜಿಲ್ಲಾ ಬೀದಿ ವ್ಯಾಪಾರಿಗಳ ಅಧ್ಯಕ್ಷ ಸುನೀಲ ಹಲಗಿ ಮಾತನಾಡಿ, ಕೆರೆಯ ದಂಡೆಯ ಮೇಲೆ ಮುಸ್ಲಿಂ ಸಮಾಜದ ಸೈಯ್ಯದ, ಸಿಖ್‌ ಸಮುದಾಯದ ನಿವಾಸಿಗಳು ಯಾವುದೇ ಮೂಲ ಸೌಕರ್ಯಗಳಿಲ್ಲದೇ 40 ವರ್ಷಗಳಿಂದ ವಾಸಿಸುತ್ತಿದ್ದು, ಈ ಸ್ಥಳದ ಮೇಲ್ಭಾಗದಿಂದ ಮಳೆಗಾಲದಲ್ಲಿ ಮಳೆ ನೀರು ಕೆರೆಗೆ ಹರಿದು ಬರುತ್ತದೆ. ಆ ಸಂದರ್ಭದಲ್ಲಿ ಈ ನಿವಾಸಿಗಳ ಮನೆಗೆ ನೀರು ನುಗ್ಗುತ್ತದೆ. ಚಿಕ್ಕಮಕ್ಕಳು ಆಟವಾಡುತ್ತಾ ನೀರಿನಲ್ಲಿ ತೇಲಿ ಹೋದ ಘಟನೆಗಳು ಸಹ ನಡೆದಿವೆ. ಈ ಕುರಿತು ಜನಪ್ರತಿನಿಧಿಗಳ, ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ. ಕೂಡಲೇ ನೀರು ಹರಿಯಲು ದೊಡ್ಡ ಗಟಾರು ನಿರ್ಮಿಸಬೇಕು ಸ್ಪಂದಿಸದಿದ್ದರೆ ಉಗ್ರವಾಗಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಿಖ್‌ ಸಮುದಾಯದ ಅಜಿತಸಿಂಗ್‌ ಮಾತನಾಡಿ, ಕೆರೆ ದಂಡೆಯ ಪುರಸಭೆ ಜಾಗೆಯಲ್ಲಿ ವಾಸಿಸುತ್ತಿರುವ ನಮಗೆ ಅಕ್ರಮ, ಸಕ್ರಮದಲ್ಲಿ ವಿದ್ಯುತ್‌ ಸೌಕರ್ಯ ಪಡೆದಿದ್ದನ್ನು ಬಿಟ್ಟು ಯಾವುದೆ ಸೌಕರ್ಯ ಸಿಕ್ಕಿಲ್ಲ. ಇಲ್ಲಿ ರಸ್ತೆ, ಗಟಾರಿಲ್ಲದೇ ಗಬ್ಬೆದ್ದು ನಾರುತ್ತಿರುವತ್ತಿರುವುದರಿಂದ ಸೊಳ್ಳೆಗಳ ಕಾಟ ಅತಿಯಾಗಿರುವುದರಿಂದ ಚಿಕ್ಕಮಕ್ಕಳು ಹಾಗೂ ವಯೋವೃದ್ದರು ಡೆಂಘೀ, ಮಲೇರಿಯಾದಿಂದ ಬಳಲುತ್ತಿದ್ದಾರೆ. ಕುಡಿಯುವ ನೀರಿನ ಸೌಕರ್ಯವಿಲ್ಲ. 40 ವರ್ಷದಿಂದ ವಾಸಿಸುತ್ತಿದ್ದರೂ ಹಕ್ಕು ಪತ್ರ ನೀಡಿಲ್ಲ ಎಂದು ದೂರಿಸದರು.

ಬಿಬಿಜಾನ ಸೈಯ್ಯದ, ಮಡಿವಾಳಯ್ಯ ಹಿರೇಮಠ ಮಾತನಾಡಿ, ಶ್ರೀಮಂತರಿಗೆ ಹಾಗೂ ಪ್ರಭಾವಿಗಳಿಗೆ ಪುರಸಭೆಯವರು ಮನೆ ಮಂಜೂರು ಮಾಡುತ್ತಾರೆ. ನಮ್ಮಂತಹ ಬಡವರ ಗೋಳನ್ನು ಕೇಳುವರು ಯಾರೂ ಇಲ್ಲ, ಇಲ್ಲಿನ ಕೆಲ ನಿವಾಸಿಗಳು ಖಾಸಗಿ ಜಾಗೆಯಲ್ಲಿ ವಾಸಿಸುತ್ತಿದ್ದರೂ ಯಾರೂ ಕ್ಯಾರೇ ಎನ್ನುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮೈನುದ್ದೀನ್‌ ಬೇಪಾರಿ, ಕುತೇಜಾ ಸೈಯ್ಯದ, ಶರೀಫಾ ಸೈಯ್ಯದ, ಹುಸೇನಬಿ ಸೈಯ್ಯದ, ಶೈನಾಜ ಸೈಯ್ಯದ, ಸಲ್ಮಾ ಸೈಯ್ಯದ, ಫಾತೀಮಾ ಸೈಯ್ಯದ, ಮಮತಾಜ ಸೈಯ್ಯದ, ಬಲಬೀರಸಿಂಗ್‌, ಸತನಾಮಸಿಂಗ್‌, ಜಗತ್‌ಸಿಂಗ್‌, ದೀಪಕ ಸಿಂಗ್‌, ಬಿಜಲ ಕೌರ, ಪರಂಗನಾ ಕೌರ, ಸದ್ದಾಮ ಸೈಯ್ಯದ, ಮಹ್ಮದ ಸೈಯ್ಯದ್‌, ಹುಸೇನ ಸೈಯ್ಯದ ಇದ್ದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.