ಶಾಶ್ವತ ವಸತಿ ಸೌಲಭ್ಯ ಕಲ್ಪಿಸಲು ಆಗ್ರಹ
Team Udayavani, Nov 12, 2019, 12:27 PM IST
ಗೋಕಾಕ: ಪ್ರವಾಹದಿಂದಾಗಿ ನಿರಾಶ್ರಿತರಾದವರಿಗೆ ಶಾಶ್ವತ ವಸತಿ ಕಲ್ಪಿಸಿಕೊಡಬೇಕೆಂದು ಇಲ್ಲಿಯ ರಾಮ ಫೌಂಡೇಶನ್ದ ಪದಾಧಿಕಾರಿಗಳು ಸೋಮವಾರ ಪೌರಾಯುಕ್ತ ವಿ.ಎಸ್. ತಡಸಲೂರ ಅವರಿಗೆ ಮನವಿ ಸಲ್ಲಿಸಿದರು.
ಸರ್ಕಾರವು ನೆರೆ ಹಾವಳಿಗೆ ಒಳಗಾದ ರೈತರಿಗೆ ಬೆಳೆ ಹಾನಿ, ಮನೆ ಹಾಗೂ ಜಾನುವಾರುಗಳನ್ನು ಕಳೆದುಕೊಂಡವರಿಗೆ ಮತ್ತು ಜೀವಹಾನಿ ಆದವರ ಕುಟುಂಬಕ್ಕೆ ಪರಿಹಾರ ಧನ ಘೋಷಣೆ ಮಾಡಿದೆ. ಆದರೆ ನೆರೆ ಹಾವಳಿಯಿಂದ ಹಾನಿಗೊಳಗಾದ ಬಾಡಿಗೆ ಮನೆಯಲ್ಲಿ ವಾಸವಾಗಿರುವ ನಿರಾಶ್ರಿತ ಕುಟುಂಬಗಳಿಗೆ ಯಾವುದೇ ಪರಿಹಾರ ನೀಡಿಲ್ಲ. ಈಗ ತಾತ್ಕಾಲಿಕವಾಗಿ ಆಶ್ರಯ ಬಡಾವಣೆಯ ಹತ್ತಿರವಿರುವ ಅರಣ್ಯ ಇಲಾಖೆಯ ಖಾಲಿ ಜಾಗದಲ್ಲಿ ಶೆಡ್ ನಿರ್ಮಿಸಿ ವಾಸಿಸಲು ಅನುಕೂಲ ಮಾಡಿಕೊಡಲಾಗಿದೆ. ಅರಣ್ಯ ಇಲಾಖೆಯವರು 3 ತಿಂಗಳು ಮಾತ್ರ ಅಲ್ಲಿ ವಾಸಿಸಲು ಅನುಮತಿ ನೀಡಿದ್ದು, ನಂತರ ನಿರಾಶ್ರಿತರು ಎಲ್ಲಿ ವಾಸಿಸಬೇಕೆಂಬುದು ಯಕ್ಷ ಪ್ರಶ್ನೆಯಾಗಿದೆ. ಆದ್ದರಿಂದ ನಗರಸಭೆಯಿಂದ ನಿವೇಶನ ಮಂಜೂರು ಮಾಡಿ ಸರ್ಕಾರದ ಅನುದಾನದಲ್ಲಿ ನಿವೇಶನ ಕಲ್ಪಿಸಿ ಆ ಕುಟುಂಬಗಳಿಗೆ ಶಾಶ್ವತ ವಸತಿ ಕಲ್ಪಿಸಿ ಕೊಡಬೇಕೆಂದು ಮನವಿಯಲ್ಲಿ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ರಾಮ ಫೌಂಡೇಶನ್ ಅಧ್ಯಕ್ಷ ವಿಷ್ಣು ಲಾತೂರ, ಪದಾಧಿಕಾರಿಗಳಾದ ಕೆಂಪಣ್ಣಾ ಚಿಂಚಲಿ, ಕೆ.ಬಿ.ಕುರಬೇಟ, ಶೇಖರ ಉಳ್ಳೇಗಡ್ಡಿ, ಜಿ.ಆರ್.ನಿಡೋಣಿ, ರಾಚಪ್ಪ ಅಂದಾನಿ, ರಜನೀಕಾಂತ ಮಾಳ್ಳೋದೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ