ಟೋಲ್ ಗೇಟ್ ಬಂದ್ಗೆ ಆಗ್ರಹ
Team Udayavani, Nov 6, 2019, 12:28 PM IST
ಚಿಕ್ಕೋಡಿ: ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಮತ್ತು ಚಿಂಚಣಿ ಬಳಿ ಅಳವಡಿಸಿರುವ ಟೋಲ್ ಸಂಗ್ರಹ ಘಟಕಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಕಬ್ಬೂರ ಪಟ್ಟಣದ ಹತ್ತಿರ ಇರುವ ಟೋಲ್ ಸಂಗ್ರಹ ಹತ್ತಿರ 3 ಗಂಟೆಗಳ ಕಾಲ ಧರಣಿ ಸತ್ಯಾಗ್ರಹ ನಡೆಸಿದರು.
ಈ ವೇಳೆ ರಾಜ್ಯ ರೈತ ಸಂಘದ ರಾಜ್ಯ ವಕ್ತಾರ ತ್ಯಾಗರಾಜ್ಯ ಕದಂ ಮಾತನಾಡಿ, ಚಿಕ್ಕೋಡಿ ತಾಲೂಕಿನ ಕೇವಲ 25 ಕಿ.ಮೀ ಅಂತರದಲ್ಲಿ ಎರಡು ಕಡೆಗೆ ಟೋಲ್ ಸಂಗ್ರಹಣಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಇದರಿಂದ ನೆರೆ ಮತ್ತು ಬರ ಸಂಕಷ್ಟದಲ್ಲಿರುವ ಜನತೆ ಟೋಲ್ ಸಂಗ್ರಹದಿಂದ ಸಾಮಾನ್ಯ ಜನರಿಗೆ ಹೊರೆಯಾಗಿದೆ. ಸರ್ಕಾರ ಕೂಡಲೇ ಟೋಲ್ ಸಂಗ್ರಹಣಾ ಕೇಂದ್ರಗಳನ್ನು ಬಂದ್ ಮಾಡಬೇಕು ಎಂದು ಆಗ್ರಹಿಸಿದರು.
ಸರ್ಕಾರ ಟೋಲ್ ಸಂಗ್ರಹಣಾ ಕೇಂದ್ರ ಆರಂಭಿಸಬೇಕಾದರೂ ಅದಕ್ಕೊಂದು ನಿಯಮವಿದೆ. ಆ ನಿಯಮದ ಪ್ರಕಾರ ಮಾಡಬೇಕಿತ್ತು. ಆದರೆ ಈಗ ಕೇವಲ 25.ಕಿ.ಮೀ, ಅಂತರದಲ್ಲಿ ಮಾಡಿರುವ ಟೋಲ್ ಸಂಗ್ರಹಣಾ ಕೇಂದ್ರಗಳು ಅವೈಜ್ಞಾನಿಕವಾಗಿವೆ ಎಂದು ಆರೋಪಿಸಿದರು.
ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಡಾ| ಸಂತೋಷ ಬಿರಾದಾರ ಸರ್ಕಾರದ ಮುಂದಿನ ಆದೇಶ ಬರುವವರಿಗೂ ಟೋಲ್ ಸಂಗ್ರಹ ಬಂದ್ ಮಾಡಲಾಗುತ್ತಿದೆ ಎಂದು ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ವಾಪಸ್ ಪಡೆದುಕೊಂಡರು.
ರಾಜ್ಯ ರೈತ ಸಂಘದ ಕಾರ್ಯದರ್ಶಿ ಭೀಮಶಿ ಘಡಾರಿ, ರಾಜ್ಯ ಸಂಚಾಲಕ ಗಣಪತಿ ಇಳಗೇರಿ, ಸತ್ಯಪ್ಪ ಮಲ್ಲಾಪೂರೆ, ಮಂಜುನಾಥ ಪರಗೌಡರ,ಲಕ್ಷ್ಮಣ ಪೂಜೇರಿ, ಭರಮು ಖೇಮಲಾಪೂರೆ, ಮಲ್ಲಪ್ಪಾ ಅಂಗಡಿ,ಬಾಬು ಹಿರೆವಾಡಿ,ಆನಂದ ಪಾಶ್ಚಾಪೂರೆ,ಹನುಮಂತ ಹನುಮನ್ನವರ, ಪರಸಪ್ಪಾ ಕರಿಕಟ್ಟಿ, ರೈತ ಸಂಘದ ಸದಸ್ಯರು, ಲಾರಿ ಸಂಘದ ಮಾಲೀಕರು ಚಾಲಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ