![modi (4)](https://www.udayavani.com/wp-content/uploads/2024/07/modi-4-4-415x256.jpg)
ಟ್ಯಾಂಕರ್ ನೀರು ಪೂರೈಕೆಗೆ ಆಗ್ರಹ
Team Udayavani, May 18, 2019, 12:28 PM IST
![belegavi-tdy-7..](https://www.udayavani.com/wp-content/uploads/2019/05/belegavi-tdy-7..-1-620x275.jpg)
ರಾಯಬಾಗ: ಪಟ್ಟಣಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಶಾಸಕ ಡಿ.ಎಂ. ಐಹೊಳೆ ಅವರ ನೇತೃತ್ವದಲ್ಲಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ರಾಯಬಾಗ: ರಾಯಬಾಗ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.1 ರಿಂದ 19 ರವರೆಗೆ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಆಗ್ರಹಿಸಿ ಶುಕ್ರವಾರ ರಾಯಬಾಗ ಶಾಸಕ ಡಿ.ಎಂ.ಐಹೊಳೆ ಅವರ ನೇತೃತ್ವದಲ್ಲಿ ತಹಶೀಲ್ದಾರ ಡಿ.ಎಚ್.ಕೋಮಾರ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣಕ್ಕೆ ನೀರು ಪೂರೈಕೆಯಾಗುತ್ತಿರುವ ಹುಲ್ಯಾಳ ಕೆರೆ ಬತ್ತಿ ಹೋಗಿದ್ದು ಪಟ್ಟಣದಲ್ಲಿರುವ ಪ್ರತಿಶತ 80 ರಷ್ಟು ಕೊಳವೆ ಬಾವಿಗಳು ಕೂಡ ಬತ್ತಿ ಹೋಗಿವೆ. ಮತ್ತು ಭೀಕರ ಬರಗಾಲದಿಂದ ಅಂತರ್ಜಲ ಮಟ್ಟ ಸಹ ಕುಸಿದಿದೆ. ಇದರಿಂದ ಪಟ್ಟಣದ ಸಾರ್ವಜನಿಕರಿಗೆ ಕುಡಿಯುವ ನೀರಿಗಾಗಿ ಬಹಳ ತೊಂದರೆಯಾಗುತ್ತಿದೆ. ಆದ್ದರಿಂದ ಘಟಪ್ರಭಾ ಎಡದಂಡೆ ಕಾಲುವೆಯಿಂದ ರಾಯಬಾಗ ಪಟ್ಟಣಕ್ಕೆ ನೀರು ಸರಬರಾಜು ಆಗುವ ಹುಲ್ಯಾಳ ಕೆರೆ ಭರ್ತಿ ಮಾಡಬೇಕು ಹಾಗೂ ಪಟ್ಟಣದ 19 ವಾರ್ಡುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗೆ ಕೂಡಲೇ ಟ್ಯಾಂಕರ್ ನೀರು ಪೂರೈಕೆ ಮಾಡಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಡಿ.ಎಂ.ಐಹೊಳೆ, ಪ.ಪಂ ಸದಸ್ಯರಾದ ಡಾ.ಗಾಯತ್ರಿ ಬಾನೆ, ಚಂದ್ರಕಾಂತ ಬುರುಡ, ಅಜ್ಜಪ್ಪ ಕುಲಗುಡೆ, ಸದಾಶಿವ ದೇಶಿಂಗೆ, ಅಪ್ಪಾಸಾಬ ಕುಲಗುಡೆ. ಬಿ.ಎನ್.ಬಂಡಗಾರ, ಬಿಜೆಪಿ ಅಧ್ಯಕ್ಷ ಸದಾನಂದ ಹಳಿಂಗಳೆ, ಸದಾಶಿವ ಘೋರ್ಪಡೆ, ಅಣ್ಣಾಸಾಬ ಖೇಮಲಾಪೂರೆ, ನಾರಾಯಣ ಮೇತ್ರಿ, ಅಣ್ಣಾಸಾಬ ಕುಲಗುಡೆ, ಸುರೇಶ ಮಾಳಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.