ಟ್ಯಾಂಕರ್ ನೀರು ಪೂರೈಕೆಗೆ ಆಗ್ರಹ
Team Udayavani, May 18, 2019, 12:28 PM IST
ರಾಯಬಾಗ: ಪಟ್ಟಣಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಶಾಸಕ ಡಿ.ಎಂ. ಐಹೊಳೆ ಅವರ ನೇತೃತ್ವದಲ್ಲಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ರಾಯಬಾಗ: ರಾಯಬಾಗ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.1 ರಿಂದ 19 ರವರೆಗೆ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಆಗ್ರಹಿಸಿ ಶುಕ್ರವಾರ ರಾಯಬಾಗ ಶಾಸಕ ಡಿ.ಎಂ.ಐಹೊಳೆ ಅವರ ನೇತೃತ್ವದಲ್ಲಿ ತಹಶೀಲ್ದಾರ ಡಿ.ಎಚ್.ಕೋಮಾರ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣಕ್ಕೆ ನೀರು ಪೂರೈಕೆಯಾಗುತ್ತಿರುವ ಹುಲ್ಯಾಳ ಕೆರೆ ಬತ್ತಿ ಹೋಗಿದ್ದು ಪಟ್ಟಣದಲ್ಲಿರುವ ಪ್ರತಿಶತ 80 ರಷ್ಟು ಕೊಳವೆ ಬಾವಿಗಳು ಕೂಡ ಬತ್ತಿ ಹೋಗಿವೆ. ಮತ್ತು ಭೀಕರ ಬರಗಾಲದಿಂದ ಅಂತರ್ಜಲ ಮಟ್ಟ ಸಹ ಕುಸಿದಿದೆ. ಇದರಿಂದ ಪಟ್ಟಣದ ಸಾರ್ವಜನಿಕರಿಗೆ ಕುಡಿಯುವ ನೀರಿಗಾಗಿ ಬಹಳ ತೊಂದರೆಯಾಗುತ್ತಿದೆ. ಆದ್ದರಿಂದ ಘಟಪ್ರಭಾ ಎಡದಂಡೆ ಕಾಲುವೆಯಿಂದ ರಾಯಬಾಗ ಪಟ್ಟಣಕ್ಕೆ ನೀರು ಸರಬರಾಜು ಆಗುವ ಹುಲ್ಯಾಳ ಕೆರೆ ಭರ್ತಿ ಮಾಡಬೇಕು ಹಾಗೂ ಪಟ್ಟಣದ 19 ವಾರ್ಡುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗೆ ಕೂಡಲೇ ಟ್ಯಾಂಕರ್ ನೀರು ಪೂರೈಕೆ ಮಾಡಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಡಿ.ಎಂ.ಐಹೊಳೆ, ಪ.ಪಂ ಸದಸ್ಯರಾದ ಡಾ.ಗಾಯತ್ರಿ ಬಾನೆ, ಚಂದ್ರಕಾಂತ ಬುರುಡ, ಅಜ್ಜಪ್ಪ ಕುಲಗುಡೆ, ಸದಾಶಿವ ದೇಶಿಂಗೆ, ಅಪ್ಪಾಸಾಬ ಕುಲಗುಡೆ. ಬಿ.ಎನ್.ಬಂಡಗಾರ, ಬಿಜೆಪಿ ಅಧ್ಯಕ್ಷ ಸದಾನಂದ ಹಳಿಂಗಳೆ, ಸದಾಶಿವ ಘೋರ್ಪಡೆ, ಅಣ್ಣಾಸಾಬ ಖೇಮಲಾಪೂರೆ, ನಾರಾಯಣ ಮೇತ್ರಿ, ಅಣ್ಣಾಸಾಬ ಕುಲಗುಡೆ, ಸುರೇಶ ಮಾಳಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ