ಅತಿಥಿ ಶಿಕ್ಷಕರ ಬಾಕಿ ವೇತನಕ್ಕೆ ಆಗ್ರಹ
Team Udayavani, Jul 7, 2019, 3:03 PM IST
ರಾಮದುರ್ಗ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಶಿಕ್ಷಕರು ಶಾಸಕರ ಸಹೋದರ ಮಲ್ಲಣ್ಣ ಯಾದವಾಡ ಮುಖಾಂತರ ಶಾಸಕ ಮಹಾದೇವಪ್ಪ ಯಾದವಾಡಗೆ ಮನವಿ ಸಲ್ಲಿಸಿದರು.
ರಾಮದುರ್ಗ: ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಶಿಕ್ಷಕರ ಬಾಕಿ ವೇತನ ಪಾವತಿ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಶಾಸಕ ಮಹಾದೇವಪ್ಪ ಯಾದವಾಡ ಮನವಿ ಸಲ್ಲಿಸಿದರು.
ಬೇರೆ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕಳೆದ ಮಾರ್ಚ್ ತಿಂಗಳು ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸಿದ ವೇತನ ಪಾವತಿ ಮಾಡಿಲ್ಲ. ಅಲ್ಪ ಮೊತ್ತದ ವೇತನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಮಾರ್ಚ್ ತಿಂಗಳ ವೇತನ ಶೀಘ್ರ ನೀಡುವಂತೆ ಹಲವು ಬಾರಿ ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಆಗ್ರಹಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು. ಮಾರ್ಚ್ ವೇತನ ದೊರೆಯುವಂತೆ ಕ್ರಮ ತೆಗೆದುಕೊಂಡು ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರತಿ ಶೈಕ್ಷಣಿಕ ವರ್ಷದಿಂದ ಸೇವೆಗೆ ಅವಕಾಶ ಮಾಡಿಕೊಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ನೇಮಕಾತಿಯಲ್ಲಿ ಅತಿಥಿ ಶಿಕ್ಷಕರಿಗೆ ಕೃಪಾಂಕ ದೊರೆಯುವಂತಾಗಲು ಸರ್ಕಾರದ ಮಟ್ಟದಲ್ಲಿ ವಿಷಯ ಚರ್ಚಿಸಿ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮೂಲಕ ಒತ್ತಾಯಿಸಿದ್ದಾರೆ.
ಮನವಿ ಸ್ವೀಕರಿಸಿ ಮಾತನಾಡಿದ ಯುವ ಧುರೀಣ ಮಲ್ಲಣ್ಣ ಯಾದವಾಡ, ತಮ್ಮ ಬೇಡಿಕೆಯನ್ನು ಶಾಸಕರ ಗಮನಕ್ಕೆ ತಂದು ಸರ್ಕಾರಕ್ಕೆ ಬೇಡಿಕೆಗಳ ಪ್ರಸ್ತಾವಣೆ ಸಲ್ಲಿಸಲು ಶ್ರಮಿಸುವುದಾಗಿ ಹೇಳಿದರು.
ಈ ವೇಳೆ ಅತಿಥಿ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಯಲ್ಲಪ್ಪ ಕಾಕನೂರ, ಕಾರ್ಯದರ್ಶಿ ಎಚ್. ಎನ್. ಜಲಗೇರಿ, ಉಪಾಧ್ಯಕ್ಷ ಎಸ್. ಬಿ. ಆಮ್ಟೆ, ಸಂಘಟನಾ ಕಾರ್ಯದರ್ಶಿ ವಿ.ಕೆ. ಸಿರಿಗೊಂಡ, ಜಿ. ಎಚ್. ಮುಧೋಳ, ಎಂ.ವಿ. ಅರಿಷಿನಗೋಡಿ, ಮಹಾದೇವಿ ಕಾಕನೂರ, ಲಮಾಣಿ, ಕೊಪ್ಪದ, ದಳವಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ