ಗೋಕಾಕ ಜಿಲ್ಲೆ ರಚನೆಗೆ ಆಗ್ರಹ


Team Udayavani, Sep 22, 2019, 10:08 AM IST

bg-tdy-1

ಗೋಕಾಕ: ದೇಶದ ಸ್ವಾತಂತ್ರ್ಯ ಪೂರ್ವದಲ್ಲಿಯೇ “ಸಬ್‌ ಡಿಸ್ಟ್ರಿಕ್ಟ್’ ಇದ್ದ ಗೋಕಾಕ ನಗರವನ್ನು ರಾಜ್ಯ ಸರಕಾರ ಜಿಲ್ಲೆಯಾಗಿ ಘೋಷಿಸಬೇಕೆಂದು ಬಿಜೆಪಿ ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಈವರೆಗೆ ಗೋಕಾಕ ಜಿಲ್ಲೆ ಘೋಷಣೆಯಾಗಿಲ್ಲ. 1891ರಲ್ಲಿಯೇ ಗೋಕಾಕ ಮಿಲ್ಲಿಗೆ ಜಮೀನು ಲೀಜ್‌ ನೀಡಿದ ಸಮಯದಲ್ಲಿ ಅದು ಗೆಜೆಟ್‌ದಲ್ಲಿ

ಪ್ರಕಟಗೊಂಡಿದ್ದು, ಅದರಲ್ಲಿ ಗೋಕಾಕ ಸಬ್‌ ಡಿಸ್ಟ್ರಿಕ್ಟ್ ಎಂದು ಉಲ್ಲೇಖೀಸಲಾಗಿದೆ. ಕಾರಣಾಂತರದಿಂದ ಹಾಗೂ ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಗೋಕಾಕ ಜಿಲ್ಲೆಯಾಗಲು ಸಾಧ್ಯವಾಗಿಲ್ಲ. ಕಳೆದ 40 ವರ್ಷಗಳಿಂದ ಗೋಕಾಕ ಜಿಲ್ಲೆಗಾಗಿ ಆಗ್ರಹಿಸಿ ಹೋರಾಟ, ಚಳವಳಿಯನ್ನು ಈ ಭಾಗದ ಜನತೆ ನಡೆಸಿದರೂ ಉಪಯೋಗವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಈಗ ವಿಜಯನಗರ ಜಿಲ್ಲೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೊರಟಿರುವುದು ನೋಡಿದರೆ ಈ ಭಾಗದ ಜನಸಾಮಾನ್ಯರ ಬೇಡಿಕೆಗೆ ಯಾವ ಬೆಲೆಯೂ ಇಲ್ಲದಂತಾಗಿದೆ. ಜಿಲ್ಲಾ ವಿಭಜನೆಗಾಗಿ ರಚಿಸಿದ ಎಲ್ಲ ಆಯೋಗಗಳು ಗೋಕಾಕ ಜಿಲ್ಲೆ ಮಾಡಲು ಶಿಫಾರಸು ಮಾಡಿದ್ದರೂ ರಾಜ್ಯ ಸರಕಾರ ಗೋಕಾಕ ಜಿಲ್ಲೆ ಮಾಡಲು ಮೀನಿಮೇಷ ಮಾಡುತ್ತಿರುವುದು ದುಃಖದ ಸಂಗತಿ ಎಂದರು.

ರಾಜ್ಯ ಸರಕಾರದ ಮೇಲೆ ಒತ್ತಡ ಹೇರಲು ಈ ಬಗ್ಗೆ ಚಳವಳಿ, ಬಂದ್‌ ಇತ್ಯಾದಿ ಹೋರಾಟದ ಮೂಲಕ ಯತ್ನಿಸಲಾಗುವುದು. ಇದು ಪಕ್ಷಾತೀತವಾಗಿ ನಡೆಯಲಿದ್ದು, ಹೋರಾಟದಲ್ಲಿ ಜನಪ್ರತಿನಿಧಿ  ಗಳು ಪಾಲ್ಗೊಳ್ಳುವಂತೆ ಮನವೊಲಿಸಲಾಗುವುದು.ತಾಲೂಕಿನ ಜನತೆ ಕೂಡಾ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ನ್ಯಾಯವಾದಿಗಳ ಸಂಘದ ಅಧ್ಯಕ್ಷ ಯು.ಬಿ. ಶಿಂಪಿ ಮಾತನಾಡಿ, ಈವರೆಗೆ ಜಿಲ್ಲಾ ಹೋರಾಟದಲ್ಲಿ ನ್ಯಾಯವಾದಿಗಳ ಸಂಘ ಮುಂಚೂಣಿಯಲ್ಲಿದ್ದು, ಸೆ.23ರಂದು ನ್ಯಾಯವಾದಿಗಳ ಸಂಘದ ಸಭೆ ಕರೆದು, ಈ ಬಗ್ಗೆ ಚರ್ಚಿಸಿ ಹೋರಾಟದ ರೂಪುರೇಷೆ ತಯಾರಿಸಲಾಗುವುದು ಎಂದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಎಸ್‌.ವ್ಹಿ. ದೇಮಶೆಟ್ಟಿ, ಪ್ರಕಾಶ ಭಾಗೋಜಿ, ದಸ್ತಗೀರ ಪೈಲವಾನ, ಸುನೀಲ ಮುರಕೀಭಾಂವಿ, ನ್ಯಾಯವಾದಿಗಳಾದ ಎಸ್‌.ಎಸ್‌. ಪಾಟೀಲ, ಜಿ.ಆರ್‌. ಪೂಜೇರ, ಗಿರೀಶ ನಂದಿ ಅವರು ಮಾತನಾಡಿದರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.