ಗೋಕಾಕ ಜಿಲ್ಲೆ ರಚನೆಗೆ ಆಗ್ರಹ
Team Udayavani, Sep 22, 2019, 10:08 AM IST
ಗೋಕಾಕ: ದೇಶದ ಸ್ವಾತಂತ್ರ್ಯ ಪೂರ್ವದಲ್ಲಿಯೇ “ಸಬ್ ಡಿಸ್ಟ್ರಿಕ್ಟ್’ ಇದ್ದ ಗೋಕಾಕ ನಗರವನ್ನು ರಾಜ್ಯ ಸರಕಾರ ಜಿಲ್ಲೆಯಾಗಿ ಘೋಷಿಸಬೇಕೆಂದು ಬಿಜೆಪಿ ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಈವರೆಗೆ ಗೋಕಾಕ ಜಿಲ್ಲೆ ಘೋಷಣೆಯಾಗಿಲ್ಲ. 1891ರಲ್ಲಿಯೇ ಗೋಕಾಕ ಮಿಲ್ಲಿಗೆ ಜಮೀನು ಲೀಜ್ ನೀಡಿದ ಸಮಯದಲ್ಲಿ ಅದು ಗೆಜೆಟ್ದಲ್ಲಿ
ಪ್ರಕಟಗೊಂಡಿದ್ದು, ಅದರಲ್ಲಿ ಗೋಕಾಕ ಸಬ್ ಡಿಸ್ಟ್ರಿಕ್ಟ್ ಎಂದು ಉಲ್ಲೇಖೀಸಲಾಗಿದೆ. ಕಾರಣಾಂತರದಿಂದ ಹಾಗೂ ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಗೋಕಾಕ ಜಿಲ್ಲೆಯಾಗಲು ಸಾಧ್ಯವಾಗಿಲ್ಲ. ಕಳೆದ 40 ವರ್ಷಗಳಿಂದ ಗೋಕಾಕ ಜಿಲ್ಲೆಗಾಗಿ ಆಗ್ರಹಿಸಿ ಹೋರಾಟ, ಚಳವಳಿಯನ್ನು ಈ ಭಾಗದ ಜನತೆ ನಡೆಸಿದರೂ ಉಪಯೋಗವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಈಗ ವಿಜಯನಗರ ಜಿಲ್ಲೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೊರಟಿರುವುದು ನೋಡಿದರೆ ಈ ಭಾಗದ ಜನಸಾಮಾನ್ಯರ ಬೇಡಿಕೆಗೆ ಯಾವ ಬೆಲೆಯೂ ಇಲ್ಲದಂತಾಗಿದೆ. ಜಿಲ್ಲಾ ವಿಭಜನೆಗಾಗಿ ರಚಿಸಿದ ಎಲ್ಲ ಆಯೋಗಗಳು ಗೋಕಾಕ ಜಿಲ್ಲೆ ಮಾಡಲು ಶಿಫಾರಸು ಮಾಡಿದ್ದರೂ ರಾಜ್ಯ ಸರಕಾರ ಗೋಕಾಕ ಜಿಲ್ಲೆ ಮಾಡಲು ಮೀನಿಮೇಷ ಮಾಡುತ್ತಿರುವುದು ದುಃಖದ ಸಂಗತಿ ಎಂದರು.
ರಾಜ್ಯ ಸರಕಾರದ ಮೇಲೆ ಒತ್ತಡ ಹೇರಲು ಈ ಬಗ್ಗೆ ಚಳವಳಿ, ಬಂದ್ ಇತ್ಯಾದಿ ಹೋರಾಟದ ಮೂಲಕ ಯತ್ನಿಸಲಾಗುವುದು. ಇದು ಪಕ್ಷಾತೀತವಾಗಿ ನಡೆಯಲಿದ್ದು, ಹೋರಾಟದಲ್ಲಿ ಜನಪ್ರತಿನಿಧಿ ಗಳು ಪಾಲ್ಗೊಳ್ಳುವಂತೆ ಮನವೊಲಿಸಲಾಗುವುದು.ತಾಲೂಕಿನ ಜನತೆ ಕೂಡಾ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಯು.ಬಿ. ಶಿಂಪಿ ಮಾತನಾಡಿ, ಈವರೆಗೆ ಜಿಲ್ಲಾ ಹೋರಾಟದಲ್ಲಿ ನ್ಯಾಯವಾದಿಗಳ ಸಂಘ ಮುಂಚೂಣಿಯಲ್ಲಿದ್ದು, ಸೆ.23ರಂದು ನ್ಯಾಯವಾದಿಗಳ ಸಂಘದ ಸಭೆ ಕರೆದು, ಈ ಬಗ್ಗೆ ಚರ್ಚಿಸಿ ಹೋರಾಟದ ರೂಪುರೇಷೆ ತಯಾರಿಸಲಾಗುವುದು ಎಂದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಎಸ್.ವ್ಹಿ. ದೇಮಶೆಟ್ಟಿ, ಪ್ರಕಾಶ ಭಾಗೋಜಿ, ದಸ್ತಗೀರ ಪೈಲವಾನ, ಸುನೀಲ ಮುರಕೀಭಾಂವಿ, ನ್ಯಾಯವಾದಿಗಳಾದ ಎಸ್.ಎಸ್. ಪಾಟೀಲ, ಜಿ.ಆರ್. ಪೂಜೇರ, ಗಿರೀಶ ನಂದಿ ಅವರು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..