ಡಿಪೋ ಆಯ್ತು; ಬಸ್‌ ನಿಲ್ದಾಣವೂ ಸುಸಜ್ಜಿತವಾಗಲಿ

•5 ಕೋಟಿ ವೆಚ್ಚದಲ್ಲಿ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಪ್ರಸ್ತಾವನೆ •ಕಿತ್ತೂರ ಘಟಕ ಪ್ರತ್ಯೇಕವಾಗಲಿ

Team Udayavani, Jul 15, 2019, 10:04 AM IST

bg-tdy-1..

ಬೈಲಹೊಂಗಲ: ಕೆಎಸ್‌ಆರ್‌ಟಿಸಿ ಡಿಪೋ

ಬೈಲಹೊಂಗಲ: ಪಟ್ಟಣದಲ್ಲಿ ಸುಸಜ್ಜಿತ 4 ಕೋಟಿ ರೂ. ವೆಚ್ಚದ ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ನಿರ್ಮಾಣ ಕಾಮಗಾರಿ ಶೇ.70ರಷ್ಟು ಕಾಮಗಾರಿ ಪೂರ್ಣಗೊಳಿಸಿದೆ.

ಬೈಲಹೊಂಗಲ-ಬೆಂಗಳೂರು, ಉಳವಿ, ಕೊಲ್ಲಾಪುರ, ಖೀಳೆಗಾಂವ, ಯಲ್ಲಮ್ಮನಗುಡ್ಡ, ಸವದತ್ತಿ, ಕಿತ್ತೂರ, ಸೇರಿದಂತೆ ನಾನಾ ಪ್ರವಾಸಿ ತಾಣಗಳಿಗೆ ಸಾಗುವ ಪ್ರಯಾಣಿಕರಿಗೆ ನಗರಕ್ಕೆ ತೆರಳಲು ಸಂಪರ್ಕ ಕೊಂಡಿ ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣವಾಗಿದ್ದು, ದಿನಂಪ್ರತಿ ಸಾವಿರಾರು ಪ್ರಯಾಣಿಕರು ಇಲ್ಲಿಂದ ತೆರಳುತ್ತಾರೆ.

ನೂತನ ಕೆಎಸ್‌ಆರ್‌ಟಿಸಿ ಡಿಪೋ ನಿರ್ಮಾಣ ಕಾರ್ಯಕ್ಕೆ ಅಂದಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 2018ರಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದರು. ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಿಪೋ ಕಾಮಗಾರಿ ಶೇ.70ರಷ್ಟು ಪೂರ್ಣಗೊಂಡಿದೆ. 4 ಎಕರೆ ಜಾಗದಲ್ಲಿ ನಿರ್ಮಿಸಲಾಗುತ್ತಿರುವ ಪ್ರದೇಶದಲ್ಲಿ ಆವರಣ ಗೋಡೆ ನಿರ್ಮಾಣ ಕಾರ್ಯ, ರಸ್ತೆ, ಶೆಲ್ಟರ್‌, ಸಿಬ್ಬಂದಿ ವಿಶ್ರಾಂತಿ ಗೃಹ, ಶೌಚಾಲಯ, ಸ್ನಾನ ಗೃಹ,ವಿದ್ಯುತ್‌ ಸಂಪರ್ಕ ವ್ಯವಸ್ಥೆ, ಪ್ರಯಾಣಿಕರಿಗೆ ಉತ್ತಮ ಆಸನ ವ್ಯವಸ್ಥೆ, ಒಳ ಚರಂಡಿ ಕಾರ್ಯ ಕೈಗೊಳ್ಳಲಾಗಿದ್ದು, ಗೋಡೆಗಳಿಗೆ ಆಕರ್ಷಕ ಬಣ್ಣದ ಮೂಲಕ ನಿಲ್ದಾಣಕ್ಕೆ ನವೀನ ರೂಪ ನೀಡಲಾಗುತ್ತಿದೆ. ಶೀಟ್ ಹಾಗೂ ಟೈಲ್ಸ್ ಅಳವಡಿಕೆ ಕಾರ್ಯ ನಡೆದಿದೆ ಎಂದು ನಿಗಮದ ಘಟಕ ವ್ಯವಸ್ಥಾಪಕ ಚೇತನ ಸಾಣಿಕೊಪ್ಪ ಉದಯವಾಣಿಗೆ ಮಾಹಿತಿ ನೀಡಿದರು.

ಘಟಕದ ಆದಾಯವೇಷ್ಟು?: ಬೈಲಹೊಂಗಲ ಡಿಪೋಕ್ಕೆ ಸಂಬಂಧಿಸಿದಂತೆ ಬೈಲಹೊಂಗಲ, ಕಿತ್ತೂರ, ಸವದತ್ತಿ, ಗೋಕಾಕ ತಾಲೂಕಿಗೆ ಬಸ್‌ಗಳನ್ನು ಓಡಿಸಲಾಗುತ್ತಿದೆ. ಸುಮಾರು 140 ಬಸ್‌ಗಳು ಡಿಪೋಕ್ಕೆ ಸೇರಿದ್ದು, 131 ಮಾರ್ಗಗಳ ಮೂಲಕ ಬಸ್‌ ಬಿಡಲಾಗುತ್ತಿದೆ. ಪ್ರತಿ ತಿಂಗಳು 10 ರಿಂದ 14 ಲಕ್ಷ ರೂ. ಆದಾಯವನ್ನು ಘಟಕ ಹೊಂದಿದೆ.

ಘಟಕದಿಂದ ಶಾಲಾ, ಕಾಲೇಜಿನ ವಿದ್ಯಾರ್ಥಿಗಳಿಗೆ 18 ಸಾವಿರ ಬಸ್‌ ಪಾಸ್‌ ನೀಡಲಾಗಿದೆ. 1400 ಅಂಗವಿಕಲರ ಪಾಸ್‌ ವಿತರಿಸಲಾಗಿದ್ದು, ನಾಗರಿಕರಿಗೆ ದಿನಂಪ್ರತಿ ಸಂಚರಿಸಲು ನೀಡಲಾಗುವ ರಿಯಾಯಿತಿ ಪಾಸ್‌ ವಿತರಣೆಯಿಂದ 12 ಲಕ್ಷ ರೂ. ದಿಂದ 14 ಲಕ್ಷ ರೂ. ಘಟಕಕ್ಕೆ ಆದಾಯವಿದೆ ಎಂದು ಘಟಕ ವ್ಯವಸ್ಥಾಪಕರು ತಿಳಿಸಿದರು.

ಬಸ್‌ ನಿಲ್ದಾಣ ಕಾಮಗಾರಿ ವಿಳಂಬ: ಇಲ್ಲಿಯ ಬಸ್‌ ನಿಲ್ದಾಣ ಬಹಳಷ್ಟು ಹಳೆಯದಾಗಿದ್ದು, 3 ಎಕರೆ ಪ್ರದೇಶದಲ್ಲಿ ಇದೇ ಸ್ಥಳದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ನೂತನ ಬಸ್‌ ನಿಲ್ದಾಣ ಕಾಮಗಾರಿ ನಡೆಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಇನ್ನೂ ಹಣ ಮಂಜೂರಾಗದ ಕಾರಣ ಬಸ್‌ ನಿಲ್ದಾಣ ಕಾಮಗಾರಿ ಪ್ರಾರಂಭಗೊಂಡಿಲ್ಲ. ಸುಮಾರು 15 ಕೋಟಿ ರೂ. ನಿಲ್ದಾಣ ನಿರ್ಮಾಣಕ್ಕೆ ಸರಕಾರ ನೀಡಿದಲ್ಲಿ ಉತ್ತರ ಕರ್ನಾಟಕದಲ್ಲಿ ಮಾದರಿ ಬಸ್‌ ನಿಲ್ದಾಣವಾಗುವದರಲ್ಲಿ ಸಂಶಯವಿಲ್ಲ.

ಶೀಘ್ರ ಪೂರ್ಣಗೊಳಿಸಿ: ಈಗಾಗಲೇ ಡಿಪೋ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುತ್ತ ಬಂದಿದೆ. ಈ ಕಾಮಗಾರಿಯೊಂದಿಗೆ ಬಸ್‌ ನಿಲ್ದಾಣ ಕಾಮಗಾರಿ ಆರಂಭಿಸಿದ್ದರೆ ಎರಡೂ ಕಾಮಗಾರಿ ಬೇಗ ಮುಗಿದು ಜನರಿಗೆ ಅನುಕೂಲವಾಗುತ್ತಿತ್ತು. ಆದರೆ ಬಸ್‌ ನಿಲ್ದಾಣ ಕಾಮಗಾರಿ ಇನ್ನು ಪ್ರಾರಂಭಗೊಂಡಿಲ್ಲ. ಇದರಿಂದ ತಗ್ಗು ಗುಂಡಿಗಳು ನಿರ್ಮಾಣವಾಗಿ ನಾಗರಿಕರು, ಸವಾರರು ತೊಂದರೆ ಅನುಭವಿಸುವಂತಾಗಿದೆ. ರಭಸದ ಮಳೆಗೆ ಬಸ್‌ ನಿಲ್ದಾಣದ ಒಳಗೂ ನೀರು ಆವರಿಸುತ್ತದೆ. ಆದ್ದರಿಂದ ನಿಲ್ದಾಣ ಕಾಮಗಾರಿಯನ್ನು ಅತೀ ಶೀಘ್ರ ಪೂರ್ಣಗೊಳಿಸಿ ಶೀಘ್ರ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಿಬ್ಬಂದಿ ನಿಯೋಜಿಸಿ: ಇಲ್ಲಿಯ ನೂತನ ಡಿಪೋ ಬಳಿ ಕೆಲವೊಮ್ಮೆ ಖಾಸಗಿ ದ್ವಿಚಕ್ರ ವಾಹನ ನಿಲುಗಡೆ, ದನಕರುಗಳನ್ನು ಬಿಡುವುದನ್ನು ತಡೆಯಲು ಭದ್ರತಾ ಸಿಬ್ಬಂದಿ ನಿಯೋಜಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ. ಡಿಪೋ ರಸ್ತೆ ಡಾಂಬರೀಕರಣ ಮಾಡಲಾಗಿದ್ದು, ಕಾಂಕ್ರೀಟ್ ರಸ್ತೆ ನಿರ್ಮಾಣ ಕಾರ್ಯ ಮಾಡಿದರೆ ಸುಗಮವಾಗುತ್ತದೆ. ಬೈಲಹೊಂಗಲ ಘಟಕ ವ್ಯಾಪ್ತಿಗೆ ಕಿತ್ತೂರ ಕೂಡ ಬರುವುದರಿಂದ ಈ ಘಟಕ ಕಾರ್ಯ ವ್ಯಾಪ್ತಿ ಹೆಚ್ಚಾಗಿದೆ. ಕಿತ್ತೂರ ಘಟಕ ಪ್ರತ್ಯೇಕ ಮಾಡಬೇಕೆಂಬ ಕೂಗು ಕೇಳಿ ಬರುತ್ತಿದೆ.

 

•ಸಿ.ವೈ.ಮೆಣಶಿನಕಾಯಿ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.