ಜಿಎಸ್ ಟಿ ಅಧಿಕಾರಿಗಳೆಂದು ಬ್ಲ್ಯಾಕ್ ಮೇಲ್ ಮಾಡಿದ ಇಬ್ಬರ ಬಂಧನ
Team Udayavani, Oct 2, 2019, 8:19 PM IST
ಬೆಳಗಾವಿ: ಅಕಾಡೆಮಿಯೊಂದಕ್ಕೆ ಹೋಗಿ ತಾವು ಜಿಎಸ್ ಟಿ ಅಧಿಕಾರಿಗಳು ಎಂದು ಹೇಳಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಓರ್ವ ಪರಾರಿಯಾಗಿದ್ದಾನೆ.
ಅಶೋಕ ಪರಶುರಾಮ ಸಾವಂತ ಹಾಗೂ ಜಯವಂತ ಬಾಡಿವಾಲೆ ಎಂಬಾತರನ್ನು ಬಂಧಿಸಲಾಗಿದ್ದು, ಇನ್ನೋರ್ವ ಮಹೇಶ ಪಾಟೀಲ ಪರಾರಿಯಾಗಿದ್ದಾನೆ.
ಗೋವಾವೇಸ್ ವೃತ್ತದಲ್ಲಿ ಇರುವ ಡ್ರೀಮ್ ಫ್ಲೈ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಅಕಾಡೆಮಿಗೆ ಹೋದ ಈ ಮೂವರು ತಾವು ಜಿಎಸ್ಟಿ ಅಧಿಕಾರಿಗಳು ಎಂದು ನಂಬಿಸಿದ್ದಾರೆ. ಜಿಎಸ್ ಟಿ ತುಂಬಿಲಲ್ಲ ಹೀಗಾಗಿ ಕಚೇರಿ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇಲ್ಲದಿದ್ದರೆ 25 ಸಾವಿರ ರೂ. ಬೇಡಿಕೆ ಇಟ್ಟಿದ್ದಾರೆ.
ಅಶೋಕ ಸಾವಂತ ಎಂಬಾತ ಕೇಂದ್ರ ಅಬಕಾರಿ ಇಲಾಖೆಯಲ್ಲಿ ಜಿಎಸ್ಟಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದನು. ಮಹೇಶ ಪಾಟೀಲ ಮರಾಠಿ ದಿನಪತ್ರಿಕೆ ವರದಿಗಾರ ಎಂಬುದು ಇವರ ಗುರುತಿನ ಚೀಟಿ ಪರಿಶೀಲಿಸಿದಾಗ ಗೊತ್ತಾಗಿದೆ. ಅಕಾಡೆಮಿ ಮಾಲೀಕ ತಿರುಮಲ ವಿಂಜುಮರ್ ಸುದರ್ಶನ್ ಶಹಾಪುರ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಶಹಾಪುರ ಪೊಲೀಸ್ ಠಾಣೆ ಸಿಪಿಐ ಜಾವೇದ ಮುಶಾಪುರೆ ಅವರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಹಾಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ