ಮಾತೃಭಾಷೆ ಸ್ವಾಭಿಮಾನ ಬೆಳೆಸಿ; ಈಶ್ವರ ಸಂಪಗಾವಿ
ನಾಡು-ನುಡಿ ವಿಷಯದಲ್ಲಿ ಯಾವತ್ತೂ ಬದ್ಧತೆ ತೋರುತ್ತಿರುವೆ
Team Udayavani, Dec 31, 2022, 1:43 PM IST
ಖಾನಾಪುರ: ಗಡಿಭಾಗದ ಕನ್ನಡೇತರರಿಗೂ ಕನ್ನಡ ಭಾಷೆ-ಅನ್ನದ ಭಾಷೆ ಎಂಬ ಸತ್ಯವನ್ನು ಮನವರಿಕೆ ಮಾಡುವ ಕೆಲಸವಾಗಬೇಕು ಎಂದು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಈಶ್ವರ ಸಂಪಗಾವಿ ಹೇಳಿದರು. ಅವರು ಪಟ್ಟಣದ ಶನಯಾ ಪಾಮ್ಸ್ ಕಲ್ಯಾಣ ಮಂಟಪದಲ್ಲಿ ನಡೆದ 8ನೇ ತಾಲೂಕಾ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.
ಗಡಿ ಭಾಗದಲ್ಲಿ ಸಾಹಿತ್ಯ ಪರಸ್ಪರ ವಿನಿಮಯಗೊಳ್ಳುವುದರ ಮೂಲಕ ಭಾವನೆಗಳನ್ನು ಬೆಸೆಯುವ ಕಾರ್ಯವಾಗಬೇಕು. ಅನ್ಯ ಭಾಷೆ ವ್ಯಾಮೋಹದಲ್ಲಿ ಮಾತೃಭಾಷೆ ಕೊಚ್ಚಿ ಹೋಗದಂತೆ ಮಕ್ಕಳಲ್ಲಿ ಸ್ವಾಭಿಮಾನ ಬೆಳೆಸಬೇಕು. ತಾಲೂಕಲ್ಲಿ ಸಾಕ್ಷರತೆ ಪ್ರಮಾಣ ಕಡಿಮೆ ಇರುವ ಕುರಿತು ಕಳವಳ ವ್ಯಕ್ತಪಡಿಸಿದರಲ್ಲದೆ ಇದಕ್ಕೆ ಕ್ರಿಯಾಯೋಜನೆ ಜಾರಿಗೊಳ್ಳ ಬೇಕು ಎಂದು ಆಗ್ರಹಿಸಿದರು. ತಾಲೂಕು ಸಂಸ್ಕೃತಿ, ಪರಂಪರೆ, ನೈಸರ್ಗಿಕ ಸಿರಿ ಹೊಂದಿರುವ
ವಿಶಿಷ್ಟ ಭೂ ಪ್ರದೇಶವಾಗಿದ್ದು ದೇಶದ ಬೆನ್ನೆಲುಬಾದ ಕೃಷಿ ಕ್ಷೇತ್ರವನ್ನು ಉದ್ಯೋಗವಾಗಿ ಪರಿಗಣಿಸ ಬೇಕು.
ಯಾವ ಕಾರಣಕ್ಕೂ ಗಡಿ ಭಾಗದ ಶಾಲೆಗಳನ್ನು ಮುಚ್ಚಬಾರದು. ಯುವಕರಿಗೆ ಉದ್ಯೋಗಕ್ಕಾಗಿ ಉದ್ಯಮಗಳ ಸ್ಥಾಪನೆಯಾಗಬೇಕು. ಹಲಸಿಯಲ್ಲಿ ಕದಂಬೋತ್ಸವಕ್ಕೆ ಮತ್ತೆ ಚಾಲನೆ ನೀಡಬೇಕು ಎಂದು ಒತ್ತಾಯಿಸಿದರು.
ಶಾಸಕಿ ಡಾ| ಅಂಜಲಿ ನಿಂಬಾಳಕರ ಮಾತನಾಡಿ, ಭಾಷೆ, ಜಾತಿ-ಧರ್ಮಗಳ ವ್ಯತ್ಯಾಸ ಮಾಡದೆ ಎಲ್ಲರು ಸೌಹಾರ್ದಯುತವಾಗಿ ಸಾಮರಸ್ಯದಿಂದ ಬದುಕಬೇಕು. ತಾವು ಮಹಾರಾಷ್ಟ್ರದಲ್ಲಿ ಹುಟ್ಟಿದರೂ ಇದು ಕರ್ಮಭೂಮಿಯಾಗಿದ್ದು ನಾಡು-ನುಡಿ ವಿಷಯದಲ್ಲಿ ಯಾವತ್ತೂ ಬದ್ಧತೆ ತೋರುತ್ತಿರುವೆ ಎಂದರು. ಕಳೆದ 60 ವರ್ಷಗಳಿಂದ ಇಲ್ಲಿಯ ನಾಯಕರು ರಾಜ್ಯೋತ್ಸವ, ಕನ್ನಡ ಸಮಾರಂಭಗಳಲ್ಲಿ ಭಾಗವಹಿಸಲು ಹಿಂಜಿರಿಯುತ್ತ ಬಂದಿದ್ಧರು. ತಾವು ಈ ನಾಡಭಾಷೆಗೆ ಗೌರವ ಕೊಡುವುದರ ಮೂಲಕ ಹೊಸ ನಾಂದಿ ಹಾಡಿರುವೆ ಎಂದರು.
ಕಸಾಪ ಜಿಲ್ಲಾ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಮಾತನಾಡಿ, ಇಲ್ಲಿ ಸಾಹಿತ್ಯ ಭವನ ನಿರ್ಮಾಣಕ್ಕೆ ದೊರಕಿದ ನಿವೇಶನದಲ್ಲಿ ಶೀಘ್ರವಾಗಿ ಭವನ ನಿರ್ಮಾಣ ಮಾಡಲಾಗುವುದು ಎಂದರು. ಗುರುದೇವಿ ಹುಲೆಪ್ಪನವರಮಠ,ಉದ್ಯಮಿ ನಾಸೀರ ಬಾಗವಾನ, ಪರಿಷತ್ತ ಸದಸ್ಯ ನಾಗರಾಜ ಯಾದವ ಮಾತನಾಡಿದರು.
ವೇದಿಕೆ ಮೇಲೆ ಬಿಜೆಪಿ ಧುರೀಣ ವಿಠಲ ಹಲಗೇಕರ, ಧನಶ್ರೀ ಸರದೇಸಾಯಿ, ಆರ್.ಡಿ.ಹಂಜಿ, ಮೇಘಾ ಕುಂದರಗಿ, ಪ್ರಾಚಾರ್ಯ ದಿಲೀಪ ಜವಳಕರ, ದಶರಥ ಬನೋಶಿ, ರೇವಣಸಿದ್ದಯ್ನಾ ಹಿರೇಮಠ, ರವಿಂದ್ರ ಕಾಡಗಿ ಮುಂತಾದವರು ಉಪಸ್ಥಿತರಿದ್ದರು. ತಾಲೂಕು ಕಸಾಪ ಅಧ್ಯಕ್ಷ ಬಸವಪ್ರಭು ಹಿರೇಮಠ ಸ್ವಾಗತಿಸಿದರು.
ವಿವೇಕ ಕುರಗುಂದ ಮತ್ತು ಅಪ್ಪಯ್ನಾ ಕೊಡೋಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಪ್ರಭುದೇವ ಹಿರೇಮಠ ವಂದಿಸಿದರು. ಸಮ್ಮೇಳನ ವೇದಿಕೆ ಕಾರ್ಯಕ್ರಮಕ್ಕೆ ಮೊದಲು ಧ್ವಜಾರೋಹಣ, ಬಸವೇಶ್ವರ ವೃತ್ತದಿಂದ ವೇದಿಕೆವರೆಗೆ ಸಮ್ಮೇಳನ ಸರ್ವಾಧ್ಯಕ್ಷ ಈಶ್ವರ ಸಂಪಗಾವಿ ದಂಪತಿಗಳ ಮೆರವಣಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ