ಕೆಎಲ್‌ಇ ಸಂಸ್ಥೆಯಿಂದ ಉ.ಕ. ಅಭಿವೃದ್ಧಿ

ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ; ಕೆಎಲ್‌ಇ ಸಂಸ್ಥೆ, ಕೋರೆ ಕೊಂಡಾಡಿದ ಸಿಎಂ

Team Udayavani, Jun 12, 2022, 3:05 PM IST

15

ಬೆಳಗಾವಿ: ಯಾವ ಸಂಸ್ಥೆಯಲ್ಲಿ ಶಿಕ್ಷಣ, ಜ್ಞಾನ ಇರುತ್ತದೋ ಅದರಿಂದ ಸಂಸ್ಕಾರಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಕೆಎಲ್‌ಇ ಸಂಸ್ಥೆಯ ಜೀರಗೆ ಸಭಾಂಗಣದಲ್ಲಿ ವಾಯವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಮುಂಚೆ ಭೂಮಿ, ಬಂಡವಾಳ ಜಾಸ್ತಿ ಇದ್ದವರು ಜಗತ್ತು ಆಳುತ್ತಿದ್ದರು. 21ನೇ ಶತಮಾನದಲ್ಲಿ ಜ್ಞಾನ ಇದ್ದವರು ಜಗತ್ತನ್ನು ಆಳುತ್ತಾರೆ. ಜಗತ್ತಿನಲ್ಲಿಯೇ ಬೆಂಗಳೂರು ತಾಂತ್ರಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಕ್ಕೆ ವಿವಿಧ ದೇಶಗಳ ಗಣ್ಯರು ಬರುತ್ತಿದ್ದಾರೆ. ಕೆಎಲ್‌ಇ ಸಂಸ್ಥೆ ಜ್ಞಾನ ಮಂದಿರದಲ್ಲಿ ಕೆಲಸ ಮಾಡಲು ಸಿಕ್ಕಿದ ಭಾಗ್ಯ ನೀವೇ ಧನ್ಯರು. ಕೆಎಲ್‌ಇ ಸಂಸ್ಥೆಗೆ ದೊಡ್ಡ ಇತಿಹಾಸವಿದೆ. ಸಾವಿರಾರು ಗುರುಗಳು, ದಾನಿಗಳು ಕೂಡಿ ಕಟ್ಟಿರುವ ದೊಡ್ಡ ಸಂಸ್ಥೆ. ಕೆಎಲ್‌ಇ ಅತ್ಯಂತ ಪ್ರಜಾಸತಾತ್ಮಕ ಇರುವ ಶಿಕ್ಷಣ ಸಂಸ್ಥೆ. ಡಾ| ಪ್ರಭಾಕರ ಕೋರೆ ಸ್ಥಾನ ಅತ್ಯಂತ ಮಹತ್ವದ್ದು. ಅವರು ಚುನಾಯಿತ ಚೇರಮನ್‌ ಆಗಿದ್ದಾರೆ ಹೊರತು ನೇಮಕಗೊಂಡ ಚೇರಮನ್‌ ಅಲ್ಲ ಎಂದು ಹೊಗಳಿದರು.

ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕೆಎಲ್‌ಇ ಸಂಸ್ಥೆ ಪೂರಕವಾಗಿದೆ. ಕೆಎಲ್‌ಇ ಸಂಸ್ಥೆ ಇರದಿದ್ದರೆ ಕರ್ನಾಟಕದ ಸ್ಥಿತಿ ಹೇಗಿರುತ್ತಿತ್ತು ಎಂದು ನಾವು ಊಹಿಸಿಕೊಳ್ಳುವುದು ಅಸಾಧ್ಯ. ಕೋರೆ ಅವರಂತಹ ನೂರಾರು ಜನ ಬಂದರೆ ಈ ದೇಶದ ಚಿತ್ರಣವೇ ಬದಲಾಗುತ್ತದೆ. ಕೋರೆ ಅವರ ಜ್ಞಾನ ಭಂಡಾರ, ಯಶಸ್ಸಿನ ಪಯಣ ಹೀಗೆಯೇ ಮುಂದೆ ಸಾಗಲಿ ಎಂದರು.

ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ| ಪ್ರಭಾಕರ ಕೋರೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೆಎಲ್‌ಇ ಸಂಸ್ಥೆ ಕಟ್ಟುವಲ್ಲಿ ಸಪ್ತರ್ಷಿಗಳ ಕೊಡುಗೆ ಅಪಾರ. ಅವರ ತ್ಯಾಗದ ಫಲದಿಂದಲೇ ಸಂಸ್ಥೆ ಬೆಳೆದಿದೆ. ನನ್ನ ಒಬ್ಬನಿಂದ ಇದು ಬೆಳೆದಿಲ್ಲ. ಎಂಟನೇ ಋಷಿ ಅಂತ ನನ್ನನ್ನು ಸಂಬೋಧಿಸಲಾಗಿದೆ. ಸಪ್ತರ್ಷಿಗಳು ಶಿಕ್ಷಕರಾಗಿದ್ದರು, ನಾನು ಶಿಕ್ಷಕನಲ್ಲ. ಮನೆಯ ಕುಟುಂಬದ ಹಿರಿಯ ಮಾತ್ರ ಎಂದರು.

ಕೆಎಲ್‌ಇ ಸಂಸ್ಥೆಯಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಈಗ ಉನ್ನತ ಸ್ಥಾನದಲ್ಲಿ ಇದ್ದಾರೆ. ಇನ್ಫೋಸಿಸ್‌ನ ಸುಧಾಮೂರ್ತಿ, ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ, ದಿ.ಅನಂತಕುಮಾರ, ಪ್ರಹ್ಲಾದ ಜೋಶಿ, ಮುರಗೇಶ ನಿರಾಣಿ ಅನೇಕ ರಾಜಕೀಯ ಮುಖಂಡರು ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಎಂಬುದು ಹೆಮ್ಮೆಯ ಸಂಗತಿ ಎಂದರು.

ಕೇಂದ್ರ, ರಾಜ್ಯ ಸರ್ಕಾರಗಳು ಕಾಲಕಾಲಕ್ಕೆ ಸಂಸ್ಥೆಯ ರಚನಾತ್ಮಕ ಕಾರ್ಯಗಳಿಗೆ ಕೈಜೋಡಿಸಿವೆ. ಈ ದಿಸೆಯಲ್ಲಿ ಬಿಜೆಪಿಗೆ ಸಂಸ್ಥೆಯು ಚಿರಋಣಿಯಾಗಿದೆ. ನಮ್ಮ ಸಂಸ್ಥೆ ಯಾರಿಂದ ಉದ್ಧಾರ ಆಗುತ್ತದೆಯೋ ಅಂತವವರಿಗೆ ನಾವು ಬೆಂಬಲಿಸುತ್ತೇವೆ. ಹೀಗಾಗಿ ಅಭ್ಯರ್ಥಿಗಳಾದ ಅರುಣ ಶಾಹಾಪೂರ ಹಾಗೂ ಹನುಮಂತ ನಿರಾಣಿಯವರಿಗೆ ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡಬೇಕೆಂದು ಕೆಎಲ್‌ಇ ಸಂಸ್ಥೆಯ ಶಿಕ್ಷಕರು ಹಾಗೂ ಪದವೀಧರರಿಗೆ ಕರೆ ನೀಡಿದರು.

ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಮಾತನಾಡಿದರು. ಸಚಿವೆ ಶಶಿಕಲಾ ಜೊಲ್ಲೆ, ಸಂಸದೆ ಮಂಗಲಾ ಅಂಗಡಿ, ಶಾಸಕ ಅನಿಲ ಬೆನಕೆ, ಅಮರಸಿಂಹ ಪಾಟೀಲ, ವಿಶ್ವನಾಥ ಪಾಟೀಲ, ಅನಿಲ ಪಟ್ಟೇದ, ಜಯಾನಂದ ಮುನವಳ್ಳಿ ಇದ್ದರು.

ಕೋರೆ ಹಿರೇ ಸ್ವಾಮಿಗಳಾಗಿ ಬಿಡಿ!

ಉಮೇಶ ಕತ್ತಿ ನಾವೆಲ್ಲ ಸೇರಿದಾಗ, “ನೀವು ರಾಜಕಾರಣಕ್ಕೆ ಬೇಡ, ಸ್ವಾಮಿಗಳಾಗಿ ಬಿಡಿ. ಏನಾದರೂ ಸಮಸ್ಯೆ ಇದ್ದರೆ ಬಗೆಹರಿಸಿಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಸ್ಯ ಚಟಾಕಿ ಹಾರಿಸಿದರು. ಆಗ ಕೋರೆ ಕೈ ಸನ್ನೆ ಮಾಡಿ ಪಕ್ಕದಲ್ಲಿ ಕೈ ಮಾಡಿದಾಗ “ನೀವೇ ಹಿರೇ ಸ್ವಾಮಿಗಳು’ ಎಂದು ಸಭೆಯನ್ನು ನಗೆಗಡಲಲ್ಲಿ ತೇಲಿಸಿದರು.

ಪ್ರಭಾಕರ ಕೋರೆ ಸೇವೆ ಅದ್ಭುತ:

ಕೆಎಲ್‌ಇ ಸೊಸೈಟಿ ವಿಷಯಕ್ಕೆ ಬಂದಾಗ ಡಾ| ಪ್ರಭಾಕರ ಕೋರೆ ಬಹಳ ಸ್ವಾರ್ಥಿ ಆಗುತ್ತಾರೆ. ಶಿಕ್ಷಣ ಸಂಸ್ಥೆಗೆ ಜಾಗ ಕೇಳಲು ಬಂದಾಗ ದರ ಕಡಿಮೆ ಮಾಡಿ ಅಂತ ಹೇಳುತ್ತಾರೆ. ಡೋನೇಷನ್‌ ಕಡಿಮೆ ಮಾಡಿ ಅಂದಾಗ ನಂದೇನಿಲ್ಲಪ್ಪ ಎಲ್ಲ ಸೊಸೈಟಿಯದ್ದು ಅಂತಾರೆ. ಸಾರ್ವಜನಿಕ ಬದುಕಿನಲ್ಲಿ ಅವರು ಮಾಡಿದ ಸೇವೆ ಇತರೆ ಕ್ಷೇತ್ರದಲ್ಲಿ ಅದ್ಭುತವಾಗಿದೆ. ಸಂಸ್ಥೆಗಾಗಿ ತಮ್ಮ ಮನೆತನ, ಉದ್ಯೋಗ ಬಿಟ್ಟು ದುಡಿಯುತ್ತಾರೆ ಎಂದು ಕೋರೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಗಳಿದರು.

ಪ್ರಕಾಶ ಹುಕ್ಕೇರಿ ಮ್ಯಾಟ್ರಿಕ್‌ ಫೇಲ್‌ ಎಂದ ಕೋರೆ !

ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್‌ ಅಭ್ಯರ್ಥಿ ನಮ್ಮ ಕೆಎಲ್‌ಇ ಸಂಸ್ಥೆಯ ಮಾಜಿ ವಿದ್ಯಾರ್ಥಿ ಆಗಿದ್ದು, ಆದರೆ ಜಿಎ ಹೈಸ್ಕೂಲ್‌ನಲ್ಲಿ ಮ್ಯಾಟ್ರಿಕ್‌(ಎಸ್ಸೆಸ್ಸೆಲ್ಸಿ) ಫೇಲ್‌ ಆಗಿದ್ದಾರೆ ಎಂದು ಪ್ರಭಾಕರ ಕೋರೆ ಹಾಸ್ಯ ಚಟಾಕಿ ಹಾರಿಸಿದರು. ಇದಕ್ಕೂ ಮೊದಲು ಮಾತನಾಡಿದ್ದ ಸಚಿವ ಉಮೇಶ ಕತ್ತಿ, ಹುಕ್ಕೇರಿ ಶಿಕ್ಷಕನೂ ಅಲ್ಲ, ಪದವೀಧರನೂ ಅಲ್ಲ. ಇಂತವರು ಚುನಾವಣೆಗೆ ಸ್ಪರ್ಧಿಸಿದ್ದಾರೆ ಎಂದು ವ್ಯಂಗ್ಯ ವಾಡಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.