ಅಧಿಕಾರ ಭಾಗ್ಯವಿಲ್ಲದೇ ಅಭಿವೃದ್ಧಿ ಸೊನ್ನೆ
•ವರ್ಷವಾದರೂ ಪ್ರಕಟವಾಗಿಲ್ಲ ಮೀಸಲಾತಿ•ಚಿಕ್ಕೋಡಿ-ನಿಪ್ಪಾಣಿ-ಸದಲಗಾದಲ್ಲಿ ಅಧಿಕಾರಿಗಳದ್ದೇ ರಾಜ್ಯ
Team Udayavani, Jun 28, 2019, 10:16 AM IST
ಚಿಕ್ಕೋಡಿ: ಚಿಕ್ಕೋಡಿ ಪುರಸಭೆ ಕಾರ್ಯಾಲಯ.
ಚಿಕ್ಕೋಡಿ: ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿದು ಒಂದು ವರ್ಷ ಸಮೀಪಿಸುತ್ತಾ ಬಂದರೂ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆಗೆ ಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದರಿಂದ ಮೀಸಲಾತಿ ಪ್ರಕಟವಾಗದೇ ಚುನಾಯಿತ ಸದಸ್ಯರಿಗೆ ಅಧಿಕಾರ ಭಾಗ್ಯ ಇಲ್ಲದಂತಾಗಿದೆ.
ಮೊದಲ ಹಂತದಲ್ಲಿ ಜರುಗಿದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಚಿಕ್ಕೋಡಿ ಪುರಸಭೆ, ನಿಪ್ಪಾಣಿ ನಗರಸಭೆ ಮತ್ತು ಸದಲಗಾ ಪುರಸಭೆಗಳಿಗೆ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಚುನಾವಣೆ ನಡೆದಿವೆ. ಆದರೂ ಇಲ್ಲಿಯವರಿಗೆ ಚುನಾಯಿತ ಸದಸ್ಯರಿಗೆ ಅಧಿಕಾರ ಭಾಗ್ಯ ಸಿಕ್ಕಿಲ್ಲ, ಹೀಗಾಗಿ ಅಭಿವೃದ್ಧಿ ಕಾರ್ಯಗಳು ಮಂದಗತಿಯಲ್ಲಿ ಸಾಗಿದ್ದು, ಸಾರ್ವಜನಿಕರು ನಿತ್ಯ ಪರದಾಡುತ್ತಿದ್ದಾರೆ.
ರಾಜ್ಯದ ನೂರಕ್ಕೂ ಹೆಚ್ಚಿನ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಿಗೆ ಮೊದಲ ಹಂತದಲ್ಲಿ ಚುನಾವಣೆ ಜರುಗಿದೆ. ಚುನಾವಣೆ ಫಲಿತಾಂಶ ಹೊರಬಿದ್ದ ದಿನವೇ ಸರ್ಕಾರ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕಟ ಮಾಡಿದೆ. ಆದರೆ ಕೆಲವರು ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿಗೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ನಂತರ ಸರ್ಕಾರ ಮರುಪರಿಶೀಲನೆ ಮೀಸಲಾತಿ ಪ್ರಕಟಿಸಿ ಆದೇಶ ಹೊರಡಿಸಿತು. ಇದಕ್ಕೂ ಸಹ ಎರಡನೆ ಬಾರಿಗೆ ಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದರಿಂದ ಮೀಸಲಾತಿ ಪ್ರಕಟಣೆೆ ವಿಳಂಬವಾಗಿ ಪ್ರಕಟಗೊಂಡಿಲ್ಲ. ಹೀಗಾಗಿ ಚುನಾವಣೆ ಮುಗಿದು 11 ತಿಂಗಳು ಕಳೆದರೂ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರಿಗೆ ಮಾತ್ರ ಅಧಿಕಾರ ಸಿಕ್ಕಿಲ್ಲ, ತಮ್ಮ ವಾರ್ಡ್ಗಳಲ್ಲಿ ಆಗಬೇಕಾದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ, ಮತದಾರ ಮಾತ್ರ ಚುನಾಯಿತ ಸದಸ್ಯರ ಮೇಲೆ ಮುನಿಸಿಕೊಳ್ಳುವುದು ಸರ್ವೇ ಸಾಮಾನ್ಯವಾಗಿದೆ.
•ಮಹಾದೇವ ಪೂಜೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ