ಮರಾಠಿಗರ ಹೆಗಲ ಮೇಲೆ ಬಂದೂಕಿಟ್ಟ ಶಿವಸೇನೆ: ಫಡ್ನವೀಸ್
Team Udayavani, Apr 16, 2021, 9:25 PM IST
ಬೆಳಗಾವಿ : ಮರಾಠಿಗರ ಹೆಗಲ ಮೇಲೆ ಬಂದೂಕು ಇಟ್ಟು ಟಿಪ್ಪು ಸುಲ್ತಾನ್ ಕೀ ಜೈ ಎನ್ನುವವರ(ಕಾಂಗ್ರೆಸ್) ಕೊರಳಿಗೆ ಹಾರ ಹಾಕಲು ಶಿವಸೇನೆ ಮುಂದಾಗಿದೆ. ಇದಕ್ಕೆ ನಮ್ಮ ಮರಾಠಿಯ ಹೆಗಲು ಯಾವಾಗಲೂ ನಿಮಗೆ ಸಾಥ್ ನೀಡುವುದಿಲ್ಲ ಎಂದು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಎಚ್ಚರಿಕೆ ನೀಡಿದರು.
ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ಗುರುವಾರ ನಡೆದ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜತೆ ಶಿವಸೇನೆ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ಬೆಳಗಾವಿಯ ಮರಾಠಿಗರ ಹೆಗಲ ಮೇಲೆ ಬಂದೂಕು ಇಟ್ಟು ಬಿಜೆಪಿಗೆ ಗುಂಡು ಹಾರಿಸಿ ಕಾಂಗ್ರೆಸ್ ಬೆಂಬಲಿಸಲು ಶಿವಸೇನೆಯ ಸಂಜಯ ರಾವುತ್ ಕುತಂತ್ರ ನಡೆಸಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.
ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಟಿಪ್ಪು ಜಯಂತಿ ರದ್ದುಗೊಳಿಸಿದೆ. ಆದರೆ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವ ಕಾಂಗ್ರೆಸ್ ಜತೆ ಮಹಾರಾಷ್ಟ್ರದಲ್ಲಿ ಶಿವಸೇನೆ ಕೈಜೋಡಿಸಿದೆ. ಸಂಜಯ ರಾವುತ್ ಮರಾಠಿ ಮನುಷ್ಯನ ಬೆನ್ನಿಗೆ ನಿಲ್ಲಲು ಬಂದಿರುವುದಾಗಿ ಹೇಳಿದ್ದರು. ಆದರೆ ಅದರ ಹಿಂದಿನ ಅಸಲಿಯತ್ತು ಬೇರೆ ಇದೆ. ಕಾಂಗ್ರೆಸ್ಗೆ ಲಾಭ ಮಾಡಲು ಮತ ವಿಭಜನೆಗೆಂದು ಆಗಮಿಸಿದ್ದರು. ಬಾಳಾಸಾಹೇಬ ಠಾಕ್ರೆ ಅವರ ಶಿವಸೇನೆ ಈಗ ಮಹಾರಾಷ್ಟ್ರದಲ್ಲಿ ಉಳಿದಿಲ್ಲ. ಮತ ಬ್ಯಾಂಕ್ಗಾಗಿ ಅಧಿ ಕಾರದ ದುರಾಸೆಗಾಗಿ ಶಿವಸೇನೆ ಏನೇನೋ ಮಾಡಲು ಹೊರಟಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆಯು ಉರ್ದು ಭಾಷೆಯಲ್ಲಿ ಕ್ಯಾಲೆಂಡರ್ ಮುದ್ರಿಸಿದೆ. ಅದರಲ್ಲಿ ಜನಾಬ್ ಬಾಳಾಸಾಹೇಬ ಠಾಕ್ರೆ ಎಂದು ಬರೆದಿದೆ. ಜತೆಗೆ ಆಜಾನ್ ಸ್ಪರ್ಧೆ ಹಮ್ಮಿಕೊಂಡಿದೆ.
ಉದ್ಧವ ಠಾಕ್ರೆ ಸರ್ಕಾರ ಇನ್ನು ಮುಂದೆ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲಿದೆ ಎಂದರು. ಛತ್ರಪತಿ ಶಿವಾಜಿ ಮಹಾರಾಜರು ಹಿಂದವಿ ಸ್ವರಾಜ್ ನಿರ್ಮಾಣಕ್ಕಾಗಿ ಹೋರಾಡಿದ್ದಾರೆ. ಇಲ್ಲಿಯ ಮರಾಠಿ ಭಾಷಿಕರು ಅಪ್ಪಟ ಹಿಂದುತ್ವವಾದಿಗಳಾಗಿದ್ದಾರೆ. ಮರಾಠಿಗರು ಅಮಾಯಕರೇ ಹೊರತು ಮೂರ್ಖರಲ್ಲ. ಉಪಚುನಾವಣೆಯಲ್ಲಿ ಎಂಇಎಸ್ ಹಾಗೂ ಸಂಜಯ ರಾವುತ್ಗೆ ಬೆಳಗಾವಿ ಮರಾಠಿ ಭಾಷಿಕ ಮತದಾರರು ಪಾಠ ಕಲಿಸಲಿದ್ದಾರೆ. ಬೆಳಗಾವಿ ಮರಾಠಿ ಭಾಷಿಕರ ಮೇಲೆ ರಾವುತ್ ನಕಲಿ ಪ್ರೀತಿ ತೋರಿಸುತ್ತಿದ್ದಾರೆ ಎಂದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಮಾತನಾಡಿದರು. ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಧನಂಜಯ ಜಾಧವ ಸ್ವಾಗತಿಸಿದರು. ಸಚಿವರಾದ ಜಗದೀಶ ಶೆಟ್ಟರ, ಉಮೇಶ ಕತ್ತಿ, ಮುರುಗೇಶ ನಿರಾಣಿ, ಶಾಸಕ ಅನಿಲ ಬೆನಕೆ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಮುಖಂಡರಾದ ರಾಜೇಂದ್ರ ನೇರ್ಲಿ, ಉಜ್ವಲಾ ಬಡವನಾಚೆ, ಜಗದೀಶ ಹಿರೇಮನಿ, ಶಶಿಕಾಂತ ಪಾಟೀಲ, ಶಿವಾಜಿ ಸುಂಠಕರ, ಮನೋಹರ ಕಡೋಲ್ಕರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ