ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಭಕ್ತರ ಕಾತರ
Team Udayavani, Jul 2, 2020, 1:20 PM IST
ಸವದತ್ತಿ: ಯಲ್ಲಮ್ಮ ಗುಡ್ಡಕ್ಕೆ ಆಗಮಿಸಿದ ಭಕ್ತರು ಮಹಾದ್ವಾರದ ಬಳಿಯೇ ಪೂಜೆ ಸಲ್ಲಿಸುತ್ತಿದ್ದಾರೆ.
ಸವದತ್ತಿ: ವರ್ಷದ 12 ತಿಂಗಳೂ ಭಕ್ತರು, ವ್ಯಾಪಾರಿಗಳಿಂದ ಗಿಜುಗುಡುತ್ತಿದ್ದ ತಾಲೂಕಿನ ಸುಕ್ಷೇತ್ರ ಯಲ್ಲಮ್ಮ ದೇವಿ ಸನ್ನಿಧಿಗೆ ಲಾಕ್ಡೌನ್ ಸಡಿಲಿಕೆಯಾದ ಬಳಿಕ ಮಂಗಳವಾರ ಮತ್ತು ಶುಕ್ರವಾರ ಬರುವ ಭಕ್ತರ ಸಂಖ್ಯೆ ಹೆಚ್ಚಿದೆ. ಇದರಿಂದ ತಾಲೂಕಿಗೆ ಅಲ್ಪ ಪ್ರಮಾಣದಲ್ಲಿದ್ದ ಕೋವಿಡ್ ಸೋಂಕು ಹರಡುವ ಸಾಧ್ಯತೆಗಳಿವೆ. ಈಗಾಗಲೇ ಸರಕಾರದ ಆದೇಶದನ್ವಯ ರಾಜ್ಯದ
ಬಹುತೇಕ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನಕ್ಕೆ ಅನುಮತಿ ನೀಡಲಾಗಿದೆ. ಯಲ್ಲಮ್ಮ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಹೆಚ್ಚು ಭಕ್ತರು ಬರುವ ನಿರೀಕ್ಷೆಯಿಂದ ಸರಕಾರ ಮತ್ತು ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ದೇವಸ್ಥಾನವನ್ನು ಜೂ.30ರ ವರೆಗೆ ತೆರೆಯದಂತೆ ಆದೇಶಿಸಿದ್ದರು. ಈಗ ಈ ಆದೇಶವನ್ನು ಜುಲೈ 31ರ ವರೆಗೆ ಮುಂದುವರೆಸಲಾಗಿದೆ.
ಸದ್ಯ ಸಾರ್ವಜನಿಕರ ದರ್ಶನ ನಿಷೇಧಿ ಸಿದ್ದು, ಪೂಜಾ ವಿಧಿ- ವಿಧಾನಗಳು ನಿತ್ಯದಂತೆ ನಡೆದಿವೆ. ಆದಾಗ್ಯೂ ಬೇರೆಡೆಯಿಂದ ಭಕ್ತರು ಆಗಮಿಸಿ ದೇವಸ್ಥಾನದ ಮಹಾದ್ವಾರದ ಬಳಿ ರಸ್ತೆಯಲ್ಲಿಯೇ ಕಾಯಿ, ಕರ್ಪೂರ, ನೈವೇದ್ಯ ಅರ್ಪಿಸುತ್ತಿದ್ದಾರೆ. ಇನ್ನು ಕೆಲವರು ದೇವಿಯ ದರ್ಶನಕ್ಕಾಗಿ ಸಿಬ್ಬಂದಿ ಜೊತೆ ವಾಗ್ವಾದಕ್ಕಿಳಿದ ಘಟನೆಗಳು ನಡೆದಿವೆ.
ಕೋವಿಡ್ನಿಂದ ಆರ್ಥಿಕ ಸಂಕಷ್ಟ ಅನುಭವಿಸಿದ ಸುತ್ತಲಿನ ಗ್ರಾಮಗಳ ಚಿಕ್ಕ ವ್ಯಾಪಾರಸ್ಥರು ಭಕ್ತರ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಬರುವ ಭಕ್ತಾದಿಗಳಿಗೆ ಪೂಜಾ ಸಾಮಗ್ರಿ, ಮಧ್ಯಾಹ್ನದ ಊಟ ಮತ್ತು ಚಹ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಗೆ ಸಣ್ಣ ಪುಟ್ಟ ವ್ಯಾಪಾರಸ್ಥರು ದೇವಸ್ಥಾನದತ್ತ ಮುಖ ಮಾಡಿದ್ದಾರೆ. ಜೋಗುತಿಯರು ಭಕ್ತರಿಂದ ಪಡ್ಡಲಗಿ ತುಂಬಿಸುವ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ. ಸೋಂಕಿನ ಹರಡದಂತೆ ಸರಕಾರ ಎಷ್ಟೆ ಕ್ರಮ ಕೈಗೊಂಡರೂ ಭಕ್ತರಾಗಲಿ, ವ್ಯಾಪಾರಸ್ಥರಾಗಲಿ ತಲೆ ಕೆಡಿಸಿಕೊಳ್ಳುತ್ತಿಲ್ಲ. ಇದರಿಂದಾಗಿ ಸೋಂಕು ತೀವ್ರತೆ ಪಡೆಯುವ ಸಂಭವಗಳನ್ನು ತಳ್ಳಿ ಹಾಕುವಂತಿಲ್ಲ. ದೇವಸ್ಥಾನದ ಸುತ್ತಲಿನ ಗ್ರಾಪಂಗಳಿಂದ ಗ್ರಾಮಸ್ಥರಿಗೆ ಮತ್ತು ವ್ಯಾಪಾರಸ್ಥರಿಗೆ ಗುಡ್ಡಕ್ಕೆ ಹೋಗದಂತೆ, ವ್ಯಾಪಾರ ನಡೆಸದಂತೆ ಪ್ರಚಾರ ನಡೆಸಿ
ಮುನ್ನೆಚ್ಚರಿಕಾ ಕ್ರಮಗಳನ್ನು ತಿಳಿಸಲಾಗುತ್ತಿದೆ. ಸರಕಾರದ ಆದೇಶವಿದ್ದರೂ ಸಹ ದೇವಸ್ಥಾನಕ್ಕೆ ಭಕ್ತಾದಿಗಳ ಆಗಮನ ನಿಂತಿಲ್ಲ. ಪೊಲೀಸ್ ಇಲಾಖೆಯಿಂದ ಭಕ್ತರಿಗೆ, ಜೋಗುತಿಯರಿಗೆ ಮತ್ತು ವ್ಯಾಪಾರಸ್ಥರಿಗೆ ತಿಳಿವಳಿಕೆ ನೀಡಿ ಮರಳಿ ಕಳುಹಿಸುವ ಕಾರ್ಯ ನಡೆದಿದೆ.
ಸಾರ್ವಜನಿಕ ದರ್ಶನ ನಿಷೇಧವಿದ್ದರೂ ಭಕ್ತರು ಯಲ್ಲಮ್ಮನ ಗುಡ್ಡಕ್ಕೆ ಬರುತ್ತಿದ್ದಾರೆ. ಸಿಬ್ಬಂದಿಗಳಿಂದ ತಿಳಿವಳಿಕೆ ನೀಡಿ ಮರಳಿ ಕಳಿಸಲಾಗುತ್ತಿದೆ. ಸರಕಾರದ ಆದೇಶದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ.
ರವಿ ಕೋಟಾರಗಸ್ತಿ, ಕಾರ್ಯನಿರ್ವಾಹಕ ಅಧಿಕಾರಿ,
ಯಲ್ಲಮ್ಮ ದೇವಸ್ಥಾನ ದೇವಸ್ಥಾನಕ್ಕೆ ಬರುವ ಭಕ್ತಾದಿಗಳೊಂದಿಗೆ ಸಾಮಾಜಿಕ ಅಂತರ ಕಾಪಾಡಬೇಕು, ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ಗ್ರಾಮದಲ್ಲಿ ಗುಂಪುಗೂಡಿ ಸಂತೆ ನಡೆಸದಂತೆ ಗ್ರಾಮಸ್ಥರಲ್ಲಿ ಧ್ವನಿ ವರ್ಧಕಗಳ ಮೂಲಕ ಪ್ರಚಾರ ನಡೆಸಲಾಗಿದೆ.
ಮಹೇಶ ತೆಲಗಾರ ಪಿಡಿಒ ಉಗರಗೋಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ