ನೇರ ಫೋನ್ ಇನ್ ಕಾರ್ಯಕ್ರಮ
Team Udayavani, May 28, 2020, 7:14 AM IST
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಬೆಳಗಾವಿಯ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದ ಸಹಯೋಗದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ನಡೆಯಿತು.
ಬೆಳಗಾವಿ: ನೀರು ಉಳಿಸುವ ಬಗ್ಗೆ ಜಾಗೃತರಾಗದಿದ್ದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆ ಇದೆ. ಮೊದಲು ನಮ್ಮ ಮನೆಗಳಲ್ಲಿ ನೀರನ್ನು ಮಿತವ್ಯಯವಾಗಿ ಬಳಸಬೇಕು ಮತ್ತು ನೀರಿನ ಮಹತ್ವ ಅರಿಯಬೇಕಾಗಿದೆ ಎಂದು ಹುಕ್ಕೇರಿ ತಾಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಅಭಯಂತರರಾದ ಎ.ಬಿ. ಪಟ್ಟಣಶೆಟ್ಟಿ ಹೇಳಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಬೆಳಗಾವಿಯ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಶೌಚಾಲಯದ ನಿರ್ಮಾಣ, ನಿರ್ವಹಣೆ ಹಾಗೂ ಉಪಯೋಗ, ಸಾರ್ವಜನಿಕ ಶೌಚಾಲಯದ ಸಮಸ್ಯೆಗೆ ಸಂಬಂಧಿಸಿದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಳುಗರ ಕರೆಗಳಿಗೆ ಉತ್ತರಿಸಿದ ಅವರು, ಪ್ರತಿ ಗ್ರಾಮಗಳಲ್ಲಿ ಕುಡಿಯುವ ನೀರನ್ನು ಸಮರ್ಪಕವಾಗಿ ವಿತರಿಸಲು ಕ್ರಮಕೈಗೊಳ್ಳಲಾಗುವುದು. ಜನರು ನೀರನ್ನು ಮಿತವಾಗಿ ಬಳಸದೆ ಪೋಲು ಮಾಡುತ್ತಿದ್ದಾರೆ. ಇದು ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ನೀರಿಲ್ಲದೆ ಬಹಳ ಕಷ್ಟ ಪಡಬೇಕಾಗುತ್ತದೆ ಎಂದರು.
ಆರೋಗ್ಯ ಸುಧಾರಣೆಗಾಗಿ, ಜನರ ರಕ್ಷಣೆಗಾಗಿ ಎಲ್ಲಕ್ಕಿಂತ ಹೆಚ್ಚಾಗಿ ಮಹಿಳೆಯರ ಮತ್ತು ಬಾಲಕಿಯರ ಗೌರವ ಕಾಪಾಡಲೂ ಶೌಚಾಲಯ ಸುಭದ್ರತೆಯ ಸಂಕೇತವಾಗಿದೆ. ಶೌಚಾಲಯದ ನಿರ್ಮಾಣ ಎಂದು ಹೇಳಿದ ಸಹಾಯಕ ಅಭಿಯಂತರಾದ ರವೀಂದ್ರ ಮುರಗಾಲಿ, ಶೌಚಾಲಯ ನಿರ್ವಹಣೆ ಹಾಗೂ ಉಪಯೋಗ ಮತ್ತು ಸಾರ್ವಜನಿಕ ಶೌಚಾಲಯದ ಸಮಸ್ಯೆಗೆ ಸಂಬಂಧಿಸಿದ ಕರೆಗಳಿಗೆ ಉತ್ತರಿಸಿದರು. ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಚಾರ್ಯ ಕಿರಣ ಚೌಗಲಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ