“ವಿದ್ಯುತ್ ದರ ಏರಿಕೆ ಮಾಡದಂತೆ ಸಚಿವರೊಂದಿಗೆ ಚರ್ಚೆ’
Team Udayavani, Dec 23, 2022, 11:55 PM IST
ಬೆಳಗಾವಿ: ವಿದ್ಯುತ್ ದರ ಏರಿಕೆಗೆ ಹೆಸ್ಕಾಂಗಳು ಸಲ್ಲಿಸಿರುವ ಪ್ರಸ್ತಾವನೆ ಪ್ರಕಾರ ದರ ಹೆಚ್ಚಳ ಮಾಡದಿರುವ ಕುರಿತಂತೆ ಇಂಧನ ಸಚಿವರ ಜತೆ ಚರ್ಚಿಸಲಾಗುವುದು ಎಂದು ವಿಧಾನಪರಿಷತ್ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕಾಂಗ್ರೆಸ್ನ ಮಂಜುನಾಥ ಭಂಡಾರಿ ಶೂನ್ಯ ವೇಳೆಯಲ್ಲಿ ಉದಯವಾಣಿ’ ದಿನಪತ್ರಿಕೆಯಲ್ಲಿ ವಿದ್ಯುತ್ ದರ ಏರಿಕೆಯಾಗುತ್ತಾ? ಎಂಬ ಶೀರ್ಷಿಕೆ ಅಡಿಯಲ್ಲಿ ಪ್ರಕಟವಾದ ವರದಿ ಪ್ರಸ್ತಾಪಿಸಿ, ವಿದ್ಯುತ್ ದರ ಏರಿಕೆಗೆ ಕೆಇಆರ್ಸಿಗೆ ಹೆಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿವೆ. ಈ ಪ್ರಸ್ತಾವನೆಯನ್ನು ಅನುಮೋದಿಸಿದರೆ ಜನಸಾಮಾನ್ಯರಿಗೆ ಹೊರೆಯಾಗುತ್ತದೆ. ಹೀಗಾಗಿ ವಿದ್ಯುತ್ ದರ ಹೆಚ್ಚಳ ನಿರ್ಧಾರ ಮಾಡಬಾರದು ಎಂದು ಆಗ್ರಹಿಸಿದರು.
ಸಚಿವರೊಂದಿಗೆ ಚರ್ಚಿಸುತ್ತೇನೆ
ಅದಕ್ಕೆ ಉತ್ತರಿಸಿದ ಕೋಟ ಶ್ರೀನಿವಾಸ ಪೂಜಾರಿ, ಹೆಸ್ಕಾಂಗಳು ಸಲ್ಲಿಸಿರುವ ಪ್ರಸ್ತಾವನೆ ಕುರಿತು ಇಂಧನ ಇಲಾಖೆ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಬಗ್ಗೆ ಇಂಧನ ಸಚಿವರೊಂದಿಗೆ ಚರ್ಚಿಸುತ್ತೇನೆ. ಜತೆಗೆ ಜನ ಸಾಮಾನ್ಯರ ಮೇಲೆ ಹೊರೆಯಾಗದಂತೆ ಕ್ರಮ ಕೈಗೊಳ್ಳುವ ಕುರಿತು ಮಾತುಕತೆ ನಡೆಸಿ ಸದನಕ್ಕೆ ಉತ್ತರಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!