ಪ್ರೋತ್ಸಾಹ ಧನ ವಿತರಣೆ
Team Udayavani, Jun 1, 2020, 4:56 AM IST
ಅಥಣಿ: ಕೋವಿಡ್ ವಾರಿಯರ್ಸ್ ಗೆ ಸಹಕಾರಿಗಳ ಸಲಾಂ ಎಂಬ ಕಾರ್ಯಕ್ರಮದಡಿ ರವಿವಾರ ಐನಾಪುರ, ಕೃಷ್ಣಾ ಕಿತ್ತೂರ, ಮದಭಾವಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ವಿತರಣೆ ಮಾಡಲಾಯಿತು.
ಡಿಸಿಎಂ ಲಕ್ಷ್ಮಣ ಸವದಿ ಆಶಾ ಕಾರ್ಯಕರ್ತರಿಗೆ ಚೆಕ್ ವಿತರಿಸಿ ಮಾತನಾಡಿ, ಕೋವಿಡ್ ವಿರುದ್ಧದ ಹೋರಾಟದಲ್ಲಿ ವೈದ್ಯರ ಜೊತೆಗೂಡಿ ಆಶಾ ಕಾರ್ಯಕರ್ತರು ಕೆಲಸ ಮಾಡಿದ್ದನ್ನು ಗುರುತಿಸಿ ಅಭಿನಂದಿಸುವ ಕೆಲಸಕ್ಕೆ ಸರ್ಕಾರ ಚಾಲನೆ ನೀಡಿದೆ. ನಿಮ್ಮ ಕೆಲಸವನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ನಾವು ಸಹಕಾರ ಸಂಘಗಳ ಸಹಾಯ ಬಯಸಿದಾಗ ರಾಜ್ಯದ ಎಲ್ಲ ಸಹಕಾರಿ ಸಂಘಗಳು ಮುಂದಾದವು. ಈಗ ತಾಲೂಕಿನ 456 ಆಶಾ ಕಾರ್ಯಕರ್ತರಿಗೆ ತಲಾ ಮೂರು ಸಾವಿರ ರೂ. ಚೆಕ್ ವಿತರಿಸಲಾಗುತ್ತಿದೆ ಎಂದರು.
ಈ ವೇಳೆ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ವಿನಾಯಕ ಲಕ್ಸಾಣಿ, ರವಿ ಪೂಜಾರಿ, ಪ್ರಕಾಶ ಕೊರಬು ಸೇರಿದಂತೆ ಹಲವು ಸಹಕಾರಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ