ಜ. 11ರಂದು ಬೆಳಗಾವಿ ವೀರಸೌಧದಿಂದ ಕಾಂಗ್ರೆಸ್ ಯಾತ್ರೆ: ಡಿಕೆಶಿ
ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನರಿಗೆ ತಿಳಿವಳಿಕೆ
Team Udayavani, Dec 30, 2022, 8:32 PM IST
ಬೆಳಗಾವಿ : ಸ್ವಾತಂತ್ರ್ಯ ಪೂರ್ವದಲ್ಲಿ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಮಹಾತ್ಮ ಗಾಂಧೀಜಿ ಕಾಂಗ್ರೆಸ್ ನಾಯಕತ್ವ ವಹಿಸಿದ್ದರು. ಅದೇ ರೀತಿ ಈಗ ರಾಜ್ಯದಲ್ಲಿ ಅನ್ಯಾಯದ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಭಾವನೆ, ನೋವಿಗೆ ಧ್ವನಿಯಾಗಲು ಭ್ರಷ್ಟ ಬಿಜೆಪಿ ಸರಕಾರಕ್ಕೆ ಮುಕ್ತಿ ನೀಡಬೇಕಿದೆ. ಅಭಿವೃದ್ಧಿಶೀಲ ಕರ್ನಾಟಕ ನಿರ್ಮಾಣ ಮಾಡಲು ಕಾಂಗ್ರೆಸ್ ಸರ್ವ ಸನ್ನದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದ ಟಿಳಕವಾಡಿಯಲ್ಲಿರುವ ವೀರಸೌಧಕ್ಕೆ ಶುಕ್ರವಾರ ಭೇಟಿ ನೀಡಿ ಗಾಂಧೀಜಿ ಪ್ರತಿಮೆಗೆ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಹುಲ್ ಗಾಂಧಿ ದೇಶದ ಏಕತೆ, ಸಮಗ್ರತೆ, ಶಾಂತಿಗಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ. ನಾವು ಮುಂದಿನ ಎರಡೂ¾ರು ತಿಂಗಳ ಕಾಲ ಈ ಸಂದೇಶವನ್ನು ಜನರಿಗೆ ತಿಳಿಸಲಿದ್ದು, ಸಮಾಜದಲ್ಲಿ ನೆಮ್ಮದಿ, ಶಾಂತಿ ಮೂಡಿಸಲು ಹಾಗೂ ಸುಭದ್ರ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ವಾಗ್ಧಾನದೊಂದಿಗೆ ಜ.11ರಂದು ವೀರಸೌಧದಿಂದ ಯಾತ್ರೆ ಹೊರಟಿದ್ದೇವೆ ಎಂದರು.
ನಿಷ್ಪ್ರಪ್ರಯೋಜಕ ಅಧಿವೇಶನ
ಬೆಳಗಾವಿ ಅಧಿವೇಶನದಿಂದ ಉತ್ತರ ಕರ್ನಾಟಕ ಜನರಿಗೆ ಯಾವುದೇ ಪ್ರಯೋಜನವಾಗಲಿಲ್ಲ. ಸಮಯ ಸಹಿತ ಎಲ್ಲವೂ ವ್ಯರ್ಥವಾಯಿತು. ಉತ್ತರ ಕರ್ನಾಟಕ ಭಾಗದ ಸಮಸ್ಯೆ, ಭ್ರಷ್ಟಾಚಾರ ವಿಚಾರ, ಮತ ಕಳ್ಳತನ ವಿಚಾರವಾಗಿ ಚರ್ಚೆಗೆ ಅವಕಾಶ ನೀಡಲಿಲ್ಲ. ಕೃಷ್ಣಾ, ಮಹಾದಾಯಿ ನೀರಾವರಿ ಯೋಜನೆ ವಿಚಾರವಾಗಿ ನಾವು ಹೋರಾಟ ಆರಂಭಿಸುತ್ತಿದ್ದೇವೆ ಎಂದು ಈಗ ತರಾತುರಿಯಲ್ಲಿ ಕಳಸಾ-ಬಂಡೂರಿ ಯೋಜನೆ ಡಿಪಿಆರ್ಗೆ ಒಪ್ಪಿಗೆ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ