ಬಿ ಟೀಂ ಯಾರಾದರೇನು, ಬಿಜೆಪಿ ಎ ಟೀಂ ಎನ್ನುವುದು ಖಾತ್ರಿ ಆಯ್ತು: ಸಿಎಂ ಬೊಮ್ಮಾಯಿ
Team Udayavani, Jun 11, 2022, 11:18 AM IST
ಬೆಳಗಾವಿ: ಎಚ್.ಡಿ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಮಧ್ಯೆ ನಾನು ಹೋಗುವುದಿಲ್ಲ. ಭಾರತೀಯ ಜನತಾ ಪಾರ್ಟಿ ಎ ಟೀಂ ಎನ್ನುವುದು ಖಾತ್ರಿಯಾಗಿದೆ. ಬಿ ಟೀಂ ಯಾವುದಾದರೇನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಶನಿವಾರ ಡಾ.ಪ್ರಭಾಕರ ಕೋರೆ ಅವರ ನಿವಾಸಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ವ್ಯಖ್ಯಾನ ಬಗ್ಗೆ ನಾನು ಮಾತನಾಡುವುದಿಲ್ಲ. ಕಾಂಗ್ರೆಸ್ ಪಕ್ಷ ಜೆಡಿಎಸ್ ಗೆ, ಜೆಡಿಎಸ್ ಪಕ್ಷ ಕಾಂಗ್ರೆಸ್ ಗೆ ಬಿ ಟೀಂ ಎನ್ನುತ್ತಿದೆ. ಹೀಗಾಗಿ ಎ ಟೀಂ ಎನ್ನುವುದು ಬಿಜೆಪಿ ಪಕ್ಕಾ ಆಗಿದೆ ಎಂದರು.
ನನ್ನ ವಿರುದ್ಧವೇ ಸಿದ್ದರಾಮಯ್ಯ ಹೆಚ್ಚು ಮಾತನಾಡುತ್ತಾರೆ. ಅವರು ಬಳಸುವ ಪದಗಳು ನನ್ನ ಬಗ್ಗೆ ಜಾಸ್ತಿ ಇರುತ್ತದೆ. ಬೆಳಗಾವಿಗೆ ಬಂದಾಗ ನೀವೇ ನೋಡಿದೀರಲ್ಲ ಎಂದರು.
ಇದನ್ನೂ ಓದಿ:ನೂಪುರ್ ಹೇಳಿಕೆ ವಿರೋಧಿಸಿ ಪ್ರತಿಭಟನೆ: ರಾಜ್ಯದೆಲ್ಲೆಡೆ ಖಾಕಿ ಕಣ್ಗಾವಲು
ಬೆಳಗಾವಿಯ ಎಲ್ಲ ಸಾಹುಕಾರರೂ ಒಗ್ಗಟ್ಟಿದ್ದಾರೆ. ಎಲ್ಲರೂ ತಮ್ಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಎಲ್ ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಮುನಿಸಿಕೊಂಡಿಲ್ಲ. ಅವರನ್ನು ನಿರ್ಲಕ್ಷಿಸುವ ಮಾತೇ ಇಲ್ಲ. ನಮ್ಮ ಹಿರಿಯರು, ಮಾರ್ಗದರ್ಶಕರು. ಅವರದ್ದೇ ಆದ ಸ್ಥಾನ ಇದೆ. ನಾವು ಅವರನ್ನು ಅಲ್ಲಗಳೆದಿಲ್ಲ. ಪೂರ್ವಭಾವಿಯಾಗಿ ಆರು ತಿಂಗಳ ಮುಂಚೆಯೇ ಅವರು ಡಾಕ್ಟರೇಟ್ ಪಡೆಯಲು ಹೋಗಿದ್ದರು. ನನಗೆ ಹೇಳಿ ಹೋಗಿದ್ದರು. ನಾಲ್ಕು ದಶಕಗಳ ಸುದೀರ್ಘ ಅವಧಿಯಲ್ಲಿ ಸಾರ್ವಜನಿಕ ಸೇವೆಯಲ್ಲಿ ಮಾಡಿರುವ ಸೇವೆಯನ್ನು ಪಕ್ಷ ಹಾಗೂ ನಾವು ಗುರುತಿಸುತ್ತೇವೆ ಎಂದು ಹೇಳಿದರು.
ನಾಲ್ಕೂ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಇಬ್ಬರು ವಾಯವ್ಯ ಕ್ಷೇತ್ರದಲ್ಲಿ ಅರುಣ ಶಹಾಪುರ ಹಾಗೂ ಹನುಮಂತ ನಿರಾಣಿ ಹೆಚ್ಚಿನ ಅಂತರದಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ