![1-assam](https://www.udayavani.com/wp-content/uploads/2024/07/1-assam-415x233.jpg)
ಬೀಜ-ಗೊಬ್ಬರ ಹಂಚಿಕೆಯಲ್ಲಿ ಲೋಪವಾಗದಿರಲಿ: ಡಾ|ವಿಶಾಲ್
Team Udayavani, May 9, 2019, 12:31 PM IST
![bel-1](https://www.udayavani.com/wp-content/uploads/2019/05/bel-1-3-620x182.jpg)
ಬೆಳಗಾವಿ: ಮುಂಗಾರು ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜಗಳು ಹಾಗೂ ಅಗತ್ಯ ಗೊಬ್ಬರವನ್ನು ಸಮರ್ಪಕವಾಗಿ ಹಂಚಿಕೆ ಮಾಡಬೇಕು. ಒಂದು ವೇಳೆ ಇದಕ್ಕೆ ಸಂಬಂಧಿಸಿದಂತೆ ದೂರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ವಿಶಾಲ್ ಆರ್. ಕೃಷಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬೀಜ-ಗೊಬ್ಬರಗಳ ಲಭ್ಯತೆ, ಕೃಷಿ ವಿಮಾ ಯೋಜನೆ ಅನುಷ್ಠಾನ ಹಾಗೂ ಕೃಷಿ ಅಭಿಯಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಯಾದ ನಂತರ ಬಿತ್ತನೆ ಬೀಜಗಳು ಮತ್ತು ಗೊಬ್ಬರಕ್ಕಾಗಿ ರೈತರಿಂದ ದಿಢೀರ್ ಬೇಡಿಕೆ ಬರುತ್ತದೆ. ಅಂತಹ ಸಂದರ್ಭದಲ್ಲಿ ಯಾವುದೇ ಅನಾನುಕೂಲ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುಂಚಿತವಾಗಿಯೇ ಬೀಜ-ಗೊಬ್ಬರಗಳ ಸಮರ್ಪಕ ದಾಸ್ತಾನು ಮಾಡಿಕೊಳ್ಳಬೇಕು. ರೈತರಿಗೆ ಮಾಹಿತಿ ಒದಗಿಸಲು ಅಥವಾ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿ ಕೇಂದ್ರ ಸ್ಥಾಪಿಸಬೇಕು. ಬಿತ್ತನೆ ಬೀಜ ವಿತರಿಸುವಾಗ ಗುಣಮಟ್ಟ ಖಾತ್ರಿಪಡಿಸಿಕೊಂಡು ರೈತರಿಗೆ ಪೂರೈಸಬೇಕು. ಯಾವುದೇ ಕಾರಣಕ್ಕೂ ಕೊರತೆಯಾಗದಂತೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ನೀರಿನ ಕೊರತೆಯಿಂದಾಗಿ ರೈತರು ಕಬ್ಬಿನ ಬದಲಾಗಿ ಪರ್ಯಾಯ ಬೆಳೆ ಬೆಳೆಯಲು ಮುಂದಾದರೆ ಅಗತ್ಯವಾಗಿರುವ ಪರ್ಯಾಯ ಬೀಜಗಳ ದಾಸ್ತಾನು ಮಾಡಿಕೊಳ್ಳಬೇಕು. ಭೂಮಿಯ ಫಲವತ್ತತೆ ಹೆಚ್ಚಿಸುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿಶಾಲ್ ಆರ್. ತಿಳಿಸಿದರು.
ಜಿಲ್ಲೆಯಲ್ಲಿ ಮಳೆ ಕೊರತೆ: ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ಶೇ. 67ರಷ್ಟು ಮಳೆಯ ಕೊರತೆ ಉಂಟಾಗಿದೆ. ಪ್ರಸಕ್ತ ಸಾಲಿನ ಜನೇವರಿ ತಿಂಗಳಿನಿಂದ ಇಲ್ಲಿಯವರೆಗೆ 48 ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಇದುವರೆಗೆ ಕೇವಲ 16 ಮಿ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದರು.
ಮುಂಗಾರು ಹಂಗಾಮಿಗಾಗಿ ಜಿಲ್ಲೆಗೆ ಅಗತ್ಯವಿರುವ ಬೀಜ-ಗೊಬ್ಬರಗಳ ಸಮರ್ಪಕ ದಾಸ್ತಾನು ಇರುತ್ತದೆ. ರೈತರ ಬೇಡಿಕೆಗೆ ಅನುಗುಣವಾಗಿ ಬೀಜ-ಗೊಬ್ಬರಗಳ ವಿತರಣೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದರು. ರೈತರಿಗೆ ಅಗತ್ಯವಿರುವ ಬೀಜ-ಗೊಬ್ಬರಗಳನ್ನು ಸಮರ್ಪಕವಾಗಿ ಹಂಚಿಕೆ ಮಾಡಲು ಸಹಕಾರ ನೀಡಬೇಕು ಎಂದು ಬೀಜ-ಗೊಬ್ಬರ ಮಾರಾಟಗಾರರಿಗೂ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಬಿತ್ತನೆ ಬೀಜ, ಗೊಬ್ಬರ-ಕೀಟನಾಶಕಗಳನ್ನು ಖರೀದಿಸುವಾಗ ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿ ಡಾ| ವಿಶಾಲ್ ಆರ್. ಬಿಡುಗಡೆಗೊಳಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ, ಉಪನಿರ್ದೇಶಕರಾದ ಡಾ.ಎಚ್.ಡಿ.ಕೋಳೇಕರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಹಕಾಟಿ, ಕೃಷಿ, ಸಹಕಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.