ದೇಶದಲ್ಲಿ ಸಂಖ್ಯೆಗನುಗುಣವಾಗಿ ವೈದ್ಯರಿಲ್ಲ


Team Udayavani, Apr 8, 2019, 12:14 PM IST

bel
ಬೆಳಗಾವಿ: ಗ್ರಾಮೀಣ ಹಾಗೂ ಕೃಷಿ ಆಧಾರಿತ ಭಾರತದಲ್ಲಿ ಜನಸಂಖ್ಯೆ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ಅವರಲ್ಲಿ ಬರುವ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಸಿಗುತ್ತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ವೈದ್ಯರು ಲಭಿಸದೇ ಇರುವುದರಿಂದ ಜನರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಎಂದು ನವದೆಹಲಿಯ ನ್ಯಾಶನಲ್‌ ಬೋರ್ಡ್‌ ಆಫ್‌ ಎಕ್ಸಾಮಿನೇಶನ್‌ನ ಡಾ| ಅಭಿಜಾತ ಶೇಟ ಹೇಳಿದರು.
ಕೆಎಲ್‌ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ, ಜವಾಹರಲಾಲ್‌ ನೆಹರು ವೈದ್ಯಕೀಯ ಮಹಾವಿದ್ಯಾಲಯ, ಕೆಎಲ್‌ಇ ಸಂಸ್ಥೆಯ ಡಾ| ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಆಶ್ರಯದಲ್ಲಿ ಜೆಎನ್‌ಎಂಸಿ ಸೈಂಟಿಫಿಕ್‌ ಸೊಸೈಟಿಯ 37ನೇ ವಾರ್ಷಿಕ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವಸಂಸ್ಥೆಯ ಮಾನದಂಡಕ್ಕೆ ಅನುಗುಣವಾಗಿ ಸಾವಿರ ಜನಕ್ಕೆ ಓರ್ವ ವೈದ್ಯರು ಅವಶ್ಯ. ಆದರೆ ನಮ್ಮಲ್ಲಿ ಎರಡು ಸಾವಿರ ಜನಕ್ಕೆ ಒಬ್ಬರು ವೈದ್ಯರು ಮಾತ್ರ ಇದ್ದಾರೆ. ಹೀಗಾಗಿ ವೈದ್ಯಕೀಯ ಮಹಾವಿದ್ಯಾಲಯಗಳು ಗುಣಮಟ್ಟ ಶಿಕ್ಷಣ
ನೀಡುವುದರೊಂದಿಗೆ ಗ್ರಾಮೀಣ ಸೇವೆಗೆ ವೈದ್ಯರು ಅಣಿಯಾಗುವಂತೆ ಕಾರ್ಯ ರೂಪಿಸಬೇಕಾಗಿದೆ ಎಂದು ಪ್ರತಿಪಾದಿಸಿದರು.
ಅತ್ಯಂತ ಸಂದಿಗ್ಧ ಪರಿಸ್ಥಿಯಲ್ಲಿ ಚಿಕಿತ್ಸೆ ನೀಡುವ ತಜ್ಞ ವೈದ್ಯರು ಲಭಿಸುತ್ತಿಲ್ಲ. ಪ್ರತಿ ವರ್ಷ 60 ಸಾವಿರ ಪದವಿ, 30 ಸಾವಿರ ಸ್ನಾತ್ತಕೋತ್ತರ ಪದವಿ ಪಡೆದ ವೈದ್ಯರು ಹೊರಬೀಳುತ್ತಿದ್ದಾರೆ. ಆದರೂ ವೈದ್ಯರು ಸೇವೆಗೆ ಲಭಿಸುತ್ತಿಲ್ಲ. ದೇಶದಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ವೈದ್ಯರಿದ್ದರೂ ಅವರಲ್ಲಿ ಕೇವಲ 8.18 ಲಕ್ಷ ಅಲೋಪತಿ ವೈದ್ಯರು ಸೇವೆಗೆ ಲಭ್ಯವಿದ್ದಾರೆ. 2025ಕ್ಕೆ 1.5 ಲಕ್ಷ ವೈದ್ಯರನ್ನು ಪ್ರತಿ ವರ್ಷ ಸೇವೆಗೆ ಅಣಿಗೊಳಿಸಲು ಯೋಜನೆ ರೂಪಿಸಲಾಗಿದೆ. ಕಳೆದ 40 ವರ್ಷಗಳಿಂದ ವೈದ್ಯಕೀಯ ಶಿಕ್ಷಣದಲ್ಲಿ ಬದಲಾವಣೆ ಕಂಡಿಲ್ಲ. ಅದನ್ನು ಬದಲಾಯಿಸಿ ಪ್ರಸಕ್ತ ವ್ಯವಸ್ಥೆಗೆ ತಕ್ಕಂತೆ ರೂಪಿಸಬೇಕಾಗಿದೆ. ಆದರೆ ಅದು ಕಾರ್ಯಗತಗೊಳ್ಳುವುದು ಕಠಿಣ. ಮಿಲಿಟರಿ ವೈದ್ಯರಿಂದ ತರಬೇತಿ ನೀಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಬೆಂಗಳೂರಿನ ಹಿರಿಯ ಕ್ಯಾನ್ಸರ್‌ ಶಸ್ತ್ರ ಚಿಕಿತ್ಸಕ ಡಾ| ಕೆ.ಎಸ್‌. ಗೋಪಿನಾಥ ಅವರು ದತ್ತಿ ಉಪನ್ಯಾಸ ನೀಡಿದರು. ಶಸ್ತ್ರ ಚಿಕಿತ್ಸಾ ವಿಧಾನದಲ್ಲಿ ರೋಬೋಟಿಕ್‌ ತಂತ್ರಜ್ಞಾನದ ಪ್ರಾತ್ಯಕ್ಷಿಕೆ ಪ್ರದರ್ಶಿಸಲಾಯಿತು. ಜೆಎನ್‌ ವೈದ್ಯಕೀಯ ಮಹಾವಿದ್ಯಾಲಯ ಪ್ರಾಚಾರ್ಯೆ ಡಾ| ಎನ್‌. ಎಸ್‌. ಮಹಾಂತಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಘಟನಾ ಕಾರ್ಯಾಧ್ಯಕ್ಷ ಡಾ| ಆರ್‌.ಬಿ. ನೇರಲಿ, ಡಾ| ವಿ.ಎ. ಕೋಟಿವಾಲೆ, ಡಾ| ರೇಷ್ಮಾ ಕರಿಶೆಟ್ಟಿ, ಡಾ| ಶಮಾ ಬೆಲ್ಲದ, ಡಾ| ಆರ್‌.ಎಸ್‌. ಮುಧೋಳ, ಡಾ| ಕುಮಾರ ವಿಂಚುರಕರ, ಡಾ| ಶಿವಗೌಡ ಪಾಟೀಲ, ಡಾ| ಎ.ಪಿ. ಹೊಗಾಡೆ, ಡಾ| ಎನ್‌.ಆರ್‌. ಮುನವಳ್ಳಿ ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.