ಸ್ವಾರ್ಥಕ್ಕಾಗಿ ಕಾಂಗ್ರೆಸ್ ತೊರೆದಿಲ್ಲ : ಸಚಿವ ರಮೇಶ
Team Udayavani, May 27, 2020, 6:21 AM IST
ತೆಲಸಂಗ: ಸ್ವಾರ್ಥಕ್ಕಾಗಿ ಕಾಂಗ್ರೆಸ್ ಪಕ್ಷ ತೊರೆದಿಲ್ಲ. ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಾಂಗ್ರೆಸ್ನಿಂದ ಹೊರಬಂದೇವು ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಮಂಗಳವಾರ ಸಮೀಪದ ಕೊಟ್ಟಲಗಿ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, 2018ರ ಚುನಾವಣೆಯಲ್ಲಿ ಅಥಣಿ ಮತ್ತು ಕಾಗವಾಡ ಅಭ್ಯರ್ಥಿಗಳ ಪರವಾಗಿ ಅಕಾಡಕ್ಕಿಳಿದಾಗ ಇಲ್ಲಿ ಕಂಡದ್ದು ಬರದಿಂದ ರೈತರು ನಲಗುತ್ತಿದ್ದುದು. ಇದು ರಾಜಕಿಯ ಭಾಷಣ ಅಲ್ಲ. ಆದಷ್ಟು ಬೇಗ ಕೊಟ್ಟಲಗಿ ಬಾಗಕ್ಕೆ ನೀರು ತರುವ ಕೆಲಸ ಮಾಡುವೆ. ನೀರಾವರಿ ಸಚಿವನಾಗಿದ್ದಕ್ಕೆ ಸಾರ್ಥಕತೆ ಹೊಂದುತ್ತೇನೆ. 3 ವರ್ಷದಲ್ಲಿ ಮಹೇಶ ಕುಮಠಳ್ಳಿ ಕ್ಷೇತ್ರಕ್ಕೆ ನೀರಾವರಿಗಾಗಿ 2 ಸಾವಿರ ಕೋಟಿ ಕೊಡುತ್ತೇನೆ. ಬರುವ ಚುನಾವಣೆಯಲ್ಲಿ ಪ್ರಚಾರ ಮಾಡದೇ ಮಹೇಶ ಕುಮಠಳ್ಳಿ ಆಯ್ಕೆ ಆಗಬೇಕು. ಹಣ ಬಿಡುಗಡೆಗೊಳಿಸುವ ಜವಾಬ್ದಾರಿ ನನ್ನದು. ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಜವಾಬ್ದಾರಿ ನಿಮ್ಮದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ಮಹೇಶ ಕುಮಠಳ್ಳಿ ಮಾತನಾಡಿ, ಅಥಣಿ ತಾಲೂಕು ನೀರಾವರಿಗೊಳ್ಳಲು ರಮೇಶ ಜಾರಕಿಹೊಳಿಯೇ ಬರಬೇಕಾಯಿತು. ಬರದಿಂದ ನಲುಗಿದ ಜನರಿಗೆ ನೀರು ಕೊಡುವ ನೀವು ನಮ್ಮ ಪಾಲಿನ ಭಗೀರಥರು ಎಂದು ಬಣ್ಣಿಸಿದರು.
ತೆಲಸಂಗ ಜಿಪಂ ಸದಸ್ಯ ಗುರಪ್ಪ ದಾಶ್ಯಾಳ, ಕೊಕಟನೂರ ಜಿಪಂ ಸದಸ್ಯ ಸಿದ್ದಪ್ಪ ಮುದಕಣ್ಣವರ್ ಸೇರಿದಂತೆ ಸ್ಥಳೀಯ ಮತ್ತು ತಾಲೂಕು ಭಾಜಪ ಮುಖಂಡರು ಮತ್ತು ವಿವಿಧ ಇಲಾಖೆ ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್