ರಾಜ್ಯಸಭಾ ಟಿಕೆಟ್ ಕೇಳುವುದರಲ್ಲಿ ತಪ್ಪೇನಿಲ್ಲ, ನಾನೂ ಕೇಳ್ತಿನಿ: ಡಾ. ಪ್ರಭಾಕರ ಕೋರೆ
Team Udayavani, Jun 1, 2020, 2:49 PM IST
ಬೆಳಗಾವಿ: ಬಿಜೆಪಿ ಪಕ್ಷ ಸಿದ್ಧಾಂತದ ಮೇಲೆ ನಡೆದಿರುವ ಪಕ್ಷ. ಯಾರು ಉತ್ತಮ ಕೆಲಸ ಮಾಡುತ್ತಾರೋ ಅವರಿಗೆ ಟಿಕೆಟ್ ಸಿಗುತ್ತದೆ ಎಂದು ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕತ್ತಿ ಸಹೋದರರಿಂದ ರಾಜ್ಯಸಭಾ ಟಿಕೆಟ್ ಡಿಮ್ಯಾಂಡ್ ವಿಚಾರದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಸಭಾ ಟಿಕೆಟ್ ಕೇಳುವುದರಲ್ಲಿ ತಪ್ಪೇನಿಲ್ಲ. ನಾನೂ ಕೇಳುತ್ತೇನೆ, ಅವರೂ ಕೇಳ್ತಾರೆ. ರಾಜಕಾರಣದಲ್ಲಿ ಜತೆಗೆ ಇದ್ದವರು ಕೇಳಬಾರದು ಅಂತ ಏನಿಲ್ಲ ಎಂದರು.
ಬಿಜೆಪಿ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಪ್ರತಿಯೊಬ್ಬರೂ ಟಿಕೆಟ್ ಕೇಳುವ ಹಕ್ಕು ಇದೆ. ಪಕ್ಷ ಯಾರನ್ನು ನಿರ್ಧಾರ ಮಾಡ್ತಾರೆ ಅವರು ರಾಜ್ಯಸಭಾ ಸದಸ್ಯರಾಗುತ್ತಾರೆ ಎಂದ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯಿಲ್ಲ. ಯಾರೋ ಒಬ್ಬರಿಂದ ನಾಯಕತ್ವ ಬದಲಾವಣೆ ಸಾಧ್ಯವಿಲ್ಲ. ಮುಂದಿನ ಮೂರು ವರ್ಷ ಬಿ ಎಸ್ ಯಡಿಯೂರಪ್ಪ ಅವರೇ ರಾಜ್ಯದ ಸಿಎಂ ಆಗಿರ್ತಾರೆ. ಅವರೇ ಅವಧಿ ಪೂರ್ಣಗೊಳಿಸುತ್ತಾರೆ ಎಂದರು.
ರಮೇಶ ಕತ್ತಿಗೆ ಚಿಕ್ಕೋಡಿ ಲೋಕಸಭಾ ಟಿಕೆಟ್ ಕೈ ತಪ್ಪಲು ಪ್ರಭಾಕರ ಕೋರೆ, ಲಕ್ಷ್ಮಣ ಸವದಿ, ಜೊಲ್ಲೆ ಕಾರಣ ಆರೋಪಕ್ಕೆ ಉತ್ತರಿಸದ ಅವರು, ನಾನೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೆ, ಆದರೆ ನನಗೆ ರಾಜ್ಯಸಭೆ ಟಿಕೆಟ್ ಕೊಟ್ಟರು. ಜೊಲ್ಲೆಗೆ ಲೋಕಸಭಾ ಕ್ಷೇತ್ರದ ಟಿಕೆಟ್ ಕೋಟ್ಟರು. ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ