ಬರಿದಾಗುತ್ತಿದೆ ಕೃಷ್ಣೆ; ಮತ್ತೆ ಈ ವರ್ಷವೂ ಸಮಸ್ಯೆ?


Team Udayavani, May 1, 2020, 6:15 PM IST

ಬರಿದಾಗುತ್ತಿದೆ ಕೃಷ್ಣೆ; ಮತ್ತೆ ಈ ವರ್ಷವೂ ಸಮಸ್ಯೆ?

ಚಿಕ್ಕೋಡಿ: ಕೋವಿಡ್ 19 ಭೀತಿಯಿಂದ ಗಡಿ ಭಾಗದ ಜನ ತತ್ತರಿಸಿ ಹೋಗಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ಜೀವನಾಡಿ ಕೃಷ್ಣಾ ನದಿ ನೀರು ಖಾಲಿಯಾಗುತ್ತಿರುವುದು ಜನರಲ್ಲಿ ಹೊಸ ಆತಂಕ ಮೂಡಿಸಿದೆ. ಶೀಘ್ರ ಮಹಾರಾಷ್ಟ್ರದಿಂದ ನಾಲ್ಕು ಟಿಎಂಸಿ ನೀರು ಹರಿಸಿ ಬೇಸಿಗೆಯಲ್ಲಿ ಜನರ ದಾಹ ತೀರಿಸಬೇಕೆನ್ನುವ ಒತ್ತಾಯ ಕೇಳಿ ಬರಲಾಂಭಿಸಿದೆ.

ಕಳೆದ ವರ್ಷ ಏಪ್ರೀಲ್‌ ತಿಂಗಳಲ್ಲಿ ಕೃಷ್ಣಾ ನದಿ ಬತ್ತಿ ಬರಿದಾಗಿ ಬೆಳಗಾವಿ, ಬಾಗಲಕೋಟ ಹಾಗೂ ವಿಜಯಪೂರ ಜಿಲ್ಲೆಯ ಜನ, ಜಾನುವಾರುಗಳು ಕುಡಿಯಲು ನೀರು ಇಲ್ಲದೆ ಎರಡು ತಿಂಗಳು ಸಂಕಷ್ಟ ಎದುರಿಸಿದರು. ಈಗ ಮತ್ತೆ ಬೇಸಿಗೆ ಆರಂಭವಾಗಿದೆ. ನದಿಯಲ್ಲಿ ನೀರಿನ ಪ್ರಮಾಣ ಗಣನೀಯ ಇಳಿಕೆ ಕಂಡಿದೆ. ಹೀಗಾಗಿ ಕಳೆದ ವರ್ಷದ ಪರಿಸ್ಥಿತಿ ಮತ್ತೆ ಎದುರಾಗುವ ಆತಂಕ ಜನರಲ್ಲಿ ಮೂಡಿದೆ.

ನೀರಿನ ಪ್ರಮಾಣ ಕುಸಿಯುತ್ತಿರುವುದರಿಂದ ರೈತರು ಬೆಳೆದ ಬೆಳೆಗಳು ಕಮರಿ ಹೋಗುತ್ತಿದ್ದು, ಮೇವಿನ ಕೊರತೆ, ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಕೃಷ್ಣಾ ನದಿ ನೀರಿನ ಮೇಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಕಾಗವಾಡ, ರಾಯಬಾಗ ಮತ್ತು ಅಥಣಿ ತಾಲೂಕು ಅವಲಂಬಿತವಾಗಿವೆ. ನೆರೆಯ ಜಿಲ್ಲೆಗಳಾದ ಬಾಗಲಕೋಟ ಮತ್ತು ವಿಜಯಪೂರ ಜಿಲ್ಲೆಯ ಜನರು ಸಹ ನದಿ ನೀರನ್ನು ಅವಲಂಬಿಸಿದ್ದಾರೆ. ನದಿಯಲ್ಲಿ ಇರುವ ನೀರು ಹದಿನೈದು ದಿನಗಳವರಿಗೆ ಸಾಕಾಗಬಹುದು, ಅಷ್ಟರಲ್ಲಿ ಮಹಾರಾಷ್ಟ್ರದಿಂದ ದಿಂದ ನೀರು ಬಂದರೆ ಅನುಕೂಲ, ಇಲ್ಲವಾದರೇ ಮತ್ತೆ ಹನಿ ನೀರಿಗಾಗಿ ಜನ ಪರದಾಡುವ ಪ್ರಸಂಗ ಎದುರಾಗುವ ಸಂಭವ ಹೆಚ್ಚಿದೆ.

ನಾಲ್ಕು ಟಿಎಂಸಿ ನೀರು ಬಿಡಬೇಕು: ಪ್ರತಿ ವರ್ಷ ಬೇಸಿಗೆಯಲ್ಲಿ ಕೃಷ್ಣಾ ನದಿ ನೀರು ಖಾಲಿಯಾಗುತ್ತದೆ. ರಾಜ್ಯದ ಮೂರು ಜಿಲ್ಲೆಗಳು ನೀರಿಗಾಗಿ ಪರಿತಪಿಸುತ್ತವೆ. ಹೀಗಾಗಿ ಕರ್ನಾಟಕ ಸರ್ಕಾರ ಮತ್ತು ಮಹಾ ಸರ್ಕಾರ ನೀರಿನ ಒಡಂಬಡಿಕೆ ಮಾಡಿಕೊಂಡು ಬೇಸಿಗೆಯಲ್ಲಿ ನಾಲ್ಕು ಟಿಎಂಸಿ ನೀರು ಬಿಡಬೇಕು ಎಂದು ಗಡಿ ಭಾಗದ ರೈತರು ಒತ್ತಾಯಿಸಿದ್ದಾರೆ. ಕಾಳಮ್ಮವಾಡಿ ಜಲಾಶಯದಿಂದ ನೀರು ಹರಿಸಿ: ಗಡಿ ಭಾಗದ ದೂಧಗಂಗಾ ನದಿಯಲ್ಲಿ ಕಳೆದ ಹಲವು ದಿನಗಳಿಂದ ನೀರಿನ ಪ್ರಮಾಣ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಕಾಳಮ್ಮಾವಾಡಿ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ರೈತರು ಒತ್ತಾಯಿಸಿದ್ದಾರೆ.

ದೂಧಗಂಗಾ ನದಿಯ ನೀರಿನ ಮೇಲೆನಿಪ್ಪಾಣಿ ಮತ್ತು ಚಿಕ್ಕೋಡಿ ತಾಲೂಕಿನ ಸುಮಾರು 50 ಕ್ಕೂ ಹೆಚ್ಚು ಗ್ರಾಮಗಳು ಅವಲಂಬಿಸಿವೆ. ನದಿ ತೀರದ ಗ್ರಾಮಗಳು ಕುಡಿಯುವ ನೀರಿಗೆ ಬಳಸುತ್ತಾರೆ, ಅದಲ್ಲದೆ ಏತ ನೀರಾವರಿ ಯೋಜನೆಗಳು, ಗಂಗಾ ಕಲ್ಯಾಣ ಯೋಜನೆಗಳು, ವೈಯಕ್ತಿಕ ನಿರಾವರಿ ಯೋಜನೆಗಳಿಂದ ರೈತರು ಬಳಕೆ ಮಾಡಿಕೊಳ್ಳುತ್ತಾರೆ.

 

ಕೃಷ್ಣಾ ನದಿ ನೀರು ಶಾಶ್ವತ ಒಪ್ಪಂದಕ್ಕೆ ಪ್ರಯತ್ನ:  ಪ್ರತಿ ಬೇಸಿಗೆಯಲ್ಲಿ ರಾಜ್ಯದ ಗಡಿ ಭಾಗದ ಜನ ನೀರಿನ ಸಮಸ್ಯೆ ಎದುರಿಸುತ್ತಾರೆ. ಹೀಗಾಗಿ ಕೊಯ್ನಾ ಹಾಗೂ ವಿವಿಧ ಡ್ಯಾಂಗಳ ಮೂಲಕ ಬೇಸಿಗೆಯ ಏಪ್ರೀಲ್‌ ಮತ್ತು ಮೇ ತಿಂಗಳಲ್ಲಿ ನಾಲ್ಕು ಟಿಎಂಸಿ ನೀರು ಹರಿಸಲು ಮಹಾ ಸರ್ಕಾರದ ಜೊತೆ ರಾಜ್ಯ ಸರ್ಕಾರ ಶಾಶ್ವತ ಒಪ್ಪಂದ ಮಾಡಿಕೊಳ್ಳಲು ಚಿಂತನೆ ನಡೆದಿದೆ. ಅದನ್ನು ಶೀಘ್ರವಾಗಿ ಈಡೇರಿಸಲು ಸಿಎಂ ಹಾಗೂ ನೀರಾವರಿ ಸಚಿವರ ಗಮನಕ್ಕೆ ತಂದು ನೀರು ಹರಿಸಲು ಪ್ರಯತ್ನ ಮಾಡಲಾಗುತ್ತದೆ.-ಮಹಾಂತೇಶ ಕವಟಗಿಮಠ, ವಿಧಾನ ಪರಿಷತ್‌ ಮುಖ್ಯಸಚೇತಕ, ಕರ್ನಾಟಕ ಸರ್ಕರ

 

­-ಮಹಾದೇವ ಪೂಜೇರಿ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.