ಸಾಹಿತ್ಯದಲ್ಲಿ ನಾಟಕ ರಚನೆ ಕಷ್ಟದ ಕೆಲಸ

ಡಾ| ನಿರ್ಮಲಾ ಬಟ್ಟಲ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯ ನಾಟಕ ಅಭಿನಯದಲ್ಲಿ ಮುಖ್ಯವಾದದ್ದು

Team Udayavani, Jan 29, 2022, 6:14 PM IST

ಸಾಹಿತ್ಯದಲ್ಲಿ ನಾಟಕ ರಚನೆ ಕಷ್ಟದ ಕೆಲಸ

ಬೆಳಗಾವಿ: ನಾಟಕ ರಚನೆ ಸಾಹಿತ್ಯದಲ್ಲಿ ಬಹಳ ಕಷ್ಟಕರ ಕೆಲಸ. ಸಾಹಿತಿಯಾದವನಿಗೆ ಸಾಹಿತ್ಯದ ಘನತ್ವ ಮತ್ತು ಲಘುತ್ವದ ಎರಡು ಕಲ್ಪನೆಗಳು ಇರಬೇಕು. ಆಗ ಮಾತ್ರ ಸಾಹಿತ್ಯ ರಸಯುಕ್ತವಾಗುವುದು ಎಂದು ಸಾಹಿತಿ ಡಾ| ಬಾಳಾಸಾಹೇಬ ಲೋಕಾಪುರ ಹೇಳಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ಮತ್ತು ಸಾಹಿತ್ಯ ಕಲಾ ವೇದಿಕೆ ಕನ್ನಡ ಮಹಿಳಾ ಸಂಘದ ಆಶ್ರಯದಲ್ಲಿ ಶುಕ್ರವಾರ ಸಾಹಿತಿ ರಂಜನಾ ನಾಯಿಕ ಬರೆದ “ಕಾರಂತ್‌ ನೆನಪಿನ ಕಾರವಾನ್‌’ ಮತ್ತು ‘ಇಪ್ಪತ್ತೂಂದು ಬೆಳಕು ನೆರಳಿನಾಟ’ ನಾಟಕಗಳ ಸಂಗ್ರಹದ ಕೃತಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಲೇಖಕಿಯರ ಸಂಘದ ಅಧ್ಯಕ್ಷೆ ಹೇಮಾವತಿ ಸೊನೋಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿ. ಇತ್ತೀಚಿನ ದಿನಗಳಲ್ಲಿ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಮಹಿಳೆಯರು ತಮ್ಮದೇ ಆದ ಛಾಪು ಒತ್ತಿದ್ದಾರೆ. ಕೇವಲ ಕವನ ಸಂಕಲನ, ಕಥೆ, ಕಾದಂಬರಿ ಎನ್ನದೇ ನಾಟಕಗಳ ಸಂಗ್ರಹಕ್ಕೂ ಸಹಿತ ಪುಸ್ತಕ ರೂಪ ಕೊಡುತ್ತಿರುವುದು ಶ್ಲಾಘನೀಯ. ಇದು ಹೀಗೆಯೇ ಮುಂದುವರಿಯಲಿ ಎಂದು ಅಶಿಸಿದರು.

ನಾಟಕ ಸಂಗ್ರಹದ ಪರಿಚಯ ಮಾಡಿ ಮಾತನಾಡಿದ ಸಾಹಿತಿ ಡಾ| ಗುರುದೇವಿ ಹುಲೆಪ್ಪನವರಮಠ, ನಾಟಕಗಳಲ್ಲಿ ಸ್ವಾಮಿ ಅಯ್ಯಪ್ಪನ ಜನ್ಮ ವೃತ್ತಾಂತ, ಸೀತಾ ಪರಿತ್ಯಾಗ, ಶ್ರೀ ಕೃಷ್ಣನ ಮಹಿಮೆ ಇವುಗಳ ಕುರಿತು ವೈಜ್ಞಾನಿಕ ಕಾರಣ ಕೊಡುತ್ತ ಕೃತಿಯಲ್ಲಿ ಅಡಗಿರುವ ಮಾಹಿತಿ ವಿಶ್ಲೇಷಿಸಿದರು.

ಕೃತಿ ಪರಿಚಯ ಮಾಡಿದ ಸಾಹಿತಿ ಡಾ| ನಿರ್ಮಲಾ ಬಟ್ಟಲ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯ ನಾಟಕ ಅಭಿನಯದಲ್ಲಿ ಮುಖ್ಯವಾದದ್ದು. ಬೆಳಕಿನಲ್ಲಿ ನೆರಳಿನ ಮೂಲಕ ಸನ್ನಿವೇಶ ಸೃಷ್ಟಿಸುವುದರಿಂದ ಪ್ರೇಕ್ಷಕರಿಗೆ ಹೆಚ್ಚಿನ ವಿಷಯ ಜ್ಞಾನ ಅತ್ಯಂತ ಕಡಿಮೆ ಅವಧಿಯಲ್ಲಿ ತಿಳಿಸಬಹುದು ಎಂದು ಅಭಿಪ್ರಾಯಪಟ್ಟರು.

“ಕಾರಂತ್‌ ನೆನಪಿನ ಕಾರವನ್‌’ ಕೃತಿ ಪರಿಚಯಿಸಿದ ಡಾ| ಶೋಭಾ ನಾಯಿಕ ಮಾತನಾಡಿ, ಕಡಲ ತೀರ ಭಾರ್ಗವ ಡಾ| ಕಾರಂತರ ಆತ್ಮಚರಿತ್ರೆ ಜೀವನದ ಪಯಣ ಅದ್ಭುತವಾಗಿ ವರ್ಣಿಸಲಾಗಿದೆ. ಹಿರಿಯ ಮತ್ತು ಕಿರಿಯ ಸಾಹಿತಿಗಳ ಒಡನಾಟದಲ್ಲಿ ಕೃತಿ ರಚನೆಕಾರರು ರಚಿಸಿದ ಲೇಖನಗಳು ಅದ್ಭುತವಾಗಿ ಮೂಡಿ ಬಂದಿವೆ ಎಂದರು.

ಕೃತಿಕಾರರಾದ ರಂಜನಾ ನಾಯಿಕ ಮಾತನಾಡಿ, ಸಾಹಿತ್ಯ ರಂಜನೀಯಗೊಳಿಸುವಲ್ಲಿ ಹಿರಿಯರ ಮಾರ್ಗದರ್ಶನ ಪಡೆದು ರಚಿಸಲಾಗಿರುವ ನನ್ನ ಕೃತಿಗಳು ಓದುಗರನ್ನು ನಿಶ್ಚಿತವಾಗಿಯೂ ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಲೇಖಕಿಯರ ಸಂಘದ ಸದಸ್ಯೆ ರೋಹಿಣಿ ಯಾದವಾಡ ತಮ್ಮ ತಂದೆ ಶಿವಪುತ್ರ ಮತ್ತು ತಾಯಿ ಶಶಿಕಲಾ ಯಾದವಾಡ ಹೆಸರಿನಲ್ಲಿ 25 ಸಾವಿರ ರೂ. ದತ್ತಿನಿಧಿ ಸಂಘಕ್ಕೆ ನೀಡಿದರು.

ಈ ವೇಳೆ ಡಾ| ಕೆ.ಆರ್‌. ಸಿದ್ದಗಂಗಮ್ಮ, ಪಾರ್ವತಿ ಪಿಟಗಿ, ಜ್ಯೋತಿ ಮಾಳಿ, ಸುಧಾ ಪಾಟೀಲ, ಸುನಿತಾ ಸೊಲ್ಲಾಪುರ, ಪ್ರೇಮಾ ಪಾನಶೆಟ್ಟಿ, ಉಮಾ ಅಂಗಡಿ, ಆಶಾ ಯಮಕನಮರಡಿ, ವೀರಭದ್ರ ಅಂಗಡಿ ಸೇರಿದಂತೆ ಇತರರಿದ್ದರು. ಹಮೀದಾ ಬೇಗಂ ದೇಸಾಯಿ ಸ್ವಾಗತಿಸಿದರು. ಇಂದಿರಾ ಮೋಟೆಬೆನ್ನೂರ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ ರಾಜನಂದಾ ಘಾರ್ಗಿ ನಿರೂಪಿಸಿದರು. ವಿದ್ಯಾ ಹುಂಡೇಕಾರ ವಂದಿಸಿದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.